AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಬಳ್ಳಾಪುರದಲ್ಲಿ ಸರ್ಕಾರದ ಸಾಧನಾ ಸಮಾವೇಶ: ಬೆಂಗಳೂರು ಸಂಚಾರಿ ಪೊಲೀಸ್ ಮಾರ್ಗಗಳಲ್ಲಿ ಮಾಡಿರುವ ತಾತ್ಕಾಲಿಕ ಬದಲಾವಣೆಗಳು ನಿಮಗೆ ಗೊತ್ತಿರಲಿ

ಸಂಚಾರಿ ಪೊಲೀಸ್ ಮಾಡಿರುವ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡರೆ ಟ್ರಾಫಿಕ್ ಜಾಮ್ ಗಳಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಕಮ್ಮಿಯಾಗುತ್ತದೆ ಮತ್ತು ಸಮಾವೇಶದಲ್ಲಿ ಪಾಲ್ಗೊಳ್ಳಲು ಹೋಗಲಿಚ್ಛಿಸುವವರು ಹೆಚ್ಚಿನ ಅಡೆತಡೆಗಳಿಲ್ಲದೆ ಸ್ಥಳವನ್ನು ತಲುಪಬಹುದಾಗಿದೆ.

ದೊಡ್ಡಬಳ್ಳಾಪುರದಲ್ಲಿ ಸರ್ಕಾರದ ಸಾಧನಾ ಸಮಾವೇಶ: ಬೆಂಗಳೂರು ಸಂಚಾರಿ ಪೊಲೀಸ್ ಮಾರ್ಗಗಳಲ್ಲಿ ಮಾಡಿರುವ ತಾತ್ಕಾಲಿಕ ಬದಲಾವಣೆಗಳು ನಿಮಗೆ ಗೊತ್ತಿರಲಿ
ಬಿಜೆಪಿ ಜನಸ್ಪಂದನ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧವಾಗಿದೆ
TV9 Web
| Edited By: |

Updated on: Sep 10, 2022 | 12:53 AM

Share

ಬೆಂಗಳೂರು: ರಾಜ್ಯ ಸರ್ಕಾರದಿಂದ (state government) ಸಾಧನಾ ಸಮಾವೇಶ ಹಿನ್ನಲೆಯಲ್ಲಿ ಬೆಂಗಳೂರು ಸಂಚಾರಿ ಪೊಲೀಸ್ (traffic police) ವಿಭಾಗ ನಗರದ ಕೆಲ ಮಾರ್ಗಗಳಲ್ಲಿ ತಾತ್ಕಾಲಿಕ ಬದಲಾವಣೆಗಳನ್ನು ಮಾಡಿದೆ. ಸಮಾವೇಶ ದೊಡ್ಡಬಳ್ಳಾಪುರದಲ್ಲಿ (Doddaballapura) ಇಂದು (ಶನಿವಾರ) ನಡೆಯಲಿದೆ. ಸಂಚಾರಿ ಪೊಲೀಸ್ ಮಾಡಿರುವ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡರೆ ಟ್ರಾಫಿಕ್ ಜಾಮ್ ಗಳಲ್ಲಿ ಸಿಲುಕಿಕೊಳ್ಳುವ ಸಾಧ್ಯತೆ ಕಮ್ಮಿಯಾಗುತ್ತದೆ ಮತ್ತು ಸಮಾವೇಶದಲ್ಲಿ ಪಾಲ್ಗೊಳ್ಳಲು ಹೋಗಲಿಚ್ಛಿಸುವವರು ಹೆಚ್ಚಿನ ಅಡೆತಡೆಗಳಿಲ್ಲದೆ ಸ್ಥಳವನ್ನು ತಲುಪಬಹುದಾಗಿದೆ.

ತುಮಕೂರು ಕಡೆ ಹೋಗುವ ಭಾರೀ ವಾಹನಗಳಿಗೆ ಮಾರ್ಗ ಬದಲಾವಣೆ

ಅನಂತಪುರ-ಎನ್ ಹೆಚ್ 44 ಬಾಗೇಪಲ್ಲಿ, ಚಿಕ್ಕಬಳ್ಳಾಪುರ ಮಾರ್ಗದಿಂದ ಬರೋ ವಾಹನಗಳು-

ದೊಡ್ಡಬಳ್ಳಾಪುರ ಕ್ರಾಸ್ ದೇವನಹಳ್ಳಿ (ಎನ್ ಹೆಚ್ 44) ಬಲಾಗಿ ದೇವನಹಳ್ಳಿ ರಾಣಿ ಕ್ರಾಸ್ ಮೂಲಕ ಸಂಚಾರಕ್ಕೆ ಅವಕಾಶ

ಕಾರ್ಯಕ್ರಮಕ್ಕೆ ಹೋಗೋ ವಾಹನಗಳಿಗೆ ಮಾರ್ಗ:-

ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರ ಕಡೆಗೆ ಹೋಗೋ ವಾಹನಗಳು-

ದೊಡ್ಡಬಳ್ಳಾಪುರ ಕ್ರಾಸ್, ದೇವನಹಳ್ಳಿ, ಬೆಂಗಳೂರು ನಗರ, ವಿಶ್ವನಾಥಪುರ, ಚಪ್ಪರಕಲ್ಲು, ನಾಗರನಾಯಕನಹಳ್ಳಿ, ರಘುನಾಥಪುರ ಮೂಲಕ ದೊಡ್ಡಬಳ್ಳಾಪುರಕ್ಕೆ ಹೋಗಲು ಅವಕಾಶ

ಕೊಲಾರ, ಕೆ.ಜಿ.ಎಫ್, ಹೊಸಕೋಟೆ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಹೋಗೋ ವಾಹನಗಳು

ವಿಜಯಪುರ, ವಿಜಯಪುರ ಕ್ರಾಸ್, ದೊಡ್ಡಬಳ್ಳಾಪುರ ಕ್ರಾಸ್, ದೇವನಹಳ್ಳಿ ಬೆಂಗಳೂರು ನಗರ, ವಿಶ್ವನಾಥಪುರ, ಚಪ್ಪರಕಲ್ಲು, ನಾಗರನಾಯಕನಹಳ್ಳಿ, ರಘುನಾಥಪುರ ಮೂಲಕ ದೊಡ್ಡಬಳ್ಳಾಪುರಕ್ಕೆ ಹೋಗಲು ಅವಕಾಶ

ಬೆಂಗಳೂರು ನಗರದಿಂದ ದೊಡ್ಡಬಳ್ಳಾಪುರಕ್ಕೆ ಹೋಗುವ ವಾಹನಗಳಿಗೆ (ಬಸ್ ಮತ್ತು ಕ್ಯಾಬ್ ಗಳಿಗೆ)

ಹೆಬ್ಬಾಳ ಫ್ಲೈ ಓವರ್, ಕೆಂಪಾಪುರ ಕ್ರಾಸ್, ಫ್ಲೈ ಓವರ್, ಕಾಫಿ ಡೇ, ಹುಣಸೇಮಾರನಹಳ್ಳಿ ಕ್ರಾಸ್,

ಕೋಟೆ ಕ್ರಾಸ್, ಸಾದಹಳ್ಳಿ ಗೇಟ್, ವಯಾ ದೊಡ್ಡಬಳ್ಳಾಪುರ ಕ್ರಾಸ್ ನಿಂದ ಬೆಂ.ಗ್ರಾಮಾಂತರ ಜಿಲ್ಲಾ ಸರಹದ್ದು,

ವಿಶ್ವನಾಥಪುರ, ಚಪ್ಪರಕಲ್ಲು, ನಾಗರನಾಯಕನಹಳ್ಳಿ, ರಘುನಾಥಪುರ ಮೂಲಕ ದೊಡ್ಡಬಳ್ಳಾಪುರಕ್ಕೆ ಹೋಗಲು ಅವಕಾಶ

ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಹೋಗೋ ದ್ವಿಚಕ್ರ ವಾಹನಗಳಿಗೆ ಮಾರ್ಗ

ಹೆಬ್ಬಾಳ ಫ್ಲೈ ಓವರ್, ಸಂಜೀವನಗರ ಕ್ರಾಸ್, ಎಡ ತಿರುವು ಸರ್ವೀಸ್ ರಸ್ತೆ,

ಕೊಡಿಗೇಹಳ್ಳಿ ಕ್ರಾಸ್, ಬ್ಯಾಟರಾಯನಪುರ ಕ್ರಾಸ್, ಜಕ್ಕೂರ್ ಕ್ರಾಸ್, ಎಡ ತಿರುವು ಫ್ಲೈ ಓವರ್

ಯಲಹಂಕ ಪೊಲೀಸ್ ಠಾಣೆ, ದೊಡ್ಡಬಳ್ಳಾಪುರ ರಸ್ತೆ, ಪುಟ್ಟೇನಹಳ್ಳಿ, ನಾಗೇನಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸರಹದ್ದು

ಸಿಂಗನಾಯಕನಹಳ್ಳಿ, ರಾಜನಕುಂಟೆ, ಮಾರಸಂದ್ರ, ಮೂಲಕ ದೊಡ್ಡಬಳ್ಳಾಪುರಕ್ಕೆ ಸಂಚಾರ ಮಾಡಲು ಅವಕಾಶ

ಬೆಂಗಳೂರು ಸಂಚಾರಿ ಇಲಾಖೆಯಿಂದ ಆದೇಶವನ್ನು ಹೊರಡಿಸಲಾಗಿದೆ ಮತ್ತು ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!