AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ವಿಮಾನದಲ್ಲಿ ಯುವತಿಗೆ ಕಿರುಕುಳ ನೀಡಿದ ಆಫ್​ ಡ್ಯೂಟಿ ಪೈಲಟ್​

ಬೆಂಗಳೂರಿನಿಂದ ಪುಣೆಗೆ ವಿಮಾನದಲ್ಲಿ ಹೊರಟಿದ್ದ ಯುವತಿಗೆ, ​​ಕರ್ತವ್ಯದಲ್ಲಿಲ್ಲದ ಪೈಲಟ್ ನನಗೆ ಕಿರುಕುಳ ನಿಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Bengaluru News: ವಿಮಾನದಲ್ಲಿ ಯುವತಿಗೆ ಕಿರುಕುಳ ನೀಡಿದ ಆಫ್​ ಡ್ಯೂಟಿ ಪೈಲಟ್​
ಆಕಾಸ್​ ಏರ್​​
ವಿವೇಕ ಬಿರಾದಾರ
|

Updated on: Oct 17, 2023 | 11:17 AM

Share

ಬೆಂಗಳೂರು ಅ.17: ಬೆಂಗಳೂರಿನಿಂದ (Bengaluru) ಪುಣೆಗೆ (Pune) ಆಕಾಸ್​​ ವಿಮಾನದಲ್ಲಿ (Airplane) ಹೊರಟಿದ್ದ ಯುವತಿಗೆ, ​​ಕರ್ತವ್ಯದಲ್ಲಿಲ್ಲದ ಪೈಲಟ್ ನನಗೆ ಕಿರುಕುಳ ನಿಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಕಿರುಕುಳಕ್ಕೆ ಒಳಗಾದ 20 ವರ್ಷದ ಯುವತಿ ಆಕಾಸ್ ವಿಮಾನಯಾನ ಸಂಸ್ಥೆಗೆ ದೂರು ನೀಡಿದರೂ ಕ್ರಮಕೈಗೊಂಡಿಲ್ಲ ಎಂಬ ಆರೋಪವಿದೆ. ಘಟನೆ ಬಗ್ಗೆ ವಿವರವಾಗಿ ತನಿಖೆ ನಡೆಸಲು ನಾವು ಯುವತಿಯನ್ನು ಸಂಪರ್ಕಿಸಲು ಯತ್ನಿಸಿದೇವು. ಆದರೆ ಅವರು ಸಂಪರ್ಕಕಕ್ಕೆ ಸಿಗಲಿಲ್ಲ ಎಂದು ಆಕಾಸ್​ ಏರ್​​ಲೈನ್ಸ್​​ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಘಟನೆ ಬಗ್ಗೆ ಯುವತಿ ಸಾಮಾಜಿ ಜಾಲತಾಣದಲ್ಲಿ ಫೋಸ್ಟ್​​ ಹಾಕಿದ ಪ್ರಕಾರ “ನಾನು (ಯುವತಿ) ಬೆಂಗಳೂರಿನಲ್ಲಿ ಮೂರು ತಿಂಗಳು ಇಂಟರ್ನ್‌ಶಿಪ್ ಮುಗಿಸಿಕೊಂಡು ಭಾನುವಾರದಂದು ವಿಮಾನದಲ್ಲಿ ಪುಣೆಗೆ ಹೊರಟಿದ್ದೆ. ವಿಮಾನದ ಹಿಂಭಾಗದಲ್ಲಿ ಸೀಟ್ ಸಂಖ್ಯೆ 32Cಯಲ್ಲಿ ಕುಳಿತಿದ್ದೆ. ನನ್ನ ಲಗೇಜ್​ಗಳನ್ನು ಕ್ಯಾಬಿನ್​​ನಲ್ಲಿ ಇರಿಸಲು ಸೀಟ್​ ಸಂಖ್ಯೆ 30ರಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಸಹಾಯ ಮಾಡಿದರು. ನಂತರ ಅವರು ನನ್ನೊಂದಿಗೆ ಮಾತನಾಡಲು ಪ್ರಾರಂಭಿಸಿದರು. ಅವರು ಕರ್ತವ್ಯದಲ್ಲಿಲ್ಲದ ಆಕಾಸ್​​ ಏರ್ ಪೈಲಟ್ ಎಂದು ಪರಿಚಯಿಸಿಕೊಂಡರು. ಅಲ್ಲದೆ ಅವರು ಏರ್‌ಲೈನ್ ಐಡಿ ಕಾರ್ಡ್ ಹಾಕಿಕೊಂಡಿದ್ದರು”.

ಇದನ್ನೂ ಓದಿ: ಸಮಯಪಾಲನೆ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವಿಶ್ವದಲ್ಲೇ ಅತ್ಯುತ್ತಮ

ಕೆಲ ಸಮಯದ ನಂತರ ಪೈಲಟ್, ತಾನು ಕುಳಿತಿದ್ದ ಆಸನದ ಬಳಿಯೇ ಕೂರುವಂತೆ ಒತ್ತಾಯಿಸಿದರು. ನಾನು ಹೋಗಿ ಕೂತೆ, ಬಳಿಕ ವಿಮಾನ ಸಿಬ್ಬಂದಿ ನನ್ನ ಲಗೇಜ್ಅನ್ನು ಸ್ಥಳಾಂತರಿಸಿದರು. ಬಳಿಕ ಪೈಲಟ್​ ನನ್ನೊಂದಿಗೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದರು. ಇದನ್ನು ಸಹಿಸದೆ ನಾನು ನನ್ನ ಮೊದಲಿನ ಸೀಟ್​ನಲ್ಲಿ ಹೋಗಿ ಕುಳಿತೆ. ಈ ಬಗ್ಗೆ ವಿಮಾನದ ಸಿಬ್ಬಂದಿಗೆ ತಿಳಿಸಿದೆ, ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಪುಣೆಯಲ್ಲಿ ಇಳಿದ ನಂತರ ಪೈಲಟ್ ನನ್ನನ್ನು ಹಿಂಬಾಲಿಸಿದರು. ತನ್ನೊಂದಿಗೆ ಬರುವಂತೆ ಹೇಳಿದರು. ಅಲ್ಲದೆ ಮೊಬೈಲ್ ನಂಬರ್​ ನೀಡುವಂತೆ ಒತ್ತಾಯಿಸಿದರು.”

ಈ ಬಗ್ಗೆ ಆಕಾಸ್​ ಏರ್​ಲೈನ್ಸ್​​ಗೆ ದೂರು ನೀಡಿದ್ದೇನೆ. ದೂರು ನೀಡಿ 15 ದಿನ ಕಳೆದರು ಏನು ಪ್ರಯೋಜನವಾಗಿಲ್ಲ ಎಂದು ಯುವತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ