AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರ ಗಮನಕ್ಕೆ: ಸಿಲಿಕಾನ್ ಸಿಟಿಯಲ್ಲಿ ಈ 3 ದಿನ ಕಾವೇರಿ ನೀರು ಸಿಗಲ್ಲ, ಯಾವಾಗಿಂದ?

ಕಾವೇರಿ ನೀರು ಸರಬರಾಜು ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 3 ದಿನ ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಚಿತವಾಗಿ ಮೂರು ದಿನಗಳ ಕಾಲ ನೀರು ಸಂಗ್ರಹಿಸಿಟ್ಟುಕೊಳ್ಳಲು ಜಲ ಮಂಡಳಿ ಮನವಿ ಮಾಡಿದೆ. ಹಾಗಾದ್ರೆ ಯಾವಾಗಿಂದ ಕಾವೇರಿ ನೀರು ಸಿಗಲ್ಲ ಎನ್ನುವ ವಿವರ ಇಲ್ಲಿದೆ.

ಬೆಂಗಳೂರಿಗರ ಗಮನಕ್ಕೆ: ಸಿಲಿಕಾನ್ ಸಿಟಿಯಲ್ಲಿ ಈ 3 ದಿನ ಕಾವೇರಿ ನೀರು ಸಿಗಲ್ಲ, ಯಾವಾಗಿಂದ?
ಪ್ರಾತಿನಿಧಿಕ ಚಿತ್ರ
ಶಾಂತಮೂರ್ತಿ
ಶಾಂತಮೂರ್ತಿ | Edited By: |

Updated on: Sep 12, 2025 | 4:16 PM

Share

ಬೆಂಗಳೂರು, (ಸೆಪ್ಟೆಂಬರ್ 12): ಕಾವೇರಿ ನೀರು ಸರಬರಾಜು ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 15, 16 ಮತ್ತು 17 ರಂದು ಬೆಂಗಳೂರಿನಲ್ಲಿ (Bengaluru) ಕಾವೇರಿ ನೀರು (Cauvery water) ಪೂರೈಕೆ ಸ್ಥಗಿತವಾಗಲಿದೆ. ಒಟ್ಟು 5 ಹಂತಗಳಲ್ಲಿ ಸುಮಾರು 60 ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತವಾಗಲಿದೆ. ಹೀಗಾಗಿ ಸಾರ್ವಜನಿಕರು ಮುಂಚಿತವಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಜಲಮಂಡಳಿ ಮನವಿ ಮಾಡಿದೆ. ಈ ಕುರಿತು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮೋಹನ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌ ಮಾಹಿತಿ ನೀಡಿದ್ದು, ” ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಸೆಪ್ಟೆಂಬರ್‌ 15, 16 ಮತ್ತು 17 ರಂದು ಸ್ಥಗಿತಗೊಳಿಸಲಾಗುತ್ತಿದೆ. ಈ ಜಲರೇಚಕ ಯಂತ್ರಾಗಾರಗಳ ಸ್ಥಗಿತತೆಯಿಂದ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಸಾರ್ವಜನಿಕರು ಮುಂಚಿತವಾಗಿ ನೀರು ಸಂಗ್ರಹಿಸಿಟ್ಟುಕೊಳ್ಳುಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಒಂದು ತಿಂಗಳ ವಾಟರ್​​ ಬಿಲ್​ ಇಷ್ಟೊಂದಾ? ರೊಚ್ಚಿಗೆದ್ದ ಬಾಡಿಗೆದಾರ, ಪೋಸ್ಟ್‌ ವೈರಲ್​​

ಎಲ್ಲೆಲ್ಲಿ ಯಾವಾಗ ನೀರು ಬಂದ್‌?

  • ಕಾವೇರಿ 5ನೇ ಹಂತ – ಸೆಪ್ಟೆಂಬರ್‌ 15 ರ ಬೆಳಗ್ಗೆ 1 ರಿಂದ ಸೆಪ್ಟೆಂಬರ್ 17 ರ ಮಧ್ಯಾಹ್ನ 1ರವರೆಗೆ ಒಟ್ಟು 60 ಗಂಟೆಗಳು.
  • ಕಾವೇರಿ ಹಂತ 1, 2, 3, 4 ರಲ್ಲಿ – ಸೆಪ್ಟೆಂಬರ್ 16 ರ ಬೆಳಗ್ಗೆ 6ರಿಂದ ಸೆಪ್ಟೆಂಬರ್ 17 ರ ಬೆಳಗ್ಗೆ 6ರವರೆಗೆ ಒಟ್ಟು 24 ಗಂಟೆಗಳು.

ಏನು ಕಾಮಗಾರಿ?

ಬೆಂಗಳೂರು ನಗರದ ಜನತೆಗೆ ಯಾವುದೇ ಅಡೆತಡೆಯಿಲ್ಲದೇ ಕುಡಿಯುವ ನೀರನ್ನು ಸರಬರಾಜು ಮಾಡಲು, ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಗಾರಗಳು ಮತ್ತು ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸುಸ್ಥಿತಿಯಲ್ಲಿಡುವ ಉದ್ದೇಶದಿಂದ ಜಲಮಂಡಳಿಯ ವಿವಿಧೆಡೆ ನಿಯಮಿತ ತುರ್ತು ನಿರ್ವಹಣೆಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ