AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.6 ರಿಂದ ನಮ್ಮ ಮೆಟ್ರೋ ನೇರಳೆ ಮಾರ್ಗ ಪೂರ್ಣ ಪ್ರಮಾಣದ ಸಂಚಾರ ಸಾಧ್ಯತೆ 

ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (CMRS) ಈಗಾಗಲೇ ಎರಡೂ ಮಾರ್ಗಗಳನ್ನು ಪರಿಶೀಲಿಸಿದ್ದಾರೆ. ಜೊತೆಗೆ ಈಗಾಗಲೇ ಕೆಆರ್​ಪುರಂ ಯಿಂದ ಬೈಯಪ್ಪನಹಳ್ಳಿ ಸುರಕ್ಷತೆಯ ಅನುಮೋದನೆಯನ್ನು ಸ್ವೀಕರಿಸಿದ್ದಾರೆ

ಅ.6 ರಿಂದ ನಮ್ಮ ಮೆಟ್ರೋ ನೇರಳೆ ಮಾರ್ಗ ಪೂರ್ಣ ಪ್ರಮಾಣದ ಸಂಚಾರ ಸಾಧ್ಯತೆ 
ನಮ್ಮ ಮೆಟ್ರೋ ನೇರಳೆ ಮಾರ್ಗದ ಪೂರ್ಣ ಸಂಚಾರ ಸಾಧ್ಯತೆ
TV9 Web
| Edited By: |

Updated on:Oct 05, 2023 | 9:57 PM

Share

ಬೆಂಗಳೂರು, ಅ.05:  ನಮ್ಮ ಮೆಟ್ರೋದ ನೇರಳೆ ಬಣ್ಣ (Purple Line Metro)ದ ಬಹು ನಿರೀಕ್ಷಿತ ಕೆಆರ್​ಪುರಂ-ಬೈಯಪ್ಪನಹಳ್ಳಿ ಮತ್ತು ಕೆಂಗೇರಿ-ಚಲ್ಲಘಟ್ಟ ಎರಡು ಮಾರ್ಗಗಳು, ಅಕ್ಟೋಬರ್ 6 ರಿಂದ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ ಎಂದು ಮಾಧ್ಯಮವೊಂದರಲ್ಲಿ ವರದಿಯಾಗಿದೆ. ಈ ಎರಡು ಮೆಟ್ರೋ ಮಾರ್ಗಗಳ ಉದ್ಘಾಟನೆಯೊಂದಿಗೆ ನೇರಳೆ ಮಾರ್ಗವು ಸಂಪೂರ್ಣವಾಗಿ ಕಾರ್ಯನಿರ್ವಹಿಸಲಿದೆ. ಇದರಿಂದ ಬೆಂಗಳೂರು ಪೂರ್ವದ  ಜನದಟ್ಟಣೆ ಕಡಿಮೆ ಆಗುವ ನಿರೀಕ್ಷೆಯಿದೆ.

ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (CMRS) ಈಗಾಗಲೇ ಎರಡೂ ಮಾರ್ಗಗಳನ್ನು ಪರಿಶೀಲಿಸಿದ್ದಾರೆ. ಜೊತೆಗೆ ಈಗಾಗಲೇ ಕೆಆರ್​ಪುರಂ ಯಿಂದ ಬೈಯಪ್ಪನಹಳ್ಳಿ ಸುರಕ್ಷತೆಯ ಅನುಮೋದನೆಯನ್ನು ಸ್ವೀಕರಿಸಿದ್ದಾರೆ. ಕೆಂಗೇರಿ-ಚಲ್ಲಘಟ್ಟ ಮಾರ್ಗಕ್ಕೆ ನಾಳೆ(ಅ.06) ಸಿಎಂಆರ್‌ಎಸ್‌ ಅನುಮೋದನೆ ದೊರೆಯುವ ನಿರೀಕ್ಷೆಯಿದ್ದು, ಶುಕ್ರವಾರ ಉದ್ಘಾಟನೆಗೆ ಬಿಎಂಆರ್‌ಸಿಎಲ್‌ ಪ್ಲ್ಯಾನ್​ ಮಾಡಿದೆ.

ಇದನ್ನೂ ಓದಿ:Pink Line: ಬೆಂಗಳೂರಿನ ಅತಿ ಉದ್ದದ ಭೂಗತ ಮೆಟ್ರೋ ಮಾರ್ಗ ಬಹುತೇಕ ರೆಡಿ, ನಮ್ಮ ಮೆಟ್ರೋ ರೈಲು ಸಂಚಾರಕ್ಕೆ BMRCL ಸಿದ್ಧತೆ

ಈ ಕುರಿತು ಮಾತನಾಡಿದ ಹಿರಿಯ ಅಧಿಕಾರಿಯೊಬ್ಬರು, “ಕೆಂಗೇರಿ-ಚಲ್ಲಘಟ್ಟ ಮಾರ್ಗಕ್ಕೆ ಸಿಎಂಆರ್‌ಎಸ್‌ನಿಂದ ಇನ್ನೂ ಸುರಕ್ಷತೆಯ ಅನುಮೋದನೆ ಸಿಕ್ಕಿಲ್ಲ. ನಾಳೆ ಸಿಗುವ ನಿರೀಕ್ಷೆಯಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಅಕ್ಟೋಬರ್ 6 ರಿಂದ ನೇರಳೆ ಮಾರ್ಗವು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತದೆ ಎಂದರು.

ಇನ್ನು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಇತ್ತೀಚೆಗೆ ಕೆಆರ್​ಪುರಂ-ಬೈಯಪ್ಪನಹಳ್ಳಿ ಮೆಟ್ರೋ ಮಾರ್ಗವನ್ನು ಪ್ರಾರಂಭಿಸಲು ನಿರಂತರ ವಿಳಂಬ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ‘ಪ್ರತಿದಿನ ಸುಮಾರು 5 ರಿಂದ 6 ಲಕ್ಷ ಜನರು ಬೆಂಗಳೂರು ಮೆಟ್ರೋವನ್ನು ಬಳಸುತ್ತಾರೆ. ಬೈಯಪ್ಪನಹಳ್ಳಿ-ಕೆಆರ್ ಪುರಂ ಮೆಟ್ರೋ ವಿಭಾಗವು ತೆರೆದರೆ, ಸುಮಾರು 50-60 ಪ್ರತಿಶತದಷ್ಟು ಜನರಿಗೆ ಅನುಕೂಲವಾಗಲಿದೆ. ರಾಜ್ಯ ಸರ್ಕಾರವು ಎಲ್ಲಾ ಅನುಮೋದನೆಗಳು ಮತ್ತು ಹಸಿರು ನಿಶಾನೆಗಳನ್ನು ಪಡೆದಿದ್ದರೂ ಸಹ. ಸಿಎಂಆರ್‌ಎಸ್ ಪರಿಶೀಲನೆಯ ನಂತರವೂ ಈ ಮಾರ್ಗವನ್ನು ತೆರೆಯಲು ವಿಳಂಬ ಮಾಡುತ್ತಿದೆ ಎಂದು ಸೂರ್ಯ ವಾಗ್ದಾಳಿ ನಡೆಸಿದ್ದರು.

ಇದನ್ನೂ ಓದಿ:ಮೆಟ್ರೋ ಯೆಲ್ಲೋ ಮಾರ್ಗ ಕಾಮಗಾರಿ ಈಗಾಗಲೇ ವಿಳಂಬವಾಗಿರುವುದರಿಂದ ಲೋಕಾರ್ಪಣೆಗಾಗಿ ಗಣ್ಯರನ್ನು ಕಾಯುವುದು ಬೇಡ: ತೇಜಸ್ವೀ ಸೂರ್ಯ, ಸಂಸದ

ಜುಲೈ ಮಧ್ಯದಲ್ಲಿ ಕೆಆರ್ ಪುರಂ-ಬೈಯಪ್ಪನಹಳ್ಳಿ ಮಾರ್ಗವನ್ನು ಉದ್ಘಾಟಿಸುವ ಗುರಿ ಇದೆ ಎಂದು ಬಿಎಂಆರ್‌ಸಿಎಲ್ ಈ ಹಿಂದೆ ಘೋಷಿಸಿತ್ತು. ಒಮ್ಮೆ ಉದ್ಘಾಟನೆಗೊಂಡರೆ, ನೇರಳೆ ಮಾರ್ಗವು ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆಯನ್ನು ಹೆಚ್ಚಿಸುವ ನಿರೀಕ್ಷೆಯಿದೆ. ಏಕೆಂದರೆ ವೈಟ್‌ಫೀಲ್ಡ್ ಹಲವಾರು ಟೆಕ್ ಪಾರ್ಕ್‌ಗಳನ್ನು ಹೊಂದಿದೆ ಮತ್ತು ನಗರದ ವಿವಿಧ ಭಾಗಗಳ ಉದ್ಯೋಗಿಗಳು ಅಲ್ಲಿ ಕೆಲಸ ಮಾಡುತ್ತಾರೆ. ನೇರಳೆ ಮಾರ್ಗದಲ್ಲಿರುವ ಈ 2 ಕಿಮೀ ವಿಸ್ತರಣೆಯು ಬೆಂಗಳೂರು ಪೂರ್ವ , ದಕ್ಷಿಣ ಮತ್ತು ಮಧ್ಯ ಬೆಂಗಳೂರಿನ ಹಲವು ಪ್ರದೇಶಗಳಿಗೆ ಸಂಪರ್ಕಿಸುತ್ತದೆ. ಹೀಗಾಗಿ ಜನರು ಮೆಟ್ರೋವನ್ನು ಬಳಸಲಿದ್ದಾರೆ. ಜೊತೆಗೆ ಇದರಿಂದ ವೈಟ್‌ಫೀಲ್ಡ್ ಪ್ರದೇಶದಲ್ಲಿ ಟ್ರಾಫಿಕ್ ದಟ್ಟಣೆಯು ಕಡಿಮೆಯಾಗುವ ಸಾಧ್ಯತೆಯಿದೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Thu, 5 October 23

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ