AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ ರೈಲು ದುರಂತ: ಹೌರಾದಲ್ಲಿ ಸಿಲುಕಿರುವ ಕರ್ನಾಟಕದ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಸಂತೋಷ್ ಲಾಡ್

ಒಡಿಶಾದ ಬಾಲಸೋರ್​​ನಲ್ಲಿ ಸಂಭವಿಸಿದ ರೈಲು ದುರಂತ ಪ್ರಕರಣ ಹಿನ್ನೆಲೆ ಪಶ್ಚಿಮ ಬಂಗಾಳದ ಹೌರಾದಲ್ಲಿ ಸಿಲುಕಿರುವ ಕರ್ನಾಟಕದ ಕ್ರೀಡಾಪಟುಗಳಿಗೆ ಸಂತೋಷ್ ಲಾಡ್ ಅವರು ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ.

ಒಡಿಶಾ ರೈಲು ದುರಂತ: ಹೌರಾದಲ್ಲಿ ಸಿಲುಕಿರುವ ಕರ್ನಾಟಕದ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಸಂತೋಷ್ ಲಾಡ್
ಒಡಿಶಾದಲ್ಲಿ ರೈಲು ದುರಂತ ಹಿನ್ನೆಲೆ ಹೌರಾದಲ್ಲಿ ಸಿಲುಕಿರುವ ಕರ್ನಾಟಕದ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಸಂತೋಷ್ ಲಾಡ್
Rakesh Nayak Manchi
Rakesh Nayak Manchi|

Updated on: Jun 03, 2023 | 5:38 PM

Share

ಒಡಿಶಾದ  (Odisha Train Accident) ಬಾಲಸೋರ್​​ನಲ್ಲಿ (Balasore) ಸಂಭವಿಸಿದ ರೈಲು ದುರಂತ ಪ್ರಕರಣ ಸಂಬಂಧ ಕನ್ನಡಿಗರ ಸುರಕ್ಷತೆ ಹೆಗಲ ಮೇಲೆ ಹೊತ್ತುಕೊಂಡಿರುವ ಸಚಿವ ಸಂತೋಷ್ ಲಾಡ್ (Santosh Lad) ಅವರು ಪಶ್ಚಿಮ ಬಂಗಾಳದ ಹೌರಾದಲ್ಲಿ ಸಿಲುಕಿರುವ ಕರ್ನಾಟಕದ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಇದರ ಜೊತೆಗೆ ರಾಜ್ಯದ ವಿವಿಧ ಭಾಗಗಳಿಂದ ತೆರಳಿರುವ 32 ವಾಲಿಬಾಲ್ ಆಟಗಾರರು ನಾಳೆ ಬೆಂಗಳೂರಿಗೆ ಬರಲು ಕ್ರೀಡಾಪಟುಗಳಿಗೆ ವಿಮಾನದ ವ್ಯವಸ್ಥೆ ಮಾಡಲಾಗಿದೆ.

ನಾಳೆ (ಜೂನ್ 4) ಮುಂಜಾನೆ 4.15ಕ್ಕೆ ಕೋಲ್ಕತ್ತಾದಿಂದ ವಿಮಾನದ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಮೇ 24ರಂದು ರಾಜ್ಯದಿಂದ ಹೌರಾಗೆ ತೆರಳಿರುವ ಕ್ರೀಡಾಪಟುಗಳು ನಿನ್ನೆ ರಾತ್ರಿ 10.55ಕ್ಕೆ ಎಕ್ಸ್‌ಪ್ರೆಸ್‌ ರೈಲಿನಲ್ಲಿ ವಾಪಸಾಗಬೇಕಿತ್ತು. ಆದರೆ ಒಡಿಶಾದಲ್ಲಿ ರೈಲು ದುರಂತ ಹಿನ್ನೆಲೆ ರೈಲುಗಳ ಸಂಚಾರ ರದ್ದುಗೊಂಡಿವೆ. ಪರಿಣಾಮ ಕ್ರೀಡಾಪಟಗಳು ಹೌರಾದಲ್ಲೇ ಉಳಿದುಕೊಂಡಿದ್ದಾರೆ.

ಇದನ್ನೂ ಓದಿ: Odisha train accident: ಒಡಿಶಾ ರೈಲು ದುರಂತಕ್ಕೆ ನಿರ್ಲಕ್ಷ್ಯ ಕಾರಣವೇ ಆಥವಾ ತಾಂತ್ರಿಕ ದೋಷವೇ?

ಒಡಿಶಾ ರೈಲು ದುರಂತದ ಹಿನ್ನೆಲೆ

ಹೌರಾದಿಂದ ಚೆನ್ನೈಗೆ ತೆರಳುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಅಪಘಾತಕ್ಕೀಡಾಗಿ 261 ಜನರು ಸಾವನ್ನಪ್ಪಿದ್ದರು. ಮಾಹಿತಿಯ ಪ್ರಕಾರ, ಈ ರೈಲು ಒಡಿಶಾದ ಬಾಲಸೋರ್‌ನಿಂದ ಸುಮಾರು 40 ಕಿಲೋಮೀಟರ್ ದೂರದಲ್ಲಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ನಂತರ 3 ಸ್ಲೀಪರ್ ಕೋಚ್‌ಗಳನ್ನು ಬಿಟ್ಟು ಉಳಿದ ಬೋಗಿಗಳು ಹಳಿತಪ್ಪಿದ್ದವು.

ಎರಡು ದಶಕಗಳಲ್ಲೇ ಅತ್ಯಂತ ಭೀಕರವಾದ ರೈಲು ಅಪಘಾತದ ಎಂದು ಹೇಳಲಾಗುತ್ತಿದೆ. ರೈಲ್ವೆಯ ಸಿಗ್ನಲಿಂಗ್ ಕಂಟ್ರೋಲ್ ರೂಮ್‌ನ ಪ್ರಾಥಮಿಕ ವರದಿಗಳ ಪ್ರಕಾರ, ದುರಂತ ಸಂಭವಿಸುವ ಕೆಲವು ನಿಮಿಷಗಳ ಮೊದಲು ರೈಲು ತಪ್ಪಾದ ಟ್ರ್ಯಾಕ್​​ನಲ್ಲಿ ಸಂಚರಿಸಿತ್ತು. ನಿರ್ಕ್ಷ್ಯದ ಪರಿಣಾಮವಾಗಿ ಅಪಘಾತ ಸಂಭವಿಸಿರಬಹುದು ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್