AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ: ಪ್ರಸೂತಿ ತಜ್ಞ ಅಮಾನತು

ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ ಪಡೆದ ಪ್ರಸೂತಿ ತಜ್ಞ ಡಾ.ರಾಮಚಂದ್ರರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ.

Bengaluru News: ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ: ಪ್ರಸೂತಿ ತಜ್ಞ ಅಮಾನತು
ಪ್ರಾತಿನಿಧಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on:Jul 20, 2023 | 9:58 PM

Share

ಬೆಂಗಳೂರು, ಜುಲೈ 20: ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ (bribery) ಪಡೆದ ಪ್ರಸೂತಿ ತಜ್ಞ ಡಾ.ರಾಮಚಂದ್ರರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ. ಯಲಹಂಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಮಾಡಿಸಲು ಮಂಜುಳಾ ಎಂಬ ಮಹಿಳೆಗೆ ಸಿಸೇರಿಯನ್​ 15 ಸಾವಿರ ರೂ. ಲಂಚಕ್ಕೆ ಬೇಡಿಕೆ ಆರೋಪ ಮಾಡಲಾಗಿದೆ.

ಲೋಕಾಯುಕ್ತರ ತನಿಖೆಯಲ್ಲಿ 10 ಸಾವಿರ ಹಣ ಪಡೆದಿರುವುದು ಸಾಬೀತಾಗಿದೆ. ಹಾಗಾಗಿ ಲೋಕಾಯುಕ್ತರ ತನಿಖೆ ಆಧರಿಸಿ ವೈದ್ಯ ಡಾ.ರಾಮಚಂದ್ರ ವಿರುದ್ಧ ಕ್ರಮಕೈಗೊಳ್ಳಲಾಗಿದೆ.

ಇದನ್ನೂ ಓದಿ: Mysuru News: ಮೈಸೂರಿನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ; ವಿವಿಧ ರಸ್ತೆಗಳಲ್ಲಿ ಪುಂಡು ಪೋಕರಿಗಳಿಂದ ಬೈಕ್ ವ್ಹೀಲಿಂಗ್​

ಬೀದರ್ ನಗರಸಭೆಯಲ್ಲಿ ಲಂಚ ದರ್ಬಾರ್​

ಬೀದರ್​: ಬೀದರ್ ನಗರಸಭೆಯಲ್ಲಿ ಲಂಚ ದರ್ಬಾರ್​ ನಡೆಯುತ್ತಿದೆ. ಶುಲ್ಕದ ನೆಪದಲ್ಲಿ ಸಿಬ್ಬಂದಿಗಳು ಲಂಚ ಪಡೆಯುತ್ತಿದ್ದಾರೆ. ಜನನ ಪ್ರಮಾಣ ಪತ್ರಕ್ಕೆ ನೂರು ರೂ. ಸ್ವೀಕರಿಸುವಾಗ ಸಿಬ್ಬಂದಿ ಸಿಕ್ಕಿಬಿದಿದ್ದು, ಮೊಬೈಲ್​ನಲ್ಲಿ  ವಿಡಿಯೋ ಸೆರೆ ಆಗಿದೆ.

ಸಂಸದರ ಬಗ್ಗೆ ಅವಹೇಳನಕಾರಿ ಪೋಸ್ಟ್: ಪೊಲೀಸ್ ಹೆಡ್ ಕಾನ್ಸಟೇಬಲ್ ಅಮಾನತು 

ಮೈಸೂರು: ಸಂಸದರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಆರೋಪದಲ್ಲಿ ಮೈಸೂರಿನಲ್ಲಿ ಪೊಲೀಸ್ ಹೆಡ್ ಕಾನ್ಸಟೇಬಲ್ ಅಮಾನತು ಮಾಡಲಾಗಿತ್ತು. ವಿ ವಿ.ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಬಿ ಪ್ರದೀಪ್ ಅಮಾನತಾದ ಹೆಡ್ ಕಾನ್ಸಟೇಬಲ್.

ಇದನ್ನೂ ಓದಿ: Ramanagara News: ಧ್ವಜಸಂಹಿತೆ ಉಲ್ಲಂಘನೆ: ರಾಮನಗರ ಡಿಸಿ ಕಚೇರಿ ಮೇಲೆ ಹಾರಾಡುತ್ತಿದೆ ಹರಿದ ತ್ರಿವರ್ಣ ಧ್ವಜ

ಪ್ರದೀಪ್​ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಮೆಂಟ್ ಮಾಡಿದ್ದ ಬಗ್ಗೆ ಸ್ಕ್ರೀನ್ ಶಾಟ್ ಜೊತೆ ಪೊಲೀಸ್ ಕಮಿಷನರ್​ಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಸಂಸದ ಪ್ರತಾಪ ಸಿಂಹ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತು ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:58 pm, Thu, 20 July 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ