AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ ರೈಲು ದುರಂತ: ಹೌರಾದಲ್ಲಿ ಸಿಲುಕಿದ್ದ ಕ್ರೀಡಾಪಟುಗಳು ರಾಜ್ಯಕ್ಕೆ ವಾಪಸ್, ಧನ್ಯವಾದ ಸಲ್ಲಿಸಿದ ಕೋಚ್ಸ್

ಪ.ಬಂಗಾಳದ ಹೌರಾದಲ್ಲಿ ಸಿಲುಕಿದ್ದ ಎಲ್ಲಾ ಕ್ರೀಡಾಪಟುಗಳು ವಾಪಸ್​​​​ ಆಗಿದ್ದಾರೆ. ಇಂಡಿಗೋ ವಿಮಾನದ ಮೂಲಕ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​ಗೆ ಬಂದಿಳಿದಿದ್ದಾರೆ.

ಆಯೇಷಾ ಬಾನು
ಆಯೇಷಾ ಬಾನು|

Updated on: Jun 04, 2023 | 9:14 AM

Share

ಬೆಂಗಳೂರು: ಪಶ್ಚಿಮ ಬಂಗಾಳದ ಚಂದನ್ ನಗರದಲ್ಲಿ ನಡೆಯುತ್ತಿದ್ದ ನ್ಯಾಷನಲ್ ಚಾಂಪಿಯನ್ ಶಿಪ್​ನಲ್ಲಿ ಪಾಲ್ಗೊಳ್ಳಲು 24 ಜನ ಕ್ರೀಡಾಪಟುಗಳು ಮತ್ತು ಕೋಚ್ಗಳು ಸೇರಿದಂತೆ ಒಟ್ಟು 32 ಜನ ತೆರಳಿದ್ದರು. ಆದ್ರೆ ಶುಕ್ರವಾರ ಒಡಿಸ್ಸಾದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಿಂದಾಗಿ ಮರಳಿ ರಾಜ್ಯಕ್ಕೆ ಬರಲು ಆಗದೆ ಕ್ರೀಡಾಪಟುಗಳು ಪರಿತಪಿಸುತ್ತಿದ್ದರು. ಸದ್ಯ ರಾಜ್ಯ ಸರಕಾರ ನಿಯೋಜಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಸಹಾಯದಿಂದ ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ಸಾಗಿದ್ದಾರೆ.

ಪ.ಬಂಗಾಳದ ಹೌರಾದಲ್ಲಿ ಸಿಲುಕಿದ್ದ ಎಲ್ಲಾ ಕ್ರೀಡಾಪಟುಗಳು ವಾಪಸ್​​​​ ಆಗಿದ್ದಾರೆ. ಇಂಡಿಗೋ ವಿಮಾನದ ಮೂಲಕ ದೇವನಹಳ್ಳಿ ಬಳಿಯ ಕೆಂಪೇಗೌಡ ಏರ್​ಪೋರ್ಟ್​ಗೆ ಬಂದಿಳಿದಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಕ್ರೀಡಾಪಟುಗಳನ್ನು ಹೂಗುಚ್ಚ ನೀಡಿ ಸ್ವಾಗತಿಸಿದರು. ಮೇ 24ರಂದು ರಾಜ್ಯದಿಂದ ಹೌರಾಗೆ 32 ಕ್ರೀಡಾಪಟುಗಳು ತೆರಳಿದ್ದರು. ಸದ್ಯ ಮೊದಲ ಹಂತದಲ್ಲಿ ರಾಜ್ಯಕ್ಕೆ 23 ಕ್ರೀಡಾಪಟುಗಳು ವಾಪಸ್​​ ಆಗಿದ್ದಾರೆ.

ಇದನ್ನೂ ಓದಿ: Odisha Train Accident: ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಬಸ್​ ಅಪಘಾತ

ಇನ್ನು ಬೆಂಗಳೂರು ಏರ್​ಪೋರ್ಟ್​ನಲ್ಲಿ ಮಾತನಾಡಿದ ವಾಲಿಬಾಲ್ ಮಹಿಳಾ ತಂಡದ ಕೋಚ್ ಮಮತಾ ಶೆಟ್ಟಿ, ದುರಂತಕ್ಕೀಡಾದ ಕೋರಮಂಡಲ್ ಎಕ್ಸ್​​​ಪ್ರೆಸ್​​​ ರೈಲಿನಲ್ಲಿ ಬರಬೇಕಿತ್ತು. ಅದೃಷ್ಟವಶಾತ್ ಕೋರಮಂಡಲ್ ಎಕ್ಸ್​​​ಪ್ರೆಸ್ ರೈಲಿನ ಟಿಕೆಟ್​ ಸಿಗಲಿಲ್ಲ. ನಮ್ಮ ಅಸೋಸಿಯೇಷನ್ ಸಹ ಒಟ್ಟಾಗಿ ಬರುವಂತೆ ಸೂಚನೆ ನೀಡಿತ್ತು. ಹೀಗಾಗಿ ನಾವು ಯಶವಂತಪುರ ಎಕ್ಸ್​​ಪ್ರೆಸ್​​ ರೈಲಿಗಾಗಿ ಕಾಯುತ್ತಿದ್ದೆವು. ಅಷ್ಟರಲ್ಲಿ ರೈಲು ಅಪಘಾತದ ಬಗ್ಗೆ ಮಾಹಿತಿ ಬಂತು. ಯುವಕರು, ಯುವತಿಯರಿದ್ದ ಕಾರಣ ಸಾಕಷ್ಟು ಆತಂಕವಾಗಿತ್ತು. ಮಂಡ್ಯ ಮೂಲದವರು ನಮಗೆ ಊಟ ಉಪಚಾರ ಮಾಡಿದರು. ಮಂಡ್ಯ ಮೂಲದವರು ಮನೆಯಲ್ಲಿಟ್ಟುಕೊ‌ಂಡು ಉಪಚಾರ ಮಾಡಿದ್ರು. ಟಿವಿ9, ಸಿಎಂ ನಮಗೆ ಸಾಥ್ ನೀಡಿದ್ದಾರೆ, ಎಲ್ಲರಿಗೂ ಧನ್ಯವಾದ ‌ಎಂದರು.

ರಾಜ್ಯಕ್ಕೆ ಸುರಕ್ಷಿತವಾಗಿ ವಾಪಸ್ ಬಂದಿದ್ದಕ್ಕೆ ಖುಷಿಯಾಗುತ್ತಿದೆ

ಇದೇ ವೇಳೆ ಮತ್ತೋರ್ವ ಮಹಿಳಾ ಕೋಚ್ ಸಂಸತ ಹಂಚಿಕೊಂಡಿದ್ದಾರೆ. ರಾಜ್ಯಕ್ಕೆ ಸುರಕ್ಷಿತವಾಗಿ ವಾಪಸ್ ಬಂದಿದ್ದಕ್ಕೆ ಖುಷಿಯಾಗುತ್ತಿದೆ. ಊಟ, ನೀರಿಗೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಮಂಡ್ಯ ಮೂಲದ ರೈಲ್ವೆ ಅಧಿಕಾರಿ ನಮಗೆ ಸಹಾಯ ಮಾಡಿದ್ರು. ಬಳಿಕ ಸರ್ಕಾರ ವಿಮಾನ ಮೂಲಕ ನಮ್ಮನ್ನು ವಾಪಸ್ ಕರೆಸಿಕೊಂಡಿದೆ. ರಾಜ್ಯಕ್ಕೆ ಬರಲು ನೆರವು ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದು ಪಶ್ಚಿಮ ಬಂಗಾಳದ ಹೌರಾದಿಂದ ವಾಪಸಾದ ತೇಜಸ್ವಿನಿ ತಿಳಿಸಿದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ