AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಹಳೆ ವಾಹನಗಳ ಸಂಖ್ಯೆ ಹೆಚ್ಚಳ: ಗುಜರಿಗೆ ಹಾಕಲು ಮಾಲೀಕರು ಹಿಂದೇಟು

ಕರ್ನಾಟಕದಲ್ಲಿ 15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಸೇರಿದಂತೆ ಸ್ವಂತ ವಾಹನಗಳನ್ನು ಗುಜರಿಗೆ ಹಾಕಬೇಕು ಎಂಬ ನಿಯಮ ಇದೆ. ಆದರೆ ವಾಹನಗಳ ಮಾಲೀಕರು ಮಾತ್ರ ಇದಕ್ಕೆ ಸುತಾರಾಂ ಒಪ್ಪುತ್ತಿಲ್ಲ. ಇದರಿಂದ ನಗರದಲ್ಲಿ ವಾಯು ಮಾಲಿನ್ಯದ ಪ್ರಮಾಣ ಹೆಚ್ಚುತ್ತಿದೆ ಎಂದು ಪರಿಸರ ಹೋರಾಟಗಾರರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಲ್ಲಿ ಹಳೆ ವಾಹನಗಳ ಸಂಖ್ಯೆ ಹೆಚ್ಚಳ: ಗುಜರಿಗೆ ಹಾಕಲು ಮಾಲೀಕರು ಹಿಂದೇಟು
ಪ್ರಾತಿನಿಧಿಕ ಚಿತ್ರ
Kiran Surya
| Updated By: ಗಂಗಾಧರ​ ಬ. ಸಾಬೋಜಿ|

Updated on:Dec 01, 2025 | 9:34 PM

Share

ಬೆಂಗಳೂರು, ಡಿಸೆಂಬರ್​​ 1: ದಿನದಿಂದ ದಿನಕ್ಕೆ ಸಿಲಿಕಾನ್ ಸಿಟಿಯಲ್ಲಿ (bangaluru) ಹಳೆಯ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದರಿಂದ ನಗರದಲ್ಲಿ ವಾಯುಮಾಲಿನ್ಯದ ಪ್ರಮಾಣವು ಕೂಡ ಹೆಚ್ಚಾಗುತ್ತಿದ್ದು, ವಾಹನ ಮಾಲೀಕರು ಮಾತ್ರ ತಮ್ಮ ಹಳೆಯ ವಾಹನಗಳನ್ನು (old vehicles) ಗುಜರಿಗೆ ಹಾಕಲು ಹಿಂದೇಟು ಹಾಕುತ್ತಿದ್ದಾರೆ.

2023ರಲ್ಲೇ ಗುಜರಿ ನೀತಿ ಜಾರಿ

ರಾಜ್ಯದಲ್ಲಿ ಹಳೆಯ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕೇಂದ್ರ ಸರ್ಕಾರ ದೇಶದೆಲ್ಲೆಡೆ 2023 ಏಪ್ರಿಲ್ 1 ರಿಂದ ಗುಜರಿ ನೀತಿ ಜಾರಿಯಾಗಿದ್ದು, 15 ವರ್ಷ ದಾಟಿದ ದೇಶದ ಎಲ್ಲಾ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಬೇಕು ಎಂಬ ನಿಯಮವಿದೆ. ಎನ್ಜಿಟಿ ರೂಲ್ಸ್ ಪ್ರಕಾರ ದೆಹಲಿಯಲ್ಲಿ 10 ವರ್ಷ ಮೇಲ್ಪಟ್ಟ ಪೆಟ್ರೋಲ್ ವಾಹನ ಮತ್ತು 15 ವರ್ಷ ಮೇಲ್ಪಟ್ಟ ಡಿಸೇಲ್ ವಾಹನಕ್ಕೆ ನಿಷೇಧ ಹೇರಲಾಗಿದೆ.

ಇದನ್ನೂ ಓದಿ: ಬೆಂಗಳೂರಿನದ್ದು ಅತ್ಯಂತ ಕೆಟ್ಟ ಟ್ರಾಫಿಕ್, ನಿಷ್ಪ್ರಯೋಜಕ ಸಂಚಾರ ಪೊಲೀಸರು: ಉತ್ತರ ಪ್ರದೇಶದ ಎಸ್​ಪಿ ಸಂಸದ ಆಕ್ರೋಶ

ರಾಜ್ಯದಲ್ಲೂ 15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನ ಮತ್ತು ಸ್ವಂತ ವಾಹನಗಳನ್ನು ಗುಜರಿಗೆ ಹಾಕಬೇಕು ಎಂಬ ನಿಯಮ ಇದೆ. ತಮ್ಮ ಸ್ವಂತ ವಾಹನಗಳನ್ನು ಗುಜರಿಗೆ ಹಾಕಿದರೆ ಹೊಸ ವಾಹನ ಖರೀದಿಸುವಾಗ ಸಬ್ಸಿಡಿ ಕೂಡ ನೀಡುತ್ತಿದ್ದಾರೆ. ಆದರೆ 15 ವರ್ಷ ಮೇಲ್ಪಟ್ಟ ತಮ್ಮ ಹಳೆಯ ವಾಹನಗಳನ್ನು ಗುಜರಿಗೆ ಹಾಕಲು ವಾಹನ ಮಾಲೀಕರು ಹಿಂದೇಟು ಹಾಕುತ್ತಿದ್ದಾರೆ.

ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್ ಹೇಳಿದ್ದಿಷ್ಟು

ಈ ಬಗ್ಗೆ ಮಾತಾನಾಡಿರುವ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಸಿ. ಮಲ್ಲಿಕಾರ್ಜುನ್​​, ನಮ್ಮ ರಾಜ್ಯದಲ್ಲಿ ಕಡ್ಡಾಯವಾಗಿ ಹಳೆಯ ವಾಹನಗಳನ್ನು ಗುಜರಿಗೆ ಹಾಕಬೇಕು ಎಂಬ ರೂಲ್ಸ್ ಇಲ್ಲ, ಹಾಗಾಗಿ ವಾಹನ ಮಾಲೀಕರು ಹಳೆಯ ವಾಹನಗಳನ್ನು ಗುಜರಿಗೆ ಹಾಕಲು ಮುಂದಾಗುತ್ತಿಲ್ಲ. ಕಳೆದ ವರ್ಷ ಸುಮಾರು 4 ಸಾವಿರ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಬೆಂಗಳೂರಲ್ಲಿ 15 ವರ್ಷ ಮೀರಿದ ಬೈಕ್​​ಗಳ ಸಂಖ್ಯೆ – 24,46,372 ಇದ್ದರೆ, ಕಾರುಗಳ ಸಂಖ್ಯೆ 7,059,39, ಲಾರಿ, ಬಸ್​ ಸೇರಿದಂತೆ ಇತರೆ ವಾಹನಗಳ ಸಂಖ್ಯೆ  5,93,028ರಷ್ಟಿವೆ. ಬೆಂಗಳೂರಲ್ಲಿ 15 ವರ್ಷ ಮೀರಿದ 37,45,339 ಲಕ್ಷ ವಾಹನಗಳಿವೆಯಂತೆ.

ಹಳೆಯ ವಾಹನಗಳನ್ನು ಗುಜರಿಗೆ ಹಾಕುವುದು ಒಳ್ಳೆಯದು: ಅರುಣ್ ಪ್ರಸಾದ್

ಕರ್ನಾಟಕದಲ್ಲೇ ಅದರಲ್ಲೂ ಬೆಂಗಳೂರಲ್ಲಿ ಅತೀ ಹೆಚ್ಚು ಹಳೆಯ ವಾಹನಗಳಿವೆ. ಒಟ್ಟು 37 ಲಕ್ಷ ವಾಹನಗಳಿದ್ದು, ಅದರಲ್ಲಿ 24 ಲಕ್ಷ ದ್ವಿಚಕ್ಷ ವಾಹನಗಳು, 7 ಲಕ್ಷ ಕಾರುಗಳಿವೆ. ಈ ಬಗ್ಗೆ ಮಾತಾನಾಡಿರುವ ಪರಿಸರ ಹೋರಾಟಗಾರ ಅರುಣ್ ಪ್ರಸಾದ್, ಹಳೆಯ ವಾಹನಗಳಿಂದ ವಾಯುಮಾಲಿನ್ಯ ಹೆಚ್ಚಾಗುತ್ತದೆ, ಹಾಗಾಗಿ ಹಳೆಯ ವಾಹನಗಳನ್ನು ಗುಜರಿಗೆ ಹಾಕುವುದು ಒಳ್ಳೆಯದು ಎಂದಿದ್ದಾರೆ.

ಇದನ್ನೂ ಓದಿ: ಇದು ಊಟಿ ಅಲ್ಲ, ಬೆಂಗಳೂರು: ನಗರದಲ್ಲಿ ಮೋಡಿ ಮಾಡಿದ ಈ ವಾತಾವರಣ

ಒಟ್ಟಿನಲ್ಲಿ ಹಳೆಯ ವಾಹನಗಳಿಂದ ನಗರದಲ್ಲಿ ವಾಯು ಮಾಲಿನ್ಯದ ಪ್ರಮಾಣವು ಹೆಚ್ಚಾಗುತ್ತಿದ್ದು, ತಮ್ಮ ತಮ್ಮ ಹಳೆಯ ವಾಹನಗಳನ್ನು ಗುಜರಿಗೆ ಹಾಕುವುದು ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಆದರೆ ಹಳೆ ವಾಹನಗಳ ಮಾಲೀಕರು ಏನು ಮಾಡುತ್ತಾರೆ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:33 pm, Mon, 1 December 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ