AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ಮಾಧ್ಯಮಗಳಲ್ಲಿ ಒಮಿಕ್ರಾನ್ ಸುದ್ದಿ ಬರುತ್ತಿದೆ; ಆ ರೀತಿಯ ವಾತಾವರಣ ರಾಜ್ಯದಲ್ಲಿ ಇಲ್ಲ -ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಬೆಂಗಳೂರಿನಲ್ಲಿ ಐಟಿ ಸೆಕ್ಟರ್ ಇದೆ. ಹೊಟೇಲ್ ಸೇರಿದಂತೆ ಅನೇಕ ಉದ್ಯಮಗಳಿವೆ. ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಎಲ್ಲರಿಗೂ ಸರ್ಟಿಫಿಕೇಟ್ ತೊರಿಸಿ ಎಂಟ್ರಿಯಾಗಬೇಕು ಅಂದ್ರೆ ಹೇಗೆ? ಇಡೀ ದೇಶದಲ್ಲಿ ಇಲ್ಲದ ಆದೇಶ ಕರ್ನಾಟಕದಲ್ಲಿ ಮಾತ್ರ ಯಾಕೆ? ದೇಶಕ್ಕೆಲ್ಲಾ ಒಂದೇ ರೂಲ್ಸ್ ಇರಬೇಕು - ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

ಕೇವಲ ಮಾಧ್ಯಮಗಳಲ್ಲಿ ಒಮಿಕ್ರಾನ್ ಸುದ್ದಿ ಬರುತ್ತಿದೆ; ಆ ರೀತಿಯ ವಾತಾವರಣ  ರಾಜ್ಯದಲ್ಲಿ ಇಲ್ಲ -ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
ಡಿ.ಕೆ. ಶಿವಕುಮಾರ್
TV9 Web
| Edited By: |

Updated on: Dec 08, 2021 | 12:47 PM

Share

ಬೆಂಗಳೂರು: ರಾಜ್ಯ, ದೇಶ ಸೇರಿದಂತೆ ಜಗತ್ತು ಒಮಿಕ್ರಾನ್ ರೂಪದಲ್ಲಿ ಕೊರೊನಾ ಅಲೆಗೆ ಬೆಚ್ಚಿಬಿದ್ದಿರುವಾಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಒಮಿಕ್ರಾನ್ ಗೆ ಟಫ್ ರೂಲ್ಸ್ ಮಾಡುವ ವಿಚಾರವಾಗಿ ಮಾತನಾಡುತ್ತಾ ಕೇವಲ ಮಾಧ್ಯಮಗಳಲ್ಲಿ ಒಮಿಕ್ರಾನ್ ಸುದ್ದಿ ಬರುತ್ತಿದೆ. ಆ ರೀತಿಯ ವಾತಾವರಣ ರಾಜ್ಯದಲ್ಲಿ ಇಲ್ಲ. ಸುಮ್ನೆ ಯಾರೋ ಏರ್ಪೋರ್ಟ್ ನಿಂದ ಓಡಿಹೋದ ಅಂತಾ ಸುಮ್ನೆ ಭಯದ ವಾತಾವರಣ ಸೃಷ್ಟಿಯಾಗ್ತಾ ಇದೆ ಎಂದು ಪರಿಸ್ಥಿತಿಯನ್ನು ವ್ಯಾಖ್ಯಾನಿಸಿದ್ದಾರೆ.

ಬೆಂಗಳೂರಿನಲ್ಲಿ ಐಟಿ ಸೆಕ್ಟರ್ ಇದೆ. ಹೊಟೇಲ್ ಸೇರಿದಂತೆ ಅನೇಕ ಉದ್ಯಮಗಳಿವೆ. ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಎಲ್ಲರಿಗೂ ಸರ್ಟಿಫಿಕೇಟ್ ತೊರಿಸಿ ಎಂಟ್ರಿಯಾಗಬೇಕು ಅಂದ್ರೆ ಹೇಗೆ? ಇಡೀ ದೇಶದಲ್ಲಿ ಇಲ್ಲದ ಆದೇಶ ಕರ್ನಾಟಕದಲ್ಲಿ ಮಾತ್ರ ಯಾಕೆ? ದೇಶಕ್ಕೆಲ್ಲಾ ಒಂದೇ ರೂಲ್ಸ್ ಇರಬೇಕು; ರಾಜ್ಯಕ್ಕೆ ಸಂಬಂಧಿಸಿದ ವಿಚಾರ ‌ಮಾತ್ರವಲ್ಲ. ಮೊದಲನೆ ಮತ್ತು ಎರಡನೇ ಅಲೆ ಪರಿಹಾರ ಇನ್ನೂ ನೀಡಿಲ್ಲ. ನಾಲ್ಕು ಲಕ್ಷ ಸತ್ತ ಜನರಿಗೆ ಒಂದೇ ಒಂದು ರೂಪಾಯಿ ಪರಿಹಾರ ನೀಡಿಲ್ಲ. ರೈತರಿಗೆ ಬೆಂಬಲ ಬೆಲೆ ನೀಡಿಲ್ಲ. ಈಗ ಎಲ್ಲರೂ ಉಸಿರಾಡುತ್ತಿದ್ದಾರೆ. ಮತ್ತೆ ರೂಲ್ಸ್ ಅಂದ್ರೆ ಎಲ್ಲ ಬ್ಯುಸಿನೆಸ್ ನಿಂತು ಹೋಗುತ್ತದೆ. ಇದಕ್ಕೆಲ್ಲ ಯಾರು ಹೊಣೆ? ಕೆಲವೊಂದು ವ್ಯಾಪಾರ ಬಂದ್ ಆಗಿದ್ದಾವೆ. ಎ.ಸಿ. ಇಲ್ಲದೆ ಯಾವುದೇ ಬ್ಯುಸಿನೆಸ್ ‌ನಡೆಯುತ್ತಿಲ್ಲ. ಸುಮ್ಮನೆ ಗೊಂದಲ‌ ಮೂಡಿಸುವ ಕೆಲಸ ಆಗುತ್ತಿದೆ. ಶೇ. 20ರಷ್ಟು ಶಾಲೆಗಳು ಎ.ಸಿ.ಯಲ್ಲಿ ನಡೆಯುತ್ತಿವೆ. ಈಗ ಟಫ್ ರೂಲ್ಸ್ ಮಾಡ್ತೇವಿ ಅಂತಿದ್ದಾರೆ ಎಂದು ಡಿ ಕೆ ಶಿವಕುಮಾರ್ ಬ್ಯಾಟ್​ ಬೀಸಿದ್ದಾರೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ