AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru-Dharwad Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರಿಗಾಗಿ ವಿಶೇಷ ಬಸ್‌ ವ್ಯವಸ್ಥೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ಮತ್ತು ಧಾರವಾಡದಿಂದ ಐಷಾರಾಮಿ ಬಸ್‌ಗಳನ್ನು ಪ್ರಾರಂಭಿಸಿದೆ. ರೈಲಿನ ಆಗಮನ ಮತ್ತು ನಿರ್ಗಮನದ ಸಮಯಕ್ಕೆ ತಕ್ಕಂತೆ ಐಷಾರಾಮಿ ಎಸಿ ಬಸ್​ಗಳನ್ನು ಬಿಡಲಾಗಿದೆ.

Bengaluru-Dharwad Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರಿಗಾಗಿ ವಿಶೇಷ ಬಸ್‌ ವ್ಯವಸ್ಥೆ
ವಂದೇ ಭಾರತ್ ಎಕ್ಸ್​​ಪ್ರೆಸ್
TV9 Web
| Edited By: |

Updated on: Jul 04, 2023 | 2:25 PM

Share

ಬೆಂಗಳೂರು: ಕಳೆದ ವಾರ ಆರಂಭಗೊಂಡ ಬೆಂಗಳೂರು-ಧಾರವಾಡ(Bengaluru-Dharwad Vande Bharat Express)  ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಇದೀಗ ವಂದೇ ಭಾರತ್ ರೈಲಿನ ಪ್ರಯೋಜನಗಳನ್ನು ಬೆಳಗಾವಿಯ ಜನರಿಗೆ ವಿಸ್ತರಿಸಲು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹುಬ್ಬಳ್ಳಿ ಮತ್ತು ಧಾರವಾಡದಿಂದ ಐಷಾರಾಮಿ ಬಸ್‌ಗಳನ್ನು ಪ್ರಾರಂಭಿಸಿದೆ. ರೈಲಿನ ಆಗಮನ ಮತ್ತು ನಿರ್ಗಮನದ ಸಮಯಕ್ಕೆ ತಕ್ಕಂತೆ ಐಷಾರಾಮಿ ಎಸಿ ಬಸ್​ಗಳನ್ನು ಬಿಡಲಾಗಿದೆ.

ಜೂನ್ 27 ರಂದು, ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಪ್ರಧಾನಿ ನರೇಂದ್ರ ಮೋದಿಯವರು ಆನ್ ಲೈನ್ ಮೂಲಕ ಉದ್ಘಾಟಿಸಿದರು. 8 ಬೋಗಿಗಳಿರುವ ವಂದೇ ಭಾರತ್ ರೈಲು ಮಂಗಳವಾರ ಹೊರತುಪಡಿಸಿ ಪ್ರತಿ ದಿನ ಬೆಂಗಳೂರು-ಧಾರವಾಡ ನಡುವೆ ಸಂಚರಿಸುತ್ತದೆ. ಈಗ, ಧಾರವಾಡದ ಹೊರಗಿನ ಜನರಿಗೆ ಸಹಾಯ ಮಾಡಲು, NWKRTC ಹುಬ್ಬಳ್ಳಿಯಿಂದ ಬೆಳಗಾವಿಗೆ ಮತ್ತು ಬೆಳಗಾವಿಯಿಂದ ಹುಬ್ಬಳ್ಳಿಗೆ ಮಲ್ಟಿ-ಆಕ್ಸಲ್ ವೋಲ್ವೋ ಬಸ್‌ಗಳನ್ನು ರಸ್ತೆಗಿಳಿಸಿದೆ.

ಇದನ್ನೂ ಓದಿ: Vande Bharat Express: ದಾವಣಗೆರೆಯಲ್ಲಿ ಧಾರವಾಡ-ಬೆಂಗಳೂರು ವಂದೇ ಭಾರತ್​ ರೈಲಿಗೆ ಕಲ್ಲು

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬೆಳಿಗ್ಗೆ 11:30 ಕ್ಕೆ ಹುಬ್ಬಳ್ಳಿಯನ್ನು ತಲುಪುತ್ತದೆ ಮತ್ತು ವೋಲ್ವೋ ಬಸ್ ಬೆಳಗಾವಿಗೆ ಬಹುತೇಕ ಅದೇ ಸಮಯದಲ್ಲಿ ಹೊರಡುತ್ತದೆ ಮತ್ತು ಎರಡು ಗಂಟೆಗಳೊಳಗೆ ಬಸ್ ನಿಲ್ದಾಣವನ್ನು ತಲುಪುತ್ತದೆ. ಅದೇ ರೀತಿ ವಂದೇ ಭಾರತ್ ರೈಲು ಮಧ್ಯಾಹ್ನ 12:10 ಕ್ಕೆ ತಲುಪಿದ ನಂತರ 12:25 ಕ್ಕೆ ಧಾರವಾಡ ಬಸ್ ನಿಲ್ದಾಣದಿಂದ ರಾಜಹಂಸ ಬಸ್ ಹೊರಡಲಿದೆ.

NWKRTC introduces new buses to Belagavi to help Bengaluru-Dharwad Vande Bharat Express passengers check timings here

ಬೆಳಗಾವಿಯಿಂದ ವೋಲ್ವೋ ಬಸ್ ಬೆಳಿಗ್ಗೆ 11 ಗಂಟೆಗೆ ಹೊರಟು ಮಧ್ಯಾಹ್ನ 1:10 ಕ್ಕೆ ಹುಬ್ಬಳ್ಳಿ ತಲುಪುತ್ತದೆ ಮತ್ತು ರಾಜಹಂಸ ಬಸ್ 11:20 ಕ್ಕೆ ಹೊರಟು ಮಧ್ಯಾಹ್ನ 12:50 ಕ್ಕೆ ಧಾರವಾಡ ತಲುಪುತ್ತದೆ.

ಧಾರವಾಡದಿಂದ ಬೆಂಗಳೂರಿಗೆ ನೂತನವಾಗಿ ಪ್ರಾರಂಭಿಸಿದ ವಂದೇ ಭಾರತ್ ರೈಲ್ವೆ ಅನ್ನು ಸಂಪರ್ಕಿಸಲು ಬೆಳಗಾವಿಯಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ನೂತನ ಮಲ್ಟಿ ಆಕ್ಸೆಲ್ ಸಾರಿಗೆ ಸೇವೆಯನ್ನು ಪ್ರಾರಂಭಿಸಲಾಗಿದೆ. ಹಾಗೂ ಬೆಳಗಾವಿಯಿಂದ ಧಾರವಾಡ ರೈಲ್ವೆ ನಿಲ್ದಾಣಕ್ಕೆ ನೂತನ ರಾಜಹಂಸ ಸಾರಿಗೆ ಸೇವೆಯನ್ನು ಪ್ರಾರಂಭಿಸಲಾಗಿದೆ.

NWKRTC introduces new buses to Belagavi to help Bengaluru-Dharwad Vande Bharat Express passengers check timings here

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು