AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ದಕ್ಷಿಣ ಆಫ್ರಿಕಾಗೆ ಒಮಿಕ್ರಾನ್ ಸೋಂಕಿತ ಪರಾರಿ; ನಕಲಿ ಕೊವಿಡ್ ನೆಗೆಟಿವ್ ವರದಿ ನೀಡಿದ್ದ ನಾಲ್ವರ ಬಂಧನ

Bangalore Omicron Cases: ಒಮಿಕ್ರಾನ್ ಸೋಂಕಿತ ದಕ್ಷಿಣ ಆಫ್ರಿಕಾದ ಪ್ರಜೆಯೊಬ್ಬರು ತಮ್ಮ ದೇಶಕ್ಕೆ ಅನುಕೂಲವಾಗುವಂತೆ ನಕಲಿ ಕೊವಿಡ್-19 ನೆಗೆಟಿವ್ ಪ್ರಮಾಣಪತ್ರ ಪಡೆಯಲು ಸಹಾಯ ಮಾಡಿದ ನಾಲ್ವರನ್ನು ಬೆಂಗಳೂರಿನ ಹೈಗ್ರೌಂಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಿಂದ ದಕ್ಷಿಣ ಆಫ್ರಿಕಾಗೆ ಒಮಿಕ್ರಾನ್ ಸೋಂಕಿತ ಪರಾರಿ; ನಕಲಿ ಕೊವಿಡ್ ನೆಗೆಟಿವ್ ವರದಿ ನೀಡಿದ್ದ ನಾಲ್ವರ ಬಂಧನ
ಕೊರೊನಾ ಟೆಸ್ಟ್​ ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 14, 2021 | 1:06 PM

Share

ಬೆಂಗಳೂರು: ಬೆಂಗಳೂರಿಗೆ ಬಂದಿದ್ದ ದಕ್ಷಿಣ ಆಫ್ರಿಕಾದ ಪ್ರಜೆಯೊಬ್ಬರಿಗೆ ಒಮಿಕ್ರಾನ್ ಸೋಂಕು (Omicron Virus) ದೃಢಪಟ್ಟಿತ್ತು. ಆದರೆ, ಆತನಿಗೆ ನಕಲಿ ಕೊರೊನಾ ನೆಗೆಟಿವ್ ವರದಿ ನೀಡಿ ಆತ ವಿಮಾನ ಪ್ರಯಾಣದ ಮೂಲಕ ದಕ್ಷಿಣ ಆಫ್ರಿಕಾಕ್ಕೆ (South Africa) ವಾಪಾಸ್ ಹೋಗಲು ಸಹಾಯ ಮಾಡಿದ್ದ ನಾಲ್ವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿಯ ಸಾಫ್ಟ್​ವೇರ್ ಕಂಪನಿಯ ಉದ್ಯೋಗಿಗಳಾದ ರಾಣೇಶ್, ರವೀಂದ್ರ ಹಾಗೂ ಲ್ಯಾಬ್ ಸಿಬ್ಬಂದಿಗಳಾದ ಮನೋಜ್ ಮತ್ತು ಪ್ರಶಾಂತ್ ಅವರನ್ನು ಬಂಧಿಸಲಾಗಿದೆ.

ಒಮಿಕ್ರಾನ್ ಸೋಂಕಿತ ದಕ್ಷಿಣ ಆಫ್ರಿಕಾದ ಪ್ರಜೆಯೊಬ್ಬರು ತಮ್ಮ ದೇಶಕ್ಕೆ ಅನುಕೂಲವಾಗುವಂತೆ ನಕಲಿ ಕೊವಿಡ್-19 ನೆಗೆಟಿವ್ ಪ್ರಮಾಣಪತ್ರ ಪಡೆಯಲು ಸಹಾಯ ಮಾಡಿದ ನಾಲ್ವರನ್ನು ಬೆಂಗಳೂರಿನ ಹೈಗ್ರೌಂಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಆಫ್ರಿಕಾದ ಒಮಿಕ್ರಾನ್ ಸೋಂಕಿತ ಮಾಲೀಕನಾಗಿರುವ ಸಾಫ್ಟ್​ವೇರ್ ಕಂಪನಿಯ ಶಾಖೆಯೊಂದು ಬೊಮ್ಮನಹಳ್ಳಿಯಲ್ಲಿದೆ. ಹೀಗಾಗಿ, ಕೆಲಸದ ನಿಮಿತ್ತ ನ. 20ರಂದು ಬೆಂಗಳೂರಿಗೆ ಬಂದಿದ್ದ ಆತನಿಗೆ ಕೊವಿಡ್ ಟೆಸ್ಟ್​ ಮಾಡಿದಾಗ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ 14 ದಿನಗಳ ಕಾಲ ಶಾಂಗ್ರಿಲಾ ಹೋಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿತ್ತು.

ಆದರೆ, ತಮ್ಮ ಸಾಫ್ಟ್​ವೇರ್ ಕಂಪನಿಯ ಉದ್ಯೋಗಿಗಳ ಸಹಾಯ ಪಡೆದು ಕೋವಿಡ್ ನೆಗೆಟಿವ್ ನಕಲಿ ವರದಿ ಸಿದ್ಧಪಡಿಸಿಕೊಂಡು ಅವರು ನವೆಂಬರ್ 27ರಂದು ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದರು. ನಕಲಿ ಕೊವಿಡ್ ನೆಗೆಟಿವ್ ರಿಪೋರ್ಟ್​ ತೋರಿಸಿ ದುಬೈ ಮೂಲಕ ಅವರು ದಕ್ಷಿಣ ಆಫ್ರಿಕಾಗೆ ತೆರಳಿದ್ದರು. ನಂತರ ಡಿಸೆಂಬರ್ 2ರಂದು ಜಿನೋಮ್ ಸೀಕ್ವೆನ್ಸ್​ ಪರೀಕ್ಷೆಯ ವರದಿ ಬಂದಾಗ ಆ ವ್ಯಕ್ತಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ಖಚಿತವಾಗಿತ್ತು.

ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಆತ ಕ್ವಾರಂಟೈನ್​ನಲ್ಲಿದ್ದ ಹೋಟೆಲ್​ನಿಂದ ನ. 27ರಂದೇ ದಕ್ಷಿಣ ಆಫ್ರಿಕಾಗೆ ವಾಪಾಸ್ ತೆರಳಿರುವ ವಿಷಯ ಗೊತ್ತಾಗಿತ್ತು. ಈ ಕುರಿತು ತನಿಖೆ ನಡೆಸಿದಾಗ ಬೆಂಗಳೂರು ಮೂಲದ ಪ್ರಯೋಗಾಲಯದ ಇಬ್ಬರು ಉದ್ಯೋಗಿಗಳು ಹಾಗೂ ಇಬ್ಬರು ಸಾಫ್ಟ್​ವೇರ್ ಉದ್ಯೋಗಿಗಳು ಆತನಿಗೆ ಕೊರೊನಾ ನೆಗೆಟಿವ್ ವರದಿಯನ್ನು ಸಿದ್ಧಪಡಿಸಲು ಸಹಾಯ ಮಾಡಿರುವ ವಿಷಯ ಗೊತ್ತಾಯಿತು. ಹೀಗಾಗಿ, ಆ ನಾಲ್ವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Omicron Update: ದೆಹಲಿಯಲ್ಲಿ 4, ರಾಜಸ್ಥಾನದಲ್ಲಿ 4 ಒಮಿಕ್ರಾನ್​ ಕೇಸ್​ ಪತ್ತೆ; ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49ಕ್ಕೆ ಏರಿಕೆ

Omicron Death: ಒಮಿಕ್ರಾನ್​ ವೈರಸ್​ಗೆ ಇಂಗ್ಲೆಂಡ್​ನಲ್ಲಿ ಮೊದಲ ಬಲಿ; ಕೊವಿಡ್ ರೂಪಾಂತರಿಯಿಂದ ವಿಶ್ವಾದ್ಯಂತ ಹೈ ಅಲರ್ಟ್​

Published On - 1:02 pm, Tue, 14 December 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು