AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈ ಮುರಿದು, ಕಣ್ಣಿಗೆ ಚಾಕು ಇರಿದ ಪತ್ನಿ: ಪೊಲೀಸ್​​ ಠಾಣೆಗೆ ಓಡೋಡಿ ಬಂದ ರೌಡಿಶೀಟರ್​​

ರೌಡಿಶೀಟರ್ ಮೇಲೆ ಆತನ ಪತ್ನಿಯೇ ಮಾರಣಾಂತಿವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಎರಡನೇ ಪತ್ನಿ ವಿಷಯಕ್ಕೆ ಪತ್ನಿಯಿಂದ ತೀವ್ರ ಹಲ್ಲೆಗೊಳಗಾದ ಆತ, ಜೆಜೆ ನಗರ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾನೆ. ಪುಂಡರಿಗೆ ಅಂಜದ, ಪೊಲೀಸರಿಗೆ ಬೆದರದ ರೌಡಿಶೀಟರ್​​ ಪತ್ನಿಯಿಂದಲೇ ಏಟು ತಿಂದಿರೋದು ಇಲ್ಲಿ ಗಮನಾರ್ಹ.

ಕೈ ಮುರಿದು, ಕಣ್ಣಿಗೆ ಚಾಕು ಇರಿದ ಪತ್ನಿ: ಪೊಲೀಸ್​​ ಠಾಣೆಗೆ ಓಡೋಡಿ ಬಂದ ರೌಡಿಶೀಟರ್​​
ರೌಡಿಶೀಟರ್​​ ಮೇಲೆ ಪತ್ನಿಯಿಂದ ಹಲ್ಲೆ
ಪ್ರಸನ್ನ ಹೆಗಡೆ
|

Updated on: Jan 06, 2026 | 9:38 AM

Share

ಬೆಂಗಳೂರು, ಜನವರಿ 06: ಖಾಕಿ ಭಯವಿಲ್ಲದೆ ರೌಡಿಶೀಟರ್​​ಗಳು ಮೇಲಿಂದ ಮೇಲೆ ಅಟ್ಟಹಾಸ ಮೆರೆಯೋದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಜೈಲಿಗೆ ಹೋಗಿ ಶಿಕ್ಷೆ ಅನುಭವಿಸಿ ಬಂದರೂ ಕೆಲವರು ಮಾತ್ರ ಬುದ್ಧಿ ಕಲಿಯಲ್ಲ. ಕಾರಾಗೃಹದಿಂದ ಹೊರಬಂದ ಬಳಿಕವೂ ಮತ್ತದೇ ತಮ್ಮ ಹಳೇ ಚಾಳಿ ಮುಂದುವರಿಸುತ್ತಾರೆ. ಕೆಲವೊಮ್ಮೆ ಪೊಲೀಸರ ಕಣ್ಣಿಗೂ ಯಾಮಾರಿಸಿ ಓಡಾಡಿಕೊಂಡು ಇರ್ತಾರೆ. ಇಂತಹುದ್ದೇ ಸಾಲಿಗೆ ಸೇರುವ ರೌಡಿಶೀಟರ್​​ ಸೈಯದ್ ಅಸ್ಗರ್ ಈಗ ತಾನಾಗಿಯೇ ಪೊಲೀಸರ ಬಳಿ ಓಡೋಡಿ ಬಂದಿದ್ದಾನೆ. ಇದಕ್ಕೆಲ್ಲ ಕಾರಣ ಆತನ ಹೆಂಡತಿ ಅಂದ್ರೆ ನೀವು ನಂಬಲೇ ಬೇಕು.

ಹೌದು, ಪುಂಡರಿಗೆ ಅಂಜದ ಮತ್ತು ಪೊಲೀಸರು ಅಂದ್ರೂ ಭಯ ಪಡದ ರೌಡಿಶೀಟರ್​​ ಸೈಯದ್ ಅಸ್ಗರ್ ಹೆಂಡತಿ ಅಂದ್ರೆ ಬೆಚ್ಚಿ ಬೀಳ್ತಾನೆ. ಗಾಂಜಾ ಪೆಡ್ಲಿಂಗ್, ಕಳ್ಳತನ, ಕೊಲೆ ಯತ್ನದಂತಹ ಗಂಭೀರ ಆರೋಪ ಹೊಂದಿರೋ ಈತ ಕೇಸ್​ಗಳಾದ ಪೊಲೀಸರಿಗೂ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್​​ ಆಗ್ತಿದ್ದ. ಹೀಗಿರುವಾಗ ಇತ್ತೀಚೆಗಷ್ಟೇ ಜೈಲಿನಿಂದ ಹೊರ ಬಂದಿರೋ ಈತ ಮತ್ತೆ ಪೊಲೀಸ್​​ ಠಾಣೆ ಮೆಟ್ಟಿಲು ಹತ್ತಿದ್ದಾನೆ. ವಿಶೇಷ ಅಂದ್ರೆ ಪ್ರತಿಬಾರಿ ಆರೋಪಿಯಾಗಿ ಬರ್ತಿದ್ದ ಈತ ಈ ಬಾರಿ ಸಂತ್ರಸ್ತನಾಗಿ ಬಂದಿದ್ದಾನೆ. 2ನೇ ಪತ್ನಿಯನ್ನ ಬಿಡು ಎಂದು ಮೊದಲ ಹೆಂಡತಿ ರೌಡಿಶೀಟರ್ ಶೀಟರ್ ಕೈ ಮುರಿದಿದ್ದಲ್ಲದೆ, ಕಣ್ಣಿಗೆ ಚಾಕು ಕೂಡ ಇರಿದಿದ್ದಾಳೆ. ಹೀಗಾಗಿ ಪತ್ನಿ ವಿರುದ್ಧ ಜೆಜೆ ನಗರ ಠಾಣೆಗೆ ಸೈಯದ್ ಅಸ್ಗರ್ ದೂರು ನೀಡಿದ್ದಾರೆ. ಆತನಿಗೆ ಎರಡನೇ ಪತ್ನಿ ಸಾಥ್​​ ಕೊಟ್ಟಿದ್ದಾಳೆ.

ಇದನ್ನೂ ಓದಿ: ಬಳ್ಳಾರಿ ಬೆನ್ನಲ್ಲೇ ಬೆಂಗಳೂರಿನಲ್ಲೂ ಗಲಭೆ; ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

ರೌಡಿಶೀಟರ್​​ ಸೈಯದ್ ಅಸ್ಗರ್ ಮೊದಲ ಪತ್ನಿ ಈ ಮೊದಲು ಕೂಡ ವಿಡಿಯೋ ಮಾಡಿ ಬೆದರಿಕೆ ಹಾಕಿದ್ದಳು. ನಿನ್ನ ತಲೆ ಕಡಿಯುತ್ತೇನೆ, ಎರಡು ದಿನ ಕಾಯ್ತಿರು ಎಂದು ವಾರ್ನಿಂಗ್ ಮಾಡಿದ್ದಳು. ಮಚ್ಚು ಮತ್ತು ಬಾಕು ಹಿಡಿದು ವಿಡಿಯೋ ಮಾಡಿದ್ದ ಬೆನ್ನಲ್ಲೇ ಪತಿಯ ಮೇಲೆ ಆಕೆ ಅಟ್ಯಾಕ್​ ಮಾಡಿದ್ದಾಳೆ. ಸದ್ಯ ರೌಡಿಶೀಟರ್​​ನಿಂದ ದೂರು ಪಡೆದಿರುವ ಪೊಲೀಸರು, ಘಟನೆ ಸಂಬಂಧ ಕೇಸ್ ದಾಖಲಿಸಿಕೊಂಡಿದ್ದಾರೆ. ಇಷ್ಟು ದಿನ ಬೇರೆಯವರಿಗೆ ಬೆದರಿಕೆ ಹಾಕುತ್ತಿದ್ದ ಸೈಯದ್ ಅಸ್ಗರ್ ಈಗ ಪತ್ನಿ ಬೆದರಿಕೆಗೆ ಅಂಜಿರೋದಿಲ್ಲಿ ಗಮನಾರ್ಹ.

ವರದಿ: ಪ್ರದೀಪ್​​, ಟಿವಿ9 ಬೆಂಗಳೂರು

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?