Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್ ಆದೇಶಕ್ಕೂ ಅಧಿಕಾರಿಗಳು ಡೋಂಟ್​ ಕೇರ್; ಸೈಟ್​ಗಾಗಿ ಬಡ ಅಂಗವಿಕಲರ ಪ್ರತಿಭಟನೆ

ನಾಲ್ಕು ‌ತಿಂಗಳೊಳಗೆ ವಿಶೇಷ ಚೇತನರಿಗೆ ಹಕ್ಕುಪತ್ರ ನೀಡಿ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದ್ದರೂ ಅಧಿಕಾರಿಗಳು ಮಾತ್ರ ಬಡ ಅಂಗವಿಕಲರಿಗೆ ಸೈಟ್ ಹಂಚಿಕೆ ಮಾಡಿಲ್ಲ. ಹೀಗಾಗಿ ಹಕ್ಕುಪತ್ರಕ್ಕಾಗಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಹೈಕೋರ್ಟ್ ಆದೇಶಕ್ಕೂ ಅಧಿಕಾರಿಗಳು ಡೋಂಟ್​ ಕೇರ್; ಸೈಟ್​ಗಾಗಿ ಬಡ ಅಂಗವಿಕಲರ ಪ್ರತಿಭಟನೆ
ಕರ್ನಾಟಕ ಹೈಕೋರ್ಟ್ ಆದೇಶ ನೀಡಿದ್ದರೂ ಸೈಟ್ ಹಂಚಿಕೆ ಮಾಡದ ಅಧಿಕಾರಿಗಳ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ವಿಶೇಷ ಚೇತನರು
Follow us
Rakesh Nayak Manchi
|

Updated on: Jun 25, 2023 | 9:12 PM

ಬೆಂಗಳೂರು: ನಾಲ್ಕು ‌ತಿಂಗಳೊಳಗೆ ಹಕ್ಕುಪತ್ರ ನೀಡಿ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಆದೇಶಿಸಿದ್ದರೂ ಅಧಿಕಾರಿಗಳು ಮಾತ್ರ ಬಡ ವಿಶೇಷ ಚೇತನರಿಗೆ ಸೈಟ್ ಹಂಚಿಕೆ ಮಾಡಿಲ್ಲ. ಹೀಗಾಗಿ ಬೆಂಗಳೂರಿನ ಯಶವಂತಪುರ ವಿಧಾನಸಭಾ ‌ಕ್ಷೇತ್ರದ ರಾಮೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಳ್ಳೆಘಟ್ಟದಲ್ಲಿ ಇಂದು ನೂರಾರು ವಿಶೇಷ ಚೇತನರು ಹಕ್ಕುಪತ್ರಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ.

ಕಣ್ಣು ಕಾಣಿಸಿದ,‌ ಕಿವಿ ಕೇಳಿಸದ, ಬಾಯಿ ಬಾರದ ಮತ್ತು ಕೈ ಕಾಲು ಸರಿಯಿಲ್ಲದ, ‌ಬುದ್ದಿಮಾಂದ್ಯರು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ದಯವಿಟ್ಟು ನಮಗೆ ನಮ್ಮ ಸೈಟ್​ಗಳನ್ನು ಕೊಡಿ. ನಾವೆಲ್ಲರೂ ಅಂಗವಿಕಲರು, ನಿಮಗೆ ಹಣ ನೀಡಲು ನಮ್ಮ ಬಳಿ ಹಣ ಇಲ್ಲ. ಸೈಟ್ ಕೊಡದಿದ್ದರೆ ನಮಗೆ ವಿಷ ಕೊಟ್ಟು ಬಿಡಿ ನಾವೆಲ್ಲರೂ ಪ್ರಾಣ ಕಳೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ ಖುದ್ದಾಗಿ ಜಿಲ್ಲಾ ಪಂಚಾಯತಿ ಅಧಿಕಾರಿಗಳಿಗೆ ಪತ್ರ ಬರೆದು ಸೈಟ್​ಗಳಿಗೆ ಹಕ್ಕುಪತ್ರ ನೀಡಲು ಹೇಳಿದರೂ ಜಿಲ್ಲಾ ಪಂಚಾಯತಿ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ ಎಂದು ವಿಶೇಷ ಚೇತನರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 3 ಸರ್ಕಾರ ಬದಲಾದರೂ ಶಾಲೆಗಳ ಪರಿಸ್ಥಿತಿ ಬದಲಾಗಿಲ್ಲ: ಸರ್ಕಾರಕ್ಕೆ ಹೈಕೋರ್ಟ್ ತೀವ್ರ ತರಾಟೆ

ಕಳೆದ 14 ವರ್ಷಗಳಿಂದ 134 ಬಡ ವಿಶೇಷ ಚೇತನರು ಸರ್ಕಾರಿ ಕಚೇರಿಗೆ ಅಲೆದಾಡುತ್ತಿದ್ದರೂ ಸೈಟ್ ವಿತರಿಸಿಲ್ಲ. 2010 ರಲ್ಲಿ ಅಂದಿನ ಬೆಂಗಳೂರು ನಗರ ಜಿಲ್ಲಾಧಿಕಾರಿ ಸಾಧಿಕ್ ಕೆಂಗೇರಿಯ ರಾಮೋಹಳ್ಳಿಯ ಚಳ್ಳಗಟ್ಟದಲ್ಲಿ 134 ಬಡ ಅಂಗವಿಕಲರ ನಿವೇಶನಕ್ಕಾಗಿ ಐದು ಎಕರೆ ಜಾಗ ಮಂಜೂರು ಮಾಡಿದ್ದರು. ರಾಜೀವ್ ಗಾಂಧಿ ವಸತಿ ನಿಗಮದ ‌ಕಡೆಯಿಂದ ಸೈಟ್​ಗಳನ್ನು ನಿರ್ಮಿಸಲು 6 ಲಕ್ಷದ 90 ಸಾವಿರ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ.

ಆದರೆ ಜಿಲ್ಲಾ ಪಂಚಾಯತಿ ಅಧಿಕಾರಿಗಳು ಮಾತ್ರ ದೇಹದಲ್ಲಿ ನ್ಯೂನತೆಗಳಿರುವ ವಿಶೇಷ ಚೇತನರಿಗೆ ಹಕ್ಕುಪತ್ರ ನೀಡುತ್ತಿಲ್ಲ. ಹೀಗಾಗಿ ಇಂದು ತಮಗೆ ನೀಡಿರುವ ಸೈಟ್​​ಗಳ ಮುಂದೆ ಜಮಾಯಿಸಿದ ನೂರಾರು ವಿಶೇಷ ಚೇತನರು ಪ್ರತಿಭಟನೆ ಮಾಡಿ ಹಕ್ಕುಪತ್ರ ನೀಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್