AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ರೋಗಿಗಳ ನರಳಾಟ; ಪೊಲೀಸರೇ ಬಂದರೂ ನಿಮ್ಹಾನ್ಸ್ ವೈದ್ಯರು ಜಸ್ಟ್​ ಡೋಂಟ್​ ಕೇರ್!

nimhans: ಆತಂಕದ ವಿಷಯವೆಂದರೆ ತಮ್ಮಲ್ಲಿ ಬೆಡ್ ಖಾಲಿ ಇಲ್ಲವೆಂದು, ಬೇರೆ ಆಸ್ಪತ್ರೆಗಾದರೂ ರೆಫರ್ ಮಾಡಿ ಬರೆದುಕೊಡಿ ಎಂದರೂ ವೈದ್ಯರು ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ವಿಷಯ ತಿಳಿದು ಮಾಧ್ಯಮಗಳು ನಿಮ್ಹಾನ್ಸ್‌ ಆಸ್ಪತ್ರೆಯತ್ತ ಧಾವಿಸುತ್ತಿದ್ದಂತೆ ಬೇರೆ ಆಸ್ಪತ್ರೆಗೆ ರೆಫರ್ ಮಾಡಿ, ಕೈತೊಳೆದುಕೊಂಡಿದ್ದಾರೆ.

ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ರೋಗಿಗಳ ನರಳಾಟ; ಪೊಲೀಸರೇ ಬಂದರೂ ನಿಮ್ಹಾನ್ಸ್ ವೈದ್ಯರು ಜಸ್ಟ್​ ಡೋಂಟ್​ ಕೇರ್!
ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ರೋಗಿಗಳ ನರಳಾಟ; ಪೊಲೀಸರೇ ಬಂದರೂ ನಿಮ್ಹಾನ್ಸ್ ವೈದ್ಯರು ಜಸ್ಟ್​ ಡೋಂಟ್​ ಕೇರ್!
TV9 Web
| Edited By: |

Updated on:Feb 02, 2022 | 8:01 AM

Share

ಬೆಂಗಳೂರು: ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಬೆಡ್ ಸಿಗದೇ ರೋಗಿಗಳು ನರಳಾಡುತ್ತಿದ್ದಾರೆ. ನಿನ್ನೆ ರಾತ್ರಿ 8 ಗಂಟೆಗೆ ಆಸ್ಪತ್ರೆಗೆ ಬಂದರೂ ಚಿಕಿತ್ಸೆ ಸಿಕ್ಕಿಲ್ಲ. ಆ್ಯಂಬುಲೆನ್ಸ್‌ನಲ್ಲಿಯೇ ಗಂಟೆಗಟ್ಟಲೇ ಮಲಗಿದ್ದಾರೆ ಅಪಘಾತದಲ್ಲಿ ಗಾಯಗೊಂಡಿದ್ದ ಗುರುಬದನ್ ಎಂಬ ವ್ಯಕ್ತಿ. ನಡೆದುಕೊಂಡು ಹೋಗುತ್ತಿದ್ದ ಗುರುಬದನ್‌ಗೆ ವಾಹನ ಗುದ್ದಿ ಗಾಯಗೊಂಡಿದ್ದರು (injury). ಜೀವನ್‌ಭೀಮಾ ನಗರ ಟ್ರಾಫಿಕ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಗುರುಬದನ್‌ಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿತ್ತು. ತಲೆಗೆ ಪೆಟ್ಟಾಗಿದ್ದರಿಂದ ಅಲ್ಲಿನ ವೈದ್ಯರು ನಿಮ್ಹಾನ್ಸ್‌ಗೆ ರೆಫರ್ (nimhans) ಮಾಡಿದ್ದರು. ಗಾಯಾಳು ಗುರುಬದನ್‌ರನ್ನು ರಾತ್ರಿ 8 ಗಂಟೆಗೆ ಆ್ಯಂಬುನೆಲ್ಸ್‌ನಲ್ಲಿ ನಿಮ್ಹಾನ್ಸ್‌ಗೆ ಕರೆತರಲಾಗಿತ್ತು (emergency). ನಡುರಾತ್ರಿ 1 ಗಂಟೆ ಕಳೆದ್ರೂ ಗಾಯಾಳುವನ್ನು, ದಾಖಲಿಸಿಕೊಂಡು ಚಿಕಿತ್ಸೆ ನೀಡಿಲ್ಲ ನಿಮ್ಹಾನ್ಸ್‌ ಸಿಬ್ಬಂದಿ. ಬೆಡ್ ಖಾಲಿ ಇಲ್ಲವೆಂದು ಹೊರಗಡೆಯೇ ಮಲಗಿಸಿದ್ದಾರೆ.

ಆತಂಕದ ವಿಷಯವೆಂದರೆ ತಮ್ಮಲ್ಲಿ ಬೆಡ್ ಖಾಲಿ ಇಲ್ಲವೆಂದು, ಬೇರೆ ಆಸ್ಪತ್ರೆಗಾದರೂ ರೆಫರ್ ಮಾಡಿ ಬರೆದುಕೊಡಿ ಎಂದರೂ ವೈದ್ಯರು ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ವಿಷಯ ತಿಳಿದು ಮಾಧ್ಯಮಗಳು ನಿಮ್ಹಾನ್ಸ್‌ ಆಸ್ಪತ್ರೆಯತ್ತ ಧಾವಿಸುತ್ತಿದ್ದಂತೆ ಬೇರೆ ಆಸ್ಪತ್ರೆಗೆ ರೆಫರ್ ಮಾಡಿ, ಕೈತೊಳೆದುಕೊಂಡಿದ್ದಾರೆ. ಮುಂದೆ, ಗಾಯಾಳು ಗುರುಬದನ್‌ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರೆಫರ್ ಮಾಡಿದ್ದರು.

ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿನ ಸಾಮಾನ್ಯ ಜನರ ನೋವು ಕೇಂದ್ರ ಸರ್ಕಾರಕ್ಕೆ ಕೇಳಿಸ್ತಿಲ್ಲ: ಏನಾಗಿತ್ತೆಂದರೆ ನಿಮ್ಹಾನ್ಸ್‌ ಆಸ್ಪತ್ರೆಯತ್ತ ನಿನ್ನೆ ಸೋಮವಾರ ಒಂದರ ಹಿಂದೆ ಒಂದರಂತೆ 8 ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಬಂದಿದ್ದವು. ಆದರೆ ಆ್ಯಂಬುಲೆನ್ಸ್ ನಲ್ಲಿದ್ದ ಯಾರಿಗೂ ಚಿಕಿತ್ಸೆ ನೀಡದೇ ಆ್ಯಂಬುಲೆನ್ಸ್ ನಲ್ಲಿಯೇ ಇರಿಸಲಾಗಿತ್ತು. ವಿಕ್ಟೋರಿಯಾಗೆ ಹೋದ್ರು ಇಲ್ಲಿಗೇ ಕಳುಹಿಸ್ತಾರೆ. ಇಲ್ಲಿ ಬಂದ್ರೆ ಯಾರೂ ಕೇರ್ ಕೂಡ ಮಾಡೋದಿಲ್ಲ ಎಂದು ನಿಮ್ಹಾನ್ಸ್‌ ಆಸ್ಪತ್ರೆಯಲ್ಲಿನ ಅವ್ಯವಸ್ಥೆಯ ವಿರುದ್ಧ ಸಂಬಂಧಿಕರು ಆಕ್ರೋಶ ಹೊರಹಾಕಿದ್ದಾರೆ. ಸಾಮಾನ್ಯ ಜನರ ನೋವು ಕೇಂದ್ರ ಸರ್ಕಾರಕ್ಕೆ ಕೇಳಿಸ್ತಿಲ್ಲ. ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಪ್ರತಿನಿತ್ಯ ಇದೇ ಗೋಳು ಕಂಡುಬರುತ್ತದೆ. ಆಸ್ಪತ್ರೆಯ ಬಾಗಿಲಲ್ಲಿಯೇ ಮಲಗಿ, ಪ್ರಾಣ ಬಿಡ್ತಿರುವ ರೋಗಿಗಳ ಸಂಖ್ಯೆಯೂ ಹೆಚ್ಚಾಗಿದೆ.

ಇನ್ನು, ಆ್ಯಂಬುಲೆನ್ಸ್‌ನಲ್ಲೇ ಮಲಗಿ ನರಳುತ್ತಿದ್ದರೂ ವೈದ್ಯರು ನಿರ್ಲಕ್ಷ್ಯ ವಹಿಸುತ್ತಾರೆ. ಬೇರೆ ಆಸ್ಪತ್ರೆಗೆ ರೆಫರ್ ಮಾಡಿ ಕಳುಹಿಸಲೂ ಯಾರೂ ದಿಕ್ಕಿಲ್ಲ. ಅಪಘಾತವಾದ ವ್ಯಕ್ತಿಯ ಜೊತೆಗೆ ಪೊಲೀಸರೇ ಬಂದರೂ ನಿಮ್ಹಾನ್ಸ್ ಆಸ್ಪತ್ರೆಯ ವೈದ್ಯರು ಜಸ್ಟ್​ ಡೋಂಟ್​ ಕೇರ್ ಅನ್ನುತ್ತಿದ್ದಾರೆ ಎಂದು ಗಾಯಾಳು ಗುರುಬದನ್ ನರಳಾಟ ಕಂಡು ಸಂಬಂಧಿಕರು ಕಣ್ಣೀರು ಸುರಿಸುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Nimhans Hospital: ಚಿಕಿತ್ಸೆಗೆ 8ಕ್ಕೂ ಹೆಚ್ಚು ಆ್ಯಂಬುಲೆನ್ಸ್‌ಗಳಲ್ಲಿ ಕಾದ ರೋಗಿಗಳು

Also Read: Bengaluru City Police hiring: ಬೆಂಗಳೂರು ಪೊಲೀಸ್​ ಸೈಬರ್ ಕ್ರೈಂ ಲೋಕದಲ್ಲಿ ಭಾರೀ ಉದ್ಯೋಗಾವಕಾಶಗಳು!

Also Read: ಕೈ ತುಂಬ ಸಂಬಳ ತರುವ ಕೆಲಸ ಬಿಟ್ಟು ಒಂದು ವರ್ಷದಲ್ಲಿ ಏಕಾಂಗಿಯಾಗಿ ಬಾವಿ ತೋಡಿ ಬಂಗಾರ ಬೆಳೆದ ಎಂಟೆಕ್ ಪದವೀಧರ!

Published On - 7:38 am, Wed, 2 February 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ