AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Odisha Train Accident: ಬೆಂಗಳೂರಿನಿಂದ ಹೌರಾ ಎಕ್ಸ್​ಪ್ರೆಸ್​ನಲ್ಲಿ ಪ್ರಯಾಣಿಸುತ್ತಿದ್ದ110 ಕನ್ನಡಿಗರು ಪಾರಾಗಿದ್ದೇಗೆ? ಇಲ್ಲಿದೆ

ಒಡಿಶಾದ ಬಾಲಸೋರ್​ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ 110 ಜನ ಕನ್ನಡಿಗರು ಕೂಡ ಪ್ರಯಾಣಿಸಿದ್ದು, ದುರಂತದಿಂದ ಪಾರಾಗಿದ್ದಾರೆ.

Odisha Train Accident: ಬೆಂಗಳೂರಿನಿಂದ ಹೌರಾ ಎಕ್ಸ್​ಪ್ರೆಸ್​ನಲ್ಲಿ ಪ್ರಯಾಣಿಸುತ್ತಿದ್ದ110 ಕನ್ನಡಿಗರು ಪಾರಾಗಿದ್ದೇಗೆ? ಇಲ್ಲಿದೆ
ದುರಂತದಿಂದ ಪಾರಾದ ಕನ್ನಡಿಗರು
ವಿವೇಕ ಬಿರಾದಾರ
|

Updated on:Jun 03, 2023 | 7:43 AM

Share

ಬೆಂಗಳೂರು: ಒಡಿಶಾದ ಬಾಲಸೋರ್​ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತದಲ್ಲಿ ಸದ್ಯದ ಮಾಹಿತಿ ಪ್ರಕಾರ 233 ಜನರು ಸಾವನ್ನಪ್ಪಿದ್ದು 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇನ್ನು ಅಪಘಾತ ಕೋರಮಂಡಲ್​​ ಎಕ್ಸಪ್ರೆಸ್​​, ಬೈಯಪ್ಪನಹಳ್ಳಿ ಸರ್​​ ಎಂ ವಿಶ್ವೇಶ್ವರಯ್ಯ ಟರ್ಮಿನಲ್​-ಹೌರಾ ಎಕ್ಸಪ್ರೆಸ್​​ ಮತ್ತು ಗೂಡ್ಸ್​​ ರೈಲುಗಳ ಮಧ್ಯೆ ಸಂಭವಿಸಿದೆ. ಬೈಯಪ್ಪನಹಳ್ಳಿ ಸರ್​​ ಎಂ ವಿಶ್ವೇಶ್ವರಯ್ಯ ಟರ್ಮಿನಲ್ (ಬೆಂಗಳೂರು) ಹೌರಾ ಎಕ್ಸ್​ಪ್ರೆಸ್​ನಲ್ಲಿ 110 ಜನ ಕನ್ನಡಿಗರು ಕೂಡ ಪ್ರಯಾಣಿಸಿದ್ದು, ದುರಂತದಿಂದ ಪಾರಾಗಿದ್ದಾರೆ. ಈ ಪ್ರಯಾಣಿಕರು ಪಾರಾಗಿದ್ದು ಹೇಗೆ ಇಲ್ಲಿದೆ ಓದಿ..

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ 110 ಜನ ಬೈಯಪ್ಪನಹಳ್ಳಿ ಸರ್​​ ಎಂ ವಿಶ್ವೇಶ್ವರಯ್ಯ ಟರ್ಮಿನಲ್​-ಹೌರಾ ಎಕ್ಸಪ್ರೆಸ್​​​​ನಲ್ಲಿ ಪ್ರಯಾಣಿಸುತ್ತಿದ್ದರು. ಇವರು ಬೆಂಗಳೂರಿನಿಂದ ಕೊನೆಯ S5, S6, S7 ಬೋಗಿಯಲ್ಲಿ ಪ್ರಯಾಣ ಮಾಡುತ್ತಿದ್ದರು.

ಇದನ್ನೂ ಓದಿ: ಒಡಿಶಾದ ಬಾಲಸೋರ್​​ನಲ್ಲಿ ಭೀಕರ ರೈಲು ದುರಂತ, ಸಾವಿನ ಸಂಖ್ಯೆ 233ಕ್ಕೆ ಏರಿಕೆ

ರೈಲು ನಿನ್ನೆ (ಜೂ.03) ಮಧ್ಯಾಹ್ನ ಕೋಲ್ಕತ್ತಾ ಬಳಿ ಇಂಜಿನ್​ ಬದಲಿಸಿದೆ. ಇದರಿಂದ ಕಳಸ ತಾಲೂಕಿನ 110 ಜನ ರೈಲಿನ ಮೊದಲ ಬೋಗಿಗೆ ಶಿಫ್ಟ್ ಆಗಿದ್ದರು. ಮೊದಲ ಬೋಗಿಗೆ ಶಿಫ್ಟ್ ಆದ ಹಿನ್ನೆಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಕೊನೆಯ 4 ಬೋಗಿಗಳಿಗೆ ರೈಲು ಡಿಕ್ಕಿ ಹೊಡೆದಿದೆ. ಇನ್ನು ಈ ನಿಲ್ದಾಣದಿ ರೈಲಿನಲ್ಲಿ 1294 ಪ್ರಯಾಣಿಕರು ತೆರಳಿದ್ದರು. 1294 ಪ್ರಯಾಣಿಕರ ಪೈಕಿ 994 ಜನ ಟಿಕೆಟ್‌ ಬುಕ್ ಮಾಡಿಸಿದ್ದರು.

SWR ನೀಡಲಾದ ಸಹಾಯವಾಣಿ

ಬೆಂಗಳೂರು(Bangalor): 080-22356409

ಬಂಗಾರಪೇಟೆ(Bangarpet): 08153 255253

ಕುಪ್ಪಂ(Kuppam): 8431403419

ಎಸ್​ಎಮ್​ವಿಬಿ(SMVB) : 09606005129

ಕೆಜೆಎಮ್​(KJM):+91 88612 03980

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:38 am, Sat, 3 June 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ