AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ದಕ್ಷಿಣ ಆಫ್ರಿಕಾಗೆ ಒಮಿಕ್ರಾನ್ ಸೋಂಕಿತ ಪರಾರಿ; ನಕಲಿ ಕೊವಿಡ್ ನೆಗೆಟಿವ್ ವರದಿ ನೀಡಿದ್ದ ನಾಲ್ವರ ಬಂಧನ

Bangalore Omicron Cases: ಒಮಿಕ್ರಾನ್ ಸೋಂಕಿತ ದಕ್ಷಿಣ ಆಫ್ರಿಕಾದ ಪ್ರಜೆಯೊಬ್ಬರು ತಮ್ಮ ದೇಶಕ್ಕೆ ಅನುಕೂಲವಾಗುವಂತೆ ನಕಲಿ ಕೊವಿಡ್-19 ನೆಗೆಟಿವ್ ಪ್ರಮಾಣಪತ್ರ ಪಡೆಯಲು ಸಹಾಯ ಮಾಡಿದ ನಾಲ್ವರನ್ನು ಬೆಂಗಳೂರಿನ ಹೈಗ್ರೌಂಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಿಂದ ದಕ್ಷಿಣ ಆಫ್ರಿಕಾಗೆ ಒಮಿಕ್ರಾನ್ ಸೋಂಕಿತ ಪರಾರಿ; ನಕಲಿ ಕೊವಿಡ್ ನೆಗೆಟಿವ್ ವರದಿ ನೀಡಿದ್ದ ನಾಲ್ವರ ಬಂಧನ
ಕೊರೊನಾ ಟೆಸ್ಟ್​ ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 14, 2021 | 1:06 PM

ಬೆಂಗಳೂರು: ಬೆಂಗಳೂರಿಗೆ ಬಂದಿದ್ದ ದಕ್ಷಿಣ ಆಫ್ರಿಕಾದ ಪ್ರಜೆಯೊಬ್ಬರಿಗೆ ಒಮಿಕ್ರಾನ್ ಸೋಂಕು (Omicron Virus) ದೃಢಪಟ್ಟಿತ್ತು. ಆದರೆ, ಆತನಿಗೆ ನಕಲಿ ಕೊರೊನಾ ನೆಗೆಟಿವ್ ವರದಿ ನೀಡಿ ಆತ ವಿಮಾನ ಪ್ರಯಾಣದ ಮೂಲಕ ದಕ್ಷಿಣ ಆಫ್ರಿಕಾಕ್ಕೆ (South Africa) ವಾಪಾಸ್ ಹೋಗಲು ಸಹಾಯ ಮಾಡಿದ್ದ ನಾಲ್ವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿಯ ಸಾಫ್ಟ್​ವೇರ್ ಕಂಪನಿಯ ಉದ್ಯೋಗಿಗಳಾದ ರಾಣೇಶ್, ರವೀಂದ್ರ ಹಾಗೂ ಲ್ಯಾಬ್ ಸಿಬ್ಬಂದಿಗಳಾದ ಮನೋಜ್ ಮತ್ತು ಪ್ರಶಾಂತ್ ಅವರನ್ನು ಬಂಧಿಸಲಾಗಿದೆ.

ಒಮಿಕ್ರಾನ್ ಸೋಂಕಿತ ದಕ್ಷಿಣ ಆಫ್ರಿಕಾದ ಪ್ರಜೆಯೊಬ್ಬರು ತಮ್ಮ ದೇಶಕ್ಕೆ ಅನುಕೂಲವಾಗುವಂತೆ ನಕಲಿ ಕೊವಿಡ್-19 ನೆಗೆಟಿವ್ ಪ್ರಮಾಣಪತ್ರ ಪಡೆಯಲು ಸಹಾಯ ಮಾಡಿದ ನಾಲ್ವರನ್ನು ಬೆಂಗಳೂರಿನ ಹೈಗ್ರೌಂಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಆಫ್ರಿಕಾದ ಒಮಿಕ್ರಾನ್ ಸೋಂಕಿತ ಮಾಲೀಕನಾಗಿರುವ ಸಾಫ್ಟ್​ವೇರ್ ಕಂಪನಿಯ ಶಾಖೆಯೊಂದು ಬೊಮ್ಮನಹಳ್ಳಿಯಲ್ಲಿದೆ. ಹೀಗಾಗಿ, ಕೆಲಸದ ನಿಮಿತ್ತ ನ. 20ರಂದು ಬೆಂಗಳೂರಿಗೆ ಬಂದಿದ್ದ ಆತನಿಗೆ ಕೊವಿಡ್ ಟೆಸ್ಟ್​ ಮಾಡಿದಾಗ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರಿಗೆ 14 ದಿನಗಳ ಕಾಲ ಶಾಂಗ್ರಿಲಾ ಹೋಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿತ್ತು.

ಆದರೆ, ತಮ್ಮ ಸಾಫ್ಟ್​ವೇರ್ ಕಂಪನಿಯ ಉದ್ಯೋಗಿಗಳ ಸಹಾಯ ಪಡೆದು ಕೋವಿಡ್ ನೆಗೆಟಿವ್ ನಕಲಿ ವರದಿ ಸಿದ್ಧಪಡಿಸಿಕೊಂಡು ಅವರು ನವೆಂಬರ್ 27ರಂದು ದಕ್ಷಿಣ ಆಫ್ರಿಕಾಕ್ಕೆ ತೆರಳಿದ್ದರು. ನಕಲಿ ಕೊವಿಡ್ ನೆಗೆಟಿವ್ ರಿಪೋರ್ಟ್​ ತೋರಿಸಿ ದುಬೈ ಮೂಲಕ ಅವರು ದಕ್ಷಿಣ ಆಫ್ರಿಕಾಗೆ ತೆರಳಿದ್ದರು. ನಂತರ ಡಿಸೆಂಬರ್ 2ರಂದು ಜಿನೋಮ್ ಸೀಕ್ವೆನ್ಸ್​ ಪರೀಕ್ಷೆಯ ವರದಿ ಬಂದಾಗ ಆ ವ್ಯಕ್ತಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ಖಚಿತವಾಗಿತ್ತು.

ಈ ಹಿನ್ನೆಲೆಯಲ್ಲಿ ಆ ವ್ಯಕ್ತಿಯನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಆತ ಕ್ವಾರಂಟೈನ್​ನಲ್ಲಿದ್ದ ಹೋಟೆಲ್​ನಿಂದ ನ. 27ರಂದೇ ದಕ್ಷಿಣ ಆಫ್ರಿಕಾಗೆ ವಾಪಾಸ್ ತೆರಳಿರುವ ವಿಷಯ ಗೊತ್ತಾಗಿತ್ತು. ಈ ಕುರಿತು ತನಿಖೆ ನಡೆಸಿದಾಗ ಬೆಂಗಳೂರು ಮೂಲದ ಪ್ರಯೋಗಾಲಯದ ಇಬ್ಬರು ಉದ್ಯೋಗಿಗಳು ಹಾಗೂ ಇಬ್ಬರು ಸಾಫ್ಟ್​ವೇರ್ ಉದ್ಯೋಗಿಗಳು ಆತನಿಗೆ ಕೊರೊನಾ ನೆಗೆಟಿವ್ ವರದಿಯನ್ನು ಸಿದ್ಧಪಡಿಸಲು ಸಹಾಯ ಮಾಡಿರುವ ವಿಷಯ ಗೊತ್ತಾಯಿತು. ಹೀಗಾಗಿ, ಆ ನಾಲ್ವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Omicron Update: ದೆಹಲಿಯಲ್ಲಿ 4, ರಾಜಸ್ಥಾನದಲ್ಲಿ 4 ಒಮಿಕ್ರಾನ್​ ಕೇಸ್​ ಪತ್ತೆ; ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 49ಕ್ಕೆ ಏರಿಕೆ

Omicron Death: ಒಮಿಕ್ರಾನ್​ ವೈರಸ್​ಗೆ ಇಂಗ್ಲೆಂಡ್​ನಲ್ಲಿ ಮೊದಲ ಬಲಿ; ಕೊವಿಡ್ ರೂಪಾಂತರಿಯಿಂದ ವಿಶ್ವಾದ್ಯಂತ ಹೈ ಅಲರ್ಟ್​

Published On - 1:02 pm, Tue, 14 December 21

ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ