Bengaluru-Dharwad Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರಿಗಾಗಿ ವಿಶೇಷ ಬಸ್‌ ವ್ಯವಸ್ಥೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ಮತ್ತು ಧಾರವಾಡದಿಂದ ಐಷಾರಾಮಿ ಬಸ್‌ಗಳನ್ನು ಪ್ರಾರಂಭಿಸಿದೆ. ರೈಲಿನ ಆಗಮನ ಮತ್ತು ನಿರ್ಗಮನದ ಸಮಯಕ್ಕೆ ತಕ್ಕಂತೆ ಐಷಾರಾಮಿ ಎಸಿ ಬಸ್​ಗಳನ್ನು ಬಿಡಲಾಗಿದೆ.

Bengaluru-Dharwad Vande Bharat Express: ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯಾಣಿಕರಿಗಾಗಿ ವಿಶೇಷ ಬಸ್‌ ವ್ಯವಸ್ಥೆ
ವಂದೇ ಭಾರತ್ ಎಕ್ಸ್​​ಪ್ರೆಸ್
Follow us
| Updated By: ಆಯೇಷಾ ಬಾನು

Updated on: Jul 04, 2023 | 2:25 PM

ಬೆಂಗಳೂರು: ಕಳೆದ ವಾರ ಆರಂಭಗೊಂಡ ಬೆಂಗಳೂರು-ಧಾರವಾಡ(Bengaluru-Dharwad Vande Bharat Express)  ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಇದೀಗ ವಂದೇ ಭಾರತ್ ರೈಲಿನ ಪ್ರಯೋಜನಗಳನ್ನು ಬೆಳಗಾವಿಯ ಜನರಿಗೆ ವಿಸ್ತರಿಸಲು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಹುಬ್ಬಳ್ಳಿ ಮತ್ತು ಧಾರವಾಡದಿಂದ ಐಷಾರಾಮಿ ಬಸ್‌ಗಳನ್ನು ಪ್ರಾರಂಭಿಸಿದೆ. ರೈಲಿನ ಆಗಮನ ಮತ್ತು ನಿರ್ಗಮನದ ಸಮಯಕ್ಕೆ ತಕ್ಕಂತೆ ಐಷಾರಾಮಿ ಎಸಿ ಬಸ್​ಗಳನ್ನು ಬಿಡಲಾಗಿದೆ.

ಜೂನ್ 27 ರಂದು, ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಪ್ರಧಾನಿ ನರೇಂದ್ರ ಮೋದಿಯವರು ಆನ್ ಲೈನ್ ಮೂಲಕ ಉದ್ಘಾಟಿಸಿದರು. 8 ಬೋಗಿಗಳಿರುವ ವಂದೇ ಭಾರತ್ ರೈಲು ಮಂಗಳವಾರ ಹೊರತುಪಡಿಸಿ ಪ್ರತಿ ದಿನ ಬೆಂಗಳೂರು-ಧಾರವಾಡ ನಡುವೆ ಸಂಚರಿಸುತ್ತದೆ. ಈಗ, ಧಾರವಾಡದ ಹೊರಗಿನ ಜನರಿಗೆ ಸಹಾಯ ಮಾಡಲು, NWKRTC ಹುಬ್ಬಳ್ಳಿಯಿಂದ ಬೆಳಗಾವಿಗೆ ಮತ್ತು ಬೆಳಗಾವಿಯಿಂದ ಹುಬ್ಬಳ್ಳಿಗೆ ಮಲ್ಟಿ-ಆಕ್ಸಲ್ ವೋಲ್ವೋ ಬಸ್‌ಗಳನ್ನು ರಸ್ತೆಗಿಳಿಸಿದೆ.

ಇದನ್ನೂ ಓದಿ: Vande Bharat Express: ದಾವಣಗೆರೆಯಲ್ಲಿ ಧಾರವಾಡ-ಬೆಂಗಳೂರು ವಂದೇ ಭಾರತ್​ ರೈಲಿಗೆ ಕಲ್ಲು

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬೆಳಿಗ್ಗೆ 11:30 ಕ್ಕೆ ಹುಬ್ಬಳ್ಳಿಯನ್ನು ತಲುಪುತ್ತದೆ ಮತ್ತು ವೋಲ್ವೋ ಬಸ್ ಬೆಳಗಾವಿಗೆ ಬಹುತೇಕ ಅದೇ ಸಮಯದಲ್ಲಿ ಹೊರಡುತ್ತದೆ ಮತ್ತು ಎರಡು ಗಂಟೆಗಳೊಳಗೆ ಬಸ್ ನಿಲ್ದಾಣವನ್ನು ತಲುಪುತ್ತದೆ. ಅದೇ ರೀತಿ ವಂದೇ ಭಾರತ್ ರೈಲು ಮಧ್ಯಾಹ್ನ 12:10 ಕ್ಕೆ ತಲುಪಿದ ನಂತರ 12:25 ಕ್ಕೆ ಧಾರವಾಡ ಬಸ್ ನಿಲ್ದಾಣದಿಂದ ರಾಜಹಂಸ ಬಸ್ ಹೊರಡಲಿದೆ.

NWKRTC introduces new buses to Belagavi to help Bengaluru-Dharwad Vande Bharat Express passengers check timings here

ಬೆಳಗಾವಿಯಿಂದ ವೋಲ್ವೋ ಬಸ್ ಬೆಳಿಗ್ಗೆ 11 ಗಂಟೆಗೆ ಹೊರಟು ಮಧ್ಯಾಹ್ನ 1:10 ಕ್ಕೆ ಹುಬ್ಬಳ್ಳಿ ತಲುಪುತ್ತದೆ ಮತ್ತು ರಾಜಹಂಸ ಬಸ್ 11:20 ಕ್ಕೆ ಹೊರಟು ಮಧ್ಯಾಹ್ನ 12:50 ಕ್ಕೆ ಧಾರವಾಡ ತಲುಪುತ್ತದೆ.

ಧಾರವಾಡದಿಂದ ಬೆಂಗಳೂರಿಗೆ ನೂತನವಾಗಿ ಪ್ರಾರಂಭಿಸಿದ ವಂದೇ ಭಾರತ್ ರೈಲ್ವೆ ಅನ್ನು ಸಂಪರ್ಕಿಸಲು ಬೆಳಗಾವಿಯಿಂದ ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ನೂತನ ಮಲ್ಟಿ ಆಕ್ಸೆಲ್ ಸಾರಿಗೆ ಸೇವೆಯನ್ನು ಪ್ರಾರಂಭಿಸಲಾಗಿದೆ. ಹಾಗೂ ಬೆಳಗಾವಿಯಿಂದ ಧಾರವಾಡ ರೈಲ್ವೆ ನಿಲ್ದಾಣಕ್ಕೆ ನೂತನ ರಾಜಹಂಸ ಸಾರಿಗೆ ಸೇವೆಯನ್ನು ಪ್ರಾರಂಭಿಸಲಾಗಿದೆ.

NWKRTC introduces new buses to Belagavi to help Bengaluru-Dharwad Vande Bharat Express passengers check timings here

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್