AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆ, ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಆಸ್ತಿ ಕಬಳಿಕೆ; ಕುಖ್ಯಾತ ಭೂಕಬಳಿಕೆದಾರ ಅರೆಸ್ಟ್

ವಿವಾದಿತ, ಖಾಲಿ ಜಮೀನು, ನಿವೇಶನಗಳನ್ನು ಗುರಿಯಾಗಿಸಿ ನಕಲಿ ದಾಖಲೆ ಹಾಗೂ ನಕಲಿ ವ್ಯಕ್ತಿಗಳನ್ನ ಸೃಷ್ಟಿಸಿ ಆಸ್ತಿ ಕಬಳಿಕೆ ಮಾಡುತ್ತಿದ್ದ ಕುಖ್ಯಾತ ಭೂಕಬಳಿಕೆದಾರ ಜಾನ್ ಮೋಸನ್​ನನ್ನು ಬಂಧಿಸಲಾಗಿದೆ. ಸಿಐಡಿ ಅಧಿಕಾರಿಗಳು ಕೋಕಾ ಕಾಯ್ದೆಯಡಿ ಜಾನ್ ಮೋಸನ್ ಬಂಧಿಸಿದ್ದಾರೆ.

ನಕಲಿ ದಾಖಲೆ, ನಕಲಿ ವ್ಯಕ್ತಿಗಳನ್ನು ಸೃಷ್ಟಿಸಿ ಆಸ್ತಿ ಕಬಳಿಕೆ; ಕುಖ್ಯಾತ ಭೂಕಬಳಿಕೆದಾರ ಅರೆಸ್ಟ್
ಜಾನ್ ಮೋಸನ್
TV9 Web
| Edited By: |

Updated on:Jul 22, 2024 | 2:40 PM

Share

ಬೆಂಗಳೂರು, ಜುಲೈ.22: ನಕಲಿ ದಾಖಲೆ ಹಾಗೂ ನಕಲಿ ವ್ಯಕ್ತಿಗಳನ್ನ ಸೃಷ್ಟಿಸಿ ಆಸ್ತಿ ಕಬಳಿಕೆ ಹಿನ್ನೆಲೆ ಕೋಕಾ ಕಾಯ್ದೆಯಡಿ ಕುಖ್ಯಾತ ಭೂಕಬಳಿಕೆದಾರ ಜಾನ್ ಮೋಸನ್​ನನ್ನು ಬಂಧಿಸಲಾಗಿದೆ. ಸಿಐಡಿ (CID) ಅಧಿಕಾರಿಗಳು ಕೋಕಾ ಕಾಯ್ದೆಯಡಿ ಜಾನ್ ಮೋಸನ್ ಬಂಧಿಸಿದ್ದಾರೆ. ಬೆಂಗಳೂರಿನ ಕಲ್ಯಾಣ ನಗರ ನಿವಾಸಿಯಾಗಿರುವ ಜಾನ್ ಮೋಸನ್​ 16 ಜನರ ಗ್ಯಾಂಗ್ ಕಟ್ಟಿಕೊಂಡು ವಂಚನೆ (Cheat) ಕೆಲಸ ಮಾಡ್ತಿದ್ದ ಎಂದು ತಿಳಿದು ಬಂದಿದೆ.

2020ರಲ್ಲಿ ಜಾನ್ ಮೋಸನ್ ಆ್ಯಂಡ್​ ಗ್ಯಾಂಗ್‌ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು. ಬಳಿಕ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನ ಸಿಐಡಿಗೆ ವಹಿಸಲಾಗಿತ್ತು. ಸಿಐಡಿ ತನಿಖೆ ವೇಳೆ ಆರೋಪಿಗಳ ಅಕ್ರಮ ಚಟುವಟಿಕೆ ಮತ್ತಷ್ಟು ಬಯಲಾಗಿತ್ತು. ಹೀಗಾಗಿ ಆರೋಪಿಗಳ ವಿರುದ್ಧ 100ಕ್ಕೂ ಹೆಚ್ಚು ಕೇಸ್ ದಾಖಲಾಗಿದ್ದವು. ಸದ್ಯ 51 ಪ್ರಕರಣಗಳ ತನಿಖೆ ಮುಕ್ತಾಯಗೊಂಡು ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಜಾನ್ ಮೋಸನ್ ಆ್ಯಂಡ್ ಗ್ಯಾಂಗ್‌ ಸಂಘಟಿತ ಅಪರಾಧವೆಸಗುತ್ತಿದ್ದ ಹಿನ್ನೆಲೆ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯಡಿ ಮೋಸನ್ ಬಂಧಿಸಲಾಗಿದೆ.

ಇದನ್ನೂ ಓದಿ: ಅಬಕಾರಿ ಉಪ ಆಯುಕ್ತರ ಹುದ್ದೆಗೆ 3.5 ಕೋಟಿ ರೂ! ವರ್ಗಾವಣೆ ದಂಧೆಗೆ ರೇಟ್ ಫಿಕ್ಸ್ ಎಂದ ಅಶೋಕ್

ಆರೋಪಿಗಳು, ವಿವಾದಿತ, ಖಾಲಿ ಜಮೀನು, ನಿವೇಶನಗಳನ್ನು ಗುರಿಯಾಗಿಸಿ ವಂಚನೆ ಮಾಡುತ್ತಿದ್ದರು. ಬಳಿಕ ಸಮಗ್ರ ಮಾಹಿತಿ ಸಂಗ್ರಹಿಸಿ ನಕಲಿ ದಾಖಲಾತಿ ಸೃಷ್ಟಿಸುತ್ತಿದ್ದರು. ಆರೋಪಿಗಳೇ ಮಾಲೀಕ ಹಾಗೂ ಬಾಡಿಗೆದಾರರನ್ನು ಸೃಷ್ಟಿಸುತ್ತಿದ್ದರು. ಇಬ್ಬರ ನಡುವೆ ವಿವಾದವಿದೆ ಎಂದು ಕೋರ್ಟ್‌ ಮೊರೆ ಹೋಗುತ್ತಿದ್ದರು. ಕೋರ್ಟ್‌ನಲ್ಲಿ ಇಬ್ಬರ ನಡುವೆ ರಾಜಿ ಸಂಧಾನ ಮಾಡಿಸುವ ರೀತಿ ಆದೇಶ ತರುತ್ತಿದ್ದರು. ಅಸಲಿ ಮಾಲೀಕರಿಗೆ ಆದೇಶ ಪತ್ರ ತೋರಿಸಿ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರು. ಕೋರ್ಟ್‌ ಆದೇಶದ ಮೇರೆಗೆ ಸ್ವತ್ತಿನಲ್ಲಿದ್ದವರನ್ನು ಎಬ್ಬಿಸಿ ಜಾಗ ವಶಕ್ಕೆ ಪಡೆಯುತ್ತಿದ್ದರು. ಈ ರೀತಿ ಸ್ವತ್ತು ವಶಕ್ಕೆ ಪಡೆದು ಕುಖ್ಯಾತ ಭೂಕಬಳಿಕೆದಾರ ಮೋಸನ್ ವಂಚಿಸುತ್ತಿದ್ದ.

ಈ ಬಗ್ಗೆ ಮೋಸ ಹೋದ ಆಸ್ತಿ ಮಾಲೀಕರು ಕೋರ್ಟ್ ಮೊರೆ ಹೋಗಿದ್ದು ಬಳಿಕ ಹಲಸೂರು ಗೇಟ್ ಪೊಲೀಸ್‌ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಬೆಂಗಳೂರು ನಗರ, ಸುತ್ತಮುತ್ತ ಅಮಾಯಕರ ಜಮೀನು, ನಿವೇಶನ, ಮನೆಗಳನ್ನ ಕಬಳಿಸಿದ್ದ ವಂಚಕ ಜಾನ್ ಮೋಸನ್ ಆ್ಯಂಡ್ ಗ್ಯಾಂಗ್‌ ಸದ್ಯ ಅರೆಸ್ಟ್ ಆಗಿದೆ.

(ವರದಿ: ಪ್ರದೀಪ್ ‘ಟಿವಿ9’)

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:31 pm, Mon, 22 July 24

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು