AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಟೋರಿಯಸ್ ವಿದೇಶಿ ಫೆಡ್ಲರ್​ಗಳ ಬಂಧನ; 7 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ನಟೋರಿಯಸ್ ವಿದೇಶಿ ಡ್ರಗ್ ಫೆಡ್ಲರ್​ಗಳನ್ನ ವಿವಿಪುರಂ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಸುಮಾರು 7 ಕೋಟಿ ಮೌಲ್ಯದ ಡ್ರಗ್ಸ್​ನ್ನು ಸೀಜ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ನಟೋರಿಯಸ್ ವಿದೇಶಿ ಫೆಡ್ಲರ್​ಗಳ ಬಂಧನ; 7 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ
ಸಾಂದರ್ಭಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on: Apr 10, 2023 | 10:51 AM

Share

ಬೆಂಗಳೂರು: ನಟೋರಿಯಸ್ ವಿದೇಶಿ ಡ್ರಗ್ ಫೆಡ್ಲರ್​ಗಳನ್ನ ವಿವಿಪುರಂ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಲಾರೆನ್ಸ್ ಹಾಗೂ ಚುಕ್ವೂನೇಜಿಮ್ ಬಂಧಿತ ಡ್ರಗ್ ಫೆಡ್ಲರ್​ಗಳು. ಇನ್ನು ಈ ಬಂಧಿತರಿಂದ ಸುಮಾರು 7 ಕೋಟಿ ಮೌಲ್ಯದ ಡ್ರಗ್ಸ್​ನ್ನು ಸೀಜ್ ಮಾಡಲಾಗಿದೆ. 1.85 ಕೆ.ಜಿ ಬಿಳಿ ಮೀಥೈಲ್ ಎಡಿಯಾಕ್ಸಿ ಮೆಥಾಂಫೆಟಮೈನ್ (White MDMA) 1.15kg ಕಂದು ಮೀಥೈಲ್ ಎಡಿಯಾಕ್ಸಿ ಮೆಥಾಂಫೆಟಮೈನ್ (Brown MDMA) 310 ಗ್ರಾಂ ಕೊಕೇನ್​(Cocaine) ಅನ್ನು ಜಫ್ತಿ ಮಾಡಲಾಗಿದ್ದು, ವಿವಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಈ ವಿದೇಶಿ ಡ್ರಗ್ ಫೆಡ್ಲರ್​ಗಳು ಸಾಫ್ಟ್‌ವೇರ್ ಇಂಜನಿಯರ್, ದೊಡ್ಡ ದೊಡ್ಡ ಉದ್ಯಮಿಗಳನ್ನ ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ನಗರದಲ್ಲಿ ಸುಮಾರು ಐದು ವರ್ಷಗಳಿಂದ ಮಾರಾಟ ಮಾಡುತ್ತಿದ್ದ ಫೆಡ್ಲರ್ಸ್​ಗಳು ಇದುವರೆಗೂ ನಗರದಲ್ಲಿ ಕೋಟ್ಯಾಂತರ ರೂಪಾಯಿ ಡ್ರಗ್ಸ್ ಮಾರಾಟ ಮಾಡಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ಕಂದು ಮೀಥೈಲ್ ಎಡಿಯಾಕ್ಸಿ ಮೆಥಾಂಫೆಟಮೈನ್​ನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಸದ್ಯ ಇಬ್ಬರು ಫೆಡ್ಲರ್​ಗಳ ಮೊಬೈಲ್​ನ್ನು ವಶಕ್ಕೆ ಪಡೆದಿದ್ದು, ಮಾಹಿತಿ ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ:ವಿಮಾನದಲ್ಲಿ ಅಕ್ರಮ ಚಿನ್ನ ಸಾಗಾಟ: 65 ಲಕ್ಷ ಮೌಲ್ಯದ ಚಿನ್ನ ಸಮೇತ ಓರ್ವ ವ್ಯಕ್ತಿ ವಶಕ್ಕೆ

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 2.5 ಲಕ್ಷ ಮೌಲ್ಯದ ಗೋವಾ ಮದ್ಯ ವಶ

ಉತ್ತರ ಕನ್ನಡ: ಜಿಲ್ಲೆಯ ಅಂಕೋಲ ತಾಲೂಕಿನ ಹಾರವಾಡದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 2.5 ಲಕ್ಷ ಮೌಲ್ಯದ ಗೋವಾ ಮದ್ಯವನ್ನ ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಹಾರವಾರಡ ಮತ್ತು ಬೆಳಂಬಾರದಲ್ಲಿ ದಾಳಿ ನಡೆಸಿದ್ದ ಅಂಕೋಲಾ ಅಬಕಾರಿ ಪೊಲೀಸರು, ಹಾರವಾಡದ ಸೀಬಡ್೯ ಕಾಲೋನಿ ಗ್ರಾಮ ಪಂಚಾಯತ್ ರಸ್ತೆಯ ಚರಂಡಿಯ ಕೆಳಬಾಗದಲ್ಲಿ ಸಂಗ್ರಸಿಟ್ಟಿದ್ದ 370.6 ಲೀಟರ್ ಮದ್ಯವನ್ನ ವಶಕ್ಕೆ ಪಡೆದು ಆರೋಪಿಗಳಿಗಾಗಿ ಬಲೆ ಬಿಸಿದ್ದು, ಅಂಕೋಲ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ