Bengaluru News: ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ: ಪ್ರಸೂತಿ ತಜ್ಞ ಅಮಾನತು

| Updated By: ಗಂಗಾಧರ​ ಬ. ಸಾಬೋಜಿ

Updated on: Jul 20, 2023 | 9:58 PM

ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ ಪಡೆದ ಪ್ರಸೂತಿ ತಜ್ಞ ಡಾ.ರಾಮಚಂದ್ರರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ.

Bengaluru News: ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ: ಪ್ರಸೂತಿ ತಜ್ಞ ಅಮಾನತು
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು, ಜುಲೈ 20: ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಲಂಚ (bribery) ಪಡೆದ ಪ್ರಸೂತಿ ತಜ್ಞ ಡಾ.ರಾಮಚಂದ್ರರನ್ನು ಅಮಾನತುಗೊಳಿಸಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ. ಯಲಹಂಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಮಾಡಿಸಲು ಮಂಜುಳಾ ಎಂಬ ಮಹಿಳೆಗೆ ಸಿಸೇರಿಯನ್​ 15 ಸಾವಿರ ರೂ. ಲಂಚಕ್ಕೆ ಬೇಡಿಕೆ ಆರೋಪ ಮಾಡಲಾಗಿದೆ.

ಲೋಕಾಯುಕ್ತರ ತನಿಖೆಯಲ್ಲಿ 10 ಸಾವಿರ ಹಣ ಪಡೆದಿರುವುದು ಸಾಬೀತಾಗಿದೆ. ಹಾಗಾಗಿ ಲೋಕಾಯುಕ್ತರ ತನಿಖೆ ಆಧರಿಸಿ ವೈದ್ಯ ಡಾ.ರಾಮಚಂದ್ರ ವಿರುದ್ಧ ಕ್ರಮಕೈಗೊಳ್ಳಲಾಗಿದೆ.

ಇದನ್ನೂ ಓದಿ: Mysuru News: ಮೈಸೂರಿನಲ್ಲಿ ಮುಂದುವರಿದ ಪುಂಡರ ಅಟ್ಟಹಾಸ; ವಿವಿಧ ರಸ್ತೆಗಳಲ್ಲಿ ಪುಂಡು ಪೋಕರಿಗಳಿಂದ ಬೈಕ್ ವ್ಹೀಲಿಂಗ್​

ಬೀದರ್ ನಗರಸಭೆಯಲ್ಲಿ ಲಂಚ ದರ್ಬಾರ್​

ಬೀದರ್​: ಬೀದರ್ ನಗರಸಭೆಯಲ್ಲಿ ಲಂಚ ದರ್ಬಾರ್​ ನಡೆಯುತ್ತಿದೆ. ಶುಲ್ಕದ ನೆಪದಲ್ಲಿ ಸಿಬ್ಬಂದಿಗಳು ಲಂಚ ಪಡೆಯುತ್ತಿದ್ದಾರೆ. ಜನನ ಪ್ರಮಾಣ ಪತ್ರಕ್ಕೆ ನೂರು ರೂ. ಸ್ವೀಕರಿಸುವಾಗ ಸಿಬ್ಬಂದಿ ಸಿಕ್ಕಿಬಿದಿದ್ದು, ಮೊಬೈಲ್​ನಲ್ಲಿ  ವಿಡಿಯೋ ಸೆರೆ ಆಗಿದೆ.

ಸಂಸದರ ಬಗ್ಗೆ ಅವಹೇಳನಕಾರಿ ಪೋಸ್ಟ್: ಪೊಲೀಸ್ ಹೆಡ್ ಕಾನ್ಸಟೇಬಲ್ ಅಮಾನತು 

ಮೈಸೂರು: ಸಂಸದರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಆರೋಪದಲ್ಲಿ ಮೈಸೂರಿನಲ್ಲಿ ಪೊಲೀಸ್ ಹೆಡ್ ಕಾನ್ಸಟೇಬಲ್ ಅಮಾನತು ಮಾಡಲಾಗಿತ್ತು. ವಿ ವಿ.ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಬಿ ಪ್ರದೀಪ್ ಅಮಾನತಾದ ಹೆಡ್ ಕಾನ್ಸಟೇಬಲ್.

ಇದನ್ನೂ ಓದಿ: Ramanagara News: ಧ್ವಜಸಂಹಿತೆ ಉಲ್ಲಂಘನೆ: ರಾಮನಗರ ಡಿಸಿ ಕಚೇರಿ ಮೇಲೆ ಹಾರಾಡುತ್ತಿದೆ ಹರಿದ ತ್ರಿವರ್ಣ ಧ್ವಜ

ಪ್ರದೀಪ್​ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಮೆಂಟ್ ಮಾಡಿದ್ದ ಬಗ್ಗೆ ಸ್ಕ್ರೀನ್ ಶಾಟ್ ಜೊತೆ ಪೊಲೀಸ್ ಕಮಿಷನರ್​ಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಸಂಸದ ಪ್ರತಾಪ ಸಿಂಹ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಇಲಾಖಾ ವಿಚಾರಣೆ ಬಾಕಿ ಇರಿಸಿ ಅಮಾನತು ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:58 pm, Thu, 20 July 23