AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹಲವು ಆಸ್ಪತ್ರೆಗಳು ಆಂಟಿಬಯೋಟಿಕ್​ ನೀತಿ ಅನಷ್ಠಾನಗೊಳಿಸಿಲ್ಲ: ವರದಿ

Bengaluru: ಬೆಂಗಳೂರಿನ ನೂರಾರು ಆಸ್ಪತ್ರೆಗಳಲ್ಲಿ, ಕೇವಲ 80 ಆಸ್ಪತ್ರೆಗಳು ಮಾತ್ರ ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ ಮಾನ್ಯತೆ ಪಡೆದಿವೆ. ಈ ಆಸ್ಪತ್ರೆಗಳು ಕಡ್ಡಯಾವಾಗಿ ಆಂಟಿಬಯಾಟಿಕ್​​​ ಕಾರ್ಯಕ್ರಮವನ್ನು ಅನುಸರಿಸುತ್ತಿವೆ. ಇನ್ನು ಹಲವು ಆಸ್ಪತ್ರೆಗಳಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿಲ್ಲ.

ಬೆಂಗಳೂರಿನ ಹಲವು ಆಸ್ಪತ್ರೆಗಳು ಆಂಟಿಬಯೋಟಿಕ್​ ನೀತಿ ಅನಷ್ಠಾನಗೊಳಿಸಿಲ್ಲ: ವರದಿ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Aug 29, 2023 | 12:39 PM

Share

ಬೆಂಗಳೂರು: ಆಂಟಿಬಯಾಟಿಕ್​​ಗಳ (Antibiotic) ಬೇಕಾಬಿಟ್ಟಿ ಬಳಕೆಯಿಂದ ರೋಗಾಣುಗಳು ಔಷಧಿ-ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇದನ್ನು ತಡೆಗಟ್ಟಲು ಬೆಂಗಳೂರು ನಗರದ ಕೆಲ ಆಸ್ಪತ್ರೆಗಳು ಆಂಟಿಬಯಾಟಿಕ್ ಬಳಕೆ ಮೇಲೆ ತೀವ್ರ ನಿಗಾ ಇಡುವ ಕಾರ್ಯಕ್ರಮಗಳನ್ನು ಅನುಸರಿಸುತ್ತಿವೆ. ಬೆಂಗಳೂರಿನ ನೂರಾರು ಆಸ್ಪತ್ರೆಗಳಲ್ಲಿ, ಕೇವಲ 80 ಆಸ್ಪತ್ರೆಗಳು ಆಸ್ಪತ್ರೆಗಳು ಮತ್ತು ಆರೋಗ್ಯ ಸೇವೆ ಒದಗಿಸುವವರ ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ (NABH) ಮಾನ್ಯತೆ ಪಡೆದಿವೆ. ಈ ಆಸ್ಪತ್ರೆಗಳು ಕಡ್ಡಯಾವಾಗಿ ಈ ಕಾರ್ಯಕ್ರಮವನ್ನು ಅನುಸರಿಸುತ್ತಿವೆ. ಇನ್ನು ಹಲವು ಆಸ್ಪತ್ರೆಗಳಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿಲ್ಲ.

ಈ ಕಾರ್ಯಕ್ರಮವನ್ನು ಅನುಸರಿಸುತ್ತಿರುವ ಆಸ್ಪತ್ರೆಗಳು ಕಡ್ಡಾಯವಾಗಿ ಆಂಟಿಬಯೋಟಿಕ್​ ಪಾಲಿಸಿಯನ್ನು ಹೊಂದಿರಬೇಕು. ಯಾವ ಆ್ಯಂಟಿಬಯೋಟಿಕ್‌ಗಳನ್ನು ಬಳಸಬಹುದು, ಯಾವುದನ್ನು ನಿರ್ಬಂಧಿಸಲಾಗಿದೆ ಮತ್ತು ಶಸ್ತ್ರಚಿಕಿತ್ಸೆಗಳಲ್ಲಿ ಸೋಂಕು ತಡೆಗಟ್ಟಲು ಯಾವುದನ್ನು ಬಳಸಬಹುದು ಎಂಬುದನ್ನು ಪಾಲಿಸಿ ತಿಳಿಸುತ್ತದೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR), ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (CDC) ಇತ್ಯಾದಿಗಳ ಶಿಫಾರಸುಗಳ ಆಧಾರದ ಮೇಲೆ ಅನೇಕ ಆಸ್ಪತ್ರೆಗಳು ತಮ್ಮ ಆಂಟಿಬಯಾಟಿಕ್​​ ಪಾಲಿಸಿಯನ್ನು ಅಭಿವೃದ್ಧಿಪಡಿಸುತ್ತಿವೆ. ಆದರೆ ಆಸ್ಪತ್ರೆಗಳು ತಮ್ಮದೇ ಆದ ಆಂಟಿಬಯೋಗ್ರಾಮ್ ಅನ್ನು ಆಧರಿಸಿ ಪಾಲಿಸಿಯನ್ನು ಅಭಿವೃದ್ಧಿಪಡಿಸಬೇಕೆಂದು ಎನ್​​ಎಬಿಹೆಚ್​​ ಶಿಫಾರಸು ಮಾಡಿದೆ.

ಇದನ್ನೂ ಓದಿ: ಮೂತ್ರಕೋಶದ ಕ್ಯಾನ್ಸರ್​ ಲಕ್ಷಣಗಳೇನು? ಕಾರಣ ಮತ್ತು ಚಿಕಿತ್ಸೆ ಬಗ್ಗೆ ಇಲ್ಲಿದೆ ಮಾಹಿತಿ

ನಮ್ಮ ಆಸ್ಪತ್ರೆಯಲ್ಲಿ ಶೇಕಡಾ 30 ರಷ್ಟು ರೋಗಿಗಳು ಆಂಟಿಬಯಾಟಿಕ್​ ಅನ್ನು ವಿರೋಧಿಸುತ್ತಿದ್ದಾರೆ. ಹೀಗಾಗಿ ನಾವು ಅದನ್ನು ಸ್ವಲ್ಪ ಸಮಯದವರೆಗೆ ಬಳಸುವುದಿಲ್ಲ. ಆದರೆ ರೋಗ ಮುಂದಿನ 48 ಗಂಟೆಗಳಲ್ಲಿ ಉಲ್ಬಣಗೊಂಡಾಗ ಆಂಟಿಬಯೋಟಿಕ್​ ನೀಡುವುದು ಅನಿವಾರ್ಯ ಎಂದು ಸಾಂಕ್ರಾಮಿಕ ರೋಗ ತಜ್ಞ ಡಾ ಜಾನ್ ಪಾಲ್ ಹೇಳಿದರು.

ಕೊರೊನಾ ಸಂಬಂಧಿ ಸಾವು ಪ್ರಕರಣದಲ್ಲಿ ಆಸ್ಪತ್ರೆಗೆ ದಾಖಲಾದ ರೋಗಿಗಳಲ್ಲಿ ಆ್ಯಂಟಿಬಯೋಟಿಕ್​ ಬಳಕೆ ಪ್ರಮಾಣ ಶೇ 1.34 ರಷ್ಟು ಹೆಚ್ಚಿದೆ ಎಂದು ಇತ್ತೀಚಿನ ಸಂಶೋಧನೆಯಲ್ಲಿ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:37 pm, Tue, 29 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ