AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಡಿಕಲ್ ಕಾಲೇಜ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಅನಾಥ ಶವಗಳ ಮೇಲೆ ನಡೆಯುತ್ತಿದ್ಯಾ ಹಣ ಮಾಡುವ ದಂಧೆ?

ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗುವ ವಾರಸುದಾರರಿಲ್ಲದ ಶವಗಳ ಅಂಗಾಂಗ ಮಾರಾಟ ಮಾಡಲಾಗುತ್ತಿದೆ. ಅನಾಥ ಶವಗಳನ್ನು ಉಚಿತವಾಗಿ ಸಂಸ್ಕಾರ ಮಾಡುತ್ತಿದ್ದೇವೆ ಅಂತಾ ದುಡ್ಡು ಮಾಡ್ತಿದ್ದಾರೆ ಎಂದು ಎನ್​.ಆರ್. ರಮೇಶ್ ಆರೋಪಿಸಿದ್ದಾರೆ.

ಮೆಡಿಕಲ್ ಕಾಲೇಜ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಅನಾಥ ಶವಗಳ ಮೇಲೆ ನಡೆಯುತ್ತಿದ್ಯಾ ಹಣ ಮಾಡುವ ದಂಧೆ?
ಸಾಂದರ್ಭಿಕ ಚಿತ್ರ
Vinay Kashappanavar
| Updated By: ಆಯೇಷಾ ಬಾನು|

Updated on:Jul 31, 2023 | 11:00 AM

Share

ಬೆಂಗಳೂರು, ಜುಲೈ 31: ಮೆಡಿಕಲ್ ಕಾಲೇಜ್ ಹಾಗೂ ಸರ್ಕಾರಿ ಆಸ್ಪತ್ರೆಗಳು ಹೆಣದ ಮೇಲೆ ದುಡ್ಡ ಮಾಡಲು ಮುಂದಾಗಿದ್ದಾವೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ವಾರಸುದಾರರಿಲ್ಲದ ಅನಾಥ ಶವಗಳನ್ನು(Orphan Corpse)  ಸರ್ಕಾರಿ ಆಸ್ಪತ್ರೆಗಳು ಮಾರಾಟ ಮಾಡಿ ಹಣ ಮಾಡುತ್ತಿವೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್. ರಮೇಶ್(NR Ramesh) ಆರೋಪಿಸಿದ್ದಾರೆ. ಅಲ್ಲದೆ ಶವಗಳ ಅಂಗಾಂಗಗಳನ್ನು ಕಳ್ಳತನ ಮಾಡುತ್ತಿರುವ ಬಗ್ಗೆ ಆರೋಪಿಸಿದ್ದಾರೆ.

ಎನ್.ಆರ್. ರಮೇಶ್ ಅವರು ಮೆಡಿಕಲ್ ಕಾಲೇಜ್ ಹಾಗೂ ಸರ್ಕಾರಿ ಆಸ್ಪತ್ರೆಗಳ ಮೇಲೆ ಗಂಭೀರ ಆರೋಪ ಮಾಡಿದ್ದು ಈ ಬಗ್ಗೆ ತನಿಖಾ ತಂಡ ರಚನೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿ ಪತ್ರ ಬರೆದಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆ, ಕೆ. ಸಿ. ಜನರಲ್ ಆಸ್ಪತ್ರೆ, ಸಂಜಯ್ ಗಾಂಧಿ ಆಸ್ಪತ್ರೆ, ಬೋರಿಂಗ್ ಆಸ್ಪತ್ರೆಗಳು ಸೇರಿದಂತೆ ಹಲವು ಆಸ್ಪತ್ರೆಗಳ ವಿರುದ್ಧ ಆರೋಪ ಕೇಳಿ ಬಂದಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ದಾಖಲಾಗುವ ವಾರಸುದಾರರಿಲ್ಲದ ಶವಗಳ ಅಂಗಾಂಗ ಮಾರಾಟ ಮಾಡಲಾಗುತ್ತಿದೆ. ಅನಾಥ ಶವಗಳನ್ನು ಉಚಿತವಾಗಿ ಸಂಸ್ಕಾರ ಮಾಡುತ್ತಿದ್ದೇವೆ ಅಂತಾ ದುಡ್ಡು ಮಾಡ್ತಿದ್ದಾರೆ. ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಶಾಮೀಲಾಗಿ ಈ ದಂಧೆ ನಡೆಸಲಾಗುತ್ತಿದೆ. ಅನಾಥ ರೋಗಿಗಳು ಮತ್ತು ಶವಗಳ ಪರಿಶೀಲನಾ ಸಮಿತಿ ರಚಿಸುವ ಸಂಬಂಧ ಸೂಕ್ತ ಕ್ರಮಕ್ಕೆ ಎನ್.ಆರ್. ರಮೇಶ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಜಯನಗರ ಆಸ್ಪತ್ರೆ ಮೆಡಿಕಲ್ ಸೂಪರ್ಡೆಂಟ್ ಹಾಗೂ ಆರ್​ಟಿಇ ಕಾರ್ಯಕರ್ತನಿಂದ ವೈದ್ಯರಿಗೆ ಕಿರುಕುಳ ಆರೋಪ; ಶಾಸಕರ ಬಳಿ ಅಳಲು ತೋಡಿಕೊಂಡ ಸಿಬ್ಬಂದಿ

ಅನಾಥರ ಶವಗಳನ್ನು ಸಂಸ್ಕಾರ ಮಾಡಿರುವ ಸ್ಥಳಗಳಿಂದ ಹೊರತೆಗೆದು ಪ್ರಾಮಾಣಿಕ ಹಿರಿಯ ಅಥವಾ ನಿವೃತ್ತ ಫಾರೆನ್ಸಿಕ್ ತಜ್ಞರಿಂದ ಪರೀಕ್ಷೆ ಮಾಡಿಸಿ ಆಗ ಅಕ್ರಮ ಬಯಲಾಗುತ್ತೆ ಎಂದು ಎನ್​.ಆರ್. ರಮೇಶ್ ಪತ್ರದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳು ಮತ್ತು ಅಪಘಾತ ಪ್ರಕರಣಗಳ ರೋಗಿಗಳನ್ನು ದಾಖಲಿಸಿಕೊಳ್ಳುವ ಜಿಲ್ಲಾ ಮಟ್ಟದ ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ಇಡುವ ಸಂಬಂಧ ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲಿ ವಾರಸುದಾರರು ಪತ್ತೆಯಾಗದ ಮತ್ತು ಅನಾಥ ರೋಗಿಗಳು ಮತ್ತು ಶವಗಳ ಪರಿಶೀಲನಾ ಸಮಿತಿ ರಚಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹಾಗೂ ಗೃಹ ಸಚಿವ ಪರಮೇಶ್ವರಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಹಾಗೂ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:00 am, Mon, 31 July 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ