AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gandhadagudi: ಶಾಲೆ ಮಕ್ಕಳಿಗೆ ಉಚಿತವಾಗಿ ಗಂಧದಗುಡಿ ಚಿತ್ರ ತೋರಿಸಲು ರಾಜ್ಯ ಸರ್ಕಾರಕ್ಕೆ ಎನ್.ಆರ್. ರಮೇಶ್ ಮನವಿ

ಗಂಧದಗುಡಿ ಕನ್ನಡ ಚಲನಚಿತ್ರವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಉಚಿತವಾಗಿ ಪ್ರದರ್ಶನ ಮಾಡಲು ಎನ್.ಆರ್. ರಮೇಶ್, ಸಿಎಂ ಬೊಮ್ಮಾಯಿ‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

Gandhadagudi: ಶಾಲೆ ಮಕ್ಕಳಿಗೆ ಉಚಿತವಾಗಿ ಗಂಧದಗುಡಿ ಚಿತ್ರ ತೋರಿಸಲು ರಾಜ್ಯ ಸರ್ಕಾರಕ್ಕೆ ಎನ್.ಆರ್. ರಮೇಶ್ ಮನವಿ
ಪುನೀತ್ ರಾಜ್​ಕುಮಾರ್
TV9 Web
| Edited By: |

Updated on: Nov 08, 2022 | 1:21 PM

Share

ಬೆಂಗಳೂರು: ದಿ. ಪುನೀತ್ ರಾಜ್ ಕುಮಾರ್(Puneeth Rajkumar) ಅಭಿನಯದ ಗಂಧದಗುಡಿ(Gandhadagudi) ಕನ್ನಡ ಚಲನಚಿತ್ರವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಉಚಿತವಾಗಿ ಪ್ರದರ್ಶನ ಮಾಡಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್. ರಮೇಶ್(NR Ramesh), ಸಿಎಂ ಬೊಮ್ಮಾಯಿ‌(Basavaraj Bommai) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಅಕ್ಟೋಬರ್ 28ರಂದು ಬಿಡುಗಡೆಯಾದ ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ ನಟನೆಯ ಕೊನೆಯ ಚಿತ್ರ “ಗಂಧದಗುಡಿ” ಚಲನಚಿತ್ರವು ಅದ್ಭುತವಾದ ಚಲನಚಿತ್ರವಾಗಿದ್ದು, ಕರ್ನಾಟಕ ರಾಜ್ಯದ ನೈಸರ್ಗಿಕ ಸಂಪತ್ತನ್ನು, ವನ್ಯ ಜೀವಿಗಳ ವೈವಿಧ್ಯತೆಯನ್ನು ಮನಮುಟ್ಟುವಂತೆ ತೋರಿಸುವಲ್ಲಿ ಅತ್ಯಂತ ಯಶಸ್ವಿಯಾಗಿದೆ. ಅಮೋಘವರ್ಷ ಅವರ ನಿರ್ದೇಶನದ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ನಟನೆಯ “ಗಂಧದಗುಡಿ” ಚಲನಚಿತ್ರವು ಹಲವಾರು ಸಾಮಾಜಿಕ ಕಳಕಳಿಯ ಸಂದೇಶಗಳನ್ನು ಅತ್ಯಂತ ಯಶಸ್ವಿಯಾಗಿ ಪ್ರೇಕ್ಷಕರ ಮನಮುಟ್ಟಿಸಿರುವುದು ಎಲ್ಲರಿಗೂ ತಿಳಿದಿರುವ ವಿಷಯ.

ಈ ಚಲನಚಿತ್ರವು ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳೂ ಸೇರಿದಂತೆ ಎಲ್ಲ ಶಾಲೆಗಳಲ್ಲಿ ಮಕ್ಕಳಿಗೆ ಉಚಿತವಾಗಿ ಪ್ರದರ್ಶನ ಮಾಡಲು ವ್ಯವಸ್ಥೆ ಮಾಡುವ ಮೂಲಕ ಕನ್ನಡ ನಾಡಿನ ಪ್ರಾಕೃತಿಕ ಸಂಪತ್ತಿನ ಬಗ್ಗೆ ಮತ್ತು ವೈವಿಧ್ಯಮಯ ವನ್ಯ ಜೀವಿಗಳ ಬಗ್ಗೆ ಅರಿವು ಮೂಡಿಸಿದಂತಾಗುತ್ತದೆ. ಹೀಗಾಗಿ ರಾಜ್ಯದ ಪ್ರತೀ ಮೂಲೆ ಮೂಲೆಯಲ್ಲಿರುವ ಹಳ್ಳಿಗಳಲ್ಲಿ / ಗುಡ್ಡಗಾಡು ಪ್ರದೇಶಗಳಲ್ಲಿ ಇರುವ ಎಲ್ಲಾ ಶಾಲಾ – ಕಾಲೇಜುಗಳಲ್ಲಿ “ಗಂಧದಗುಡಿ ಚಲನಚಿತ್ರ’ದ ಉಚಿತ ಪ್ರದರ್ಶನ ನೀಡುವ ಬಗ್ಗೆ ರಾಜ್ಯ ಸರ್ಕಾರವು ಮುತುವರ್ಜಿ ವಹಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಎನ್.ಆರ್. ರಮೇಶ್ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

ಎನ್.ಆರ್. ರಮೇಶ್

ಎನ್.ಆರ್. ರಮೇಶ್ ಪತ್ರ

Gandhadagudi

200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ