AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ ರೈಲು ದುರಂತ; ಈಶಾನ್ಯ ರಾಜ್ಯಗಳ ಕಡೆ ಹೊರಟಿದ್ದ ಪ್ರಯಾಣಿಕರಿಗೆ ಬಿಬಿಎಂಪಿಯಿಂದ ತಿಂಡಿ ವ್ಯವಸ್ಥೆ, ವೈದ್ಯಕೀಯ ನೆರವು

ಒಡಿಶಾದ ಬಾಲಸೋರ್​​ ಜಿಲ್ಲೆಯಲ್ಲಿ ರೈಲು ದುರಂತ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಈಶಾನ್ಯ ರಾಜ್ಯಗಳ ಕಡೆ ಹೋಗುವ ರೈಲುಗಳನ್ನು ತಡೆಹಿಡಿಯಲಾಗಿದ್ದು, ಪ್ರಯಾಣಿಕರು ರೈಲು ನಿಲ್ದಾಣದಲ್ಲೇ ಇದ್ದಾರೆ. ಇದೀಗ ಅವರಿಗೆ ಬಿಬಿಎಂಪಿ, ಕಾರ್ಮಿಕ ಇಲಾಖೆ ಬೆಳಿಗ್ಗೆ ತಿಂಡಿ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ.

ಒಡಿಶಾ ರೈಲು ದುರಂತ; ಈಶಾನ್ಯ ರಾಜ್ಯಗಳ ಕಡೆ ಹೊರಟಿದ್ದ ಪ್ರಯಾಣಿಕರಿಗೆ ಬಿಬಿಎಂಪಿಯಿಂದ ತಿಂಡಿ ವ್ಯವಸ್ಥೆ, ವೈದ್ಯಕೀಯ ನೆರವು
ಪ್ರಯಾಣಿಕರಿಗೆ ಊಟದ ವ್ಯವಸ್ಥೆ
ಕಿರಣ್ ಹನುಮಂತ್​ ಮಾದಾರ್
|

Updated on:Jun 04, 2023 | 11:11 AM

Share

ಬೆಂಗಳೂರು: ಒಡಿಶಾ ಭೀಕರ ರೈಲು ದುರಂತಕ್ಕೆ ಸಂಬಂಧಿಸಿದಂತೆ 288 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಅದರಂತೆ 56 ಪ್ರಯಾಣಕರ ಸ್ಥಿತಿ ಚಿಂತಾಜನಕವಾಗಿದೆ. ಈ ಕಾರಣಕ್ಕೆ ನಿನ್ನೆ(ಜೂ.3)ಯಿಂದ ಈಶಾನ್ಯ ರಾಜ್ಯಗಳ ಕಡೆ ಹೋಗುವ ರೈಲುಗಳನ್ನು ತಡೆಹಿಡಿಯಲಾಗಿದ್ದು, ಬೈಯ್ಯಪ್ಪನಹಳ್ಳಿ ಎಸ್ಎಂವಿಟಿ(SMVT) ನಿಲ್ದಾಣದಲ್ಲಿ ಪ್ರಯಾಣಿಕರು ರೈಲು ನಿಲ್ದಾಣದಲ್ಲೆ ಇದ್ದಾರೆ. ಇದನ್ನು ಕಂಡ ಬಿಬಿಎಂಪಿ(BBMP) ಹಾಗೂ ಕಾರ್ಮಿಕ ಇಲಾಖೆ(Labour Department) ಪ್ರಯಾಣಿಕರಿಗೆ ತಿಂಡಿ ವಿತರಣೆ ಮಾಡಿದ್ದಾರೆ.

ಇದೇ ವೇಳೆ ಬಿಬಿಎಂಪಿ ಪೂರ್ವ ವಲಯ ಜಂಟಿ ಆಯುಕ್ತೆ ಪಲ್ಲವಿ ಅವರು ಮಾತನಾಡಿ ‘ಬಿಬಿಎಂಪಿಯಿಂದ 1200 ಜನರಿಗೆ, ಎನ್​ಜಿಓ ಸಂಸ್ಥೆಯಿಂದ 1500 ಜನರಿಗೆ ತಿಂಡಿ ವ್ಯವಸ್ಥೆ ಮಾಡಲಾಗಿದೆ. ನಿನ್ನೆಯಿಂದ ರೈಲು ನಿಲ್ದಾಣದಲ್ಲಿ ಇರುವ ಪ್ರಯಾಣಿಕರಿಗೆ ತಿಂಡಿ ನೀಡಲಾಗುತ್ತಿದೆ. ಜೊತೆಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದ್ದು, ಮೆಡಿಕಲ್ ಚೆಕಪ್​ಗೂ ವ್ಯವಸ್ಥೆ ಮಾಡಲಾಗಿದೆ. ಪಕ್ಕದಲ್ಲೆ ಬಿಬಿಎಂಪಿ ಪಿಹೆಚ್​ಸಿ ಕೂಡ ಇದೆ. ಮೊಬೈಲ್ ಟಾಯ್ಲೆಟ್ ವ್ಯವಸ್ಥೆಯನ್ನು ಮಾಡಲಾಗಿದೆ. ಇನ್ನು ಮಧ್ಯಾಹ್ನದ ನಂತರ ರೈಲು ಸಂಚಾರ ಆರಂಭ ಆಗುತ್ತೆ ಎಂದು ಸ್ಟೇಷನ್ ಮಾಸ್ಟರ್ ಹೇಳಿದ್ದಾರೆ. ಅದ್ದರಿಂದ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದರು.

ಇದನ್ನೂ ಓದಿ:ಒಡಿಶಾ ರೈಲು ದುರಂತ: ಹೌರಾದಲ್ಲಿ ಸಿಲುಕಿ ಪರದಾಡಿದ ಪರಿಸ್ಥಿತಿ ವಿವರಿಸಿದ ಕರ್ನಾಟಕದ ವಿದ್ಯಾರ್ಥಿನಿ

ಒಡಿಶಾದ ರೈಲು ದುರಂತ ಪ್ರಕರಣ: ಕರ್ನಾಟಕ ಮೂಲದವರು ಮೃತಪಟ್ಟಿರುವ ಮಾಹಿತಿ ಇಲ್ಲ; ರೈಲ್ವೆ ಎಸ್​ಪಿ ಸೌಮ್ಯಾ ಲತಾ

ಬೆಂಗಳೂರು: ಒಡಿಶಾದ ಬಾಲಸೋರ್​​ ಜಿಲ್ಲೆಯಲ್ಲಿ ರೈಲು ದುರಂತ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ‘ಕರ್ನಾಟಕ ಮೂಲದವರು ಮೃತಪಟ್ಟಿರುವ ಯಾವುದೇ ಮಾಹಿತಿ ಇಲ್ಲ ಎಂದು ರೈಲ್ವೆ ಎಸ್​ಪಿ ಸೌಮ್ಯಾ ಲತಾ ಮಾಹಿತಿ ನೀಡಿದ್ದಾರೆ. ರಾಜ್ಯದ ಓರ್ವ ಡಿವೈಎಸ್​​ಪಿ ಘಟನಾ ಸ್ಥಳದಲ್ಲೇ ಇದ್ದಾರೆ. ಕರ್ನಾಟಕದ ಬಗ್ಗೆ ಏನೇ ಮಾಹಿತಿ ಇದ್ದರೂ ತಿಳಿಸುತ್ತಾರೆ ಎಂದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:08 am, Sun, 4 June 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್