AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Omicron in Karnataka: ಒಮಿಕ್ರಾನ್ ಪತ್ತೆಯಾಗಿರುವ 11 ದೇಶಗಳ ಸ್ಥಿತಿ ನೋಡಿಕೊಂಡು ಮುಂದಿನ ಕ್ರಮ; ಸಚಿವ ಅಶ್ವಥ್ ನಾರಾಯಣ ಮಾಹಿತಿ

Karnataka Omicron Cases: ಕರ್ನಾಟಕದಲ್ಲಿ ಇಬ್ಬರಿಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿದ್ದರೂ ಅವರಲ್ಲಿ ವೈರಸ್​ ತೀವ್ರವಾಗಿಲ್ಲ. ಇಬ್ಬರನ್ನೂ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಂಗಳೂರಿನಲ್ಲಿ ಸಚಿವ ಡಾ.ಅಶ್ವತ್ಥ್​ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.

Omicron in Karnataka: ಒಮಿಕ್ರಾನ್ ಪತ್ತೆಯಾಗಿರುವ 11 ದೇಶಗಳ ಸ್ಥಿತಿ ನೋಡಿಕೊಂಡು ಮುಂದಿನ ಕ್ರಮ; ಸಚಿವ ಅಶ್ವಥ್ ನಾರಾಯಣ ಮಾಹಿತಿ
ಅಶ್ವತ್ಥ್ ನಾರಾಯಣ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Dec 02, 2021 | 5:59 PM

ಬೆಂಗಳೂರು: ಕರ್ನಾಟಕದ ಇಬ್ಬರಿಗೆ ಒಮಿಕ್ರಾನ್​​ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮತ್ತೆ ಆತಂಕ ಹೆಚ್ಚಾಗಿದೆ. ಈಗಾಗಲೇ ಆ ಇಬ್ಬರು ಸೋಂಕಿತರನ್ನು ಐಸೋಲೇಷನ್​ನಲ್ಲಿ ಇರಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಾರತದಲ್ಲಿ ಮೊದಲ ಒಮಿಕ್ರಾನ್ ಕೇಸ್ ಕರ್ನಾಟಕದಲ್ಲೇ ಪತ್ತೆಯಾಗಿರುವುದ ರಾಜ್ಯ ಸರ್ಕಾರಕ್ಕೂ ತಲೆನೋವು ತಂದಿಟ್ಟಿದೆ. ಈ ಹಿನ್ನೆಲೆಯಲ್ಲಿ ಸಚಿವ ಅಶ್ವಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಸೋಂಕಿತರ ಜಿನೋಮಿಕ್​ ಸೀಕ್ವೆನ್​ಗೆ ಕಳಿಸಲಾಗಿತ್ತು. ಸೋಂಕಿತರ ಸಂಪರ್ಕಿತರ ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ. ಒಮಿಕ್ರಾನ್ ವೈರಸ್​ ಕುರಿತು ಅಧ್ಯಯನ ಮಾಡಲಾಗಿದೆ. 11 ದೇಶಗಳ ಸ್ಥಿತಿಗತಿ ನೋಡಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು. ಒಮಿಕ್ರಾನ್​ ವೇಗವಾಗಿ ಹರಡುತ್ತದೆ. ಅದರಿಂದ ಜೀವಕ್ಕೆ ಅಪಾಯವಿಲ್ಲ. ಒಮಿಕ್ರಾನ್​ ವೈರಸ್​ ಕುರಿತು ಸರ್ಕಾರ ಕಟ್ಟೆಚ್ಚರ ವಹಿಸಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಪತ್ತೆಯಾಗಿರುವ ಒಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕೂಡ ಕ್ವಾರಂಟೈನ್ ಮಾಡಲಾಗಿದೆ. ಈ ವೈರಸ್ ಹೇಗೆ ಬರಲಿದೆ ಅಂತ ಅಧ್ಯಯನ ಮಾಡಲಾಗಿದೆ. ಬೇರೆ ಬೇರೆ ದೇಶದಲ್ಲಿ ಈಗಾಗಲೇ ಒಮಿಕ್ರಾನ್ ಕಾಣಿಸಿಕೊಂಡಿದೆ. ಕರ್ನಾಟಕದಲ್ಲಿ ಇಬ್ಬರಿಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿದ್ದರೂ ಅವರಲ್ಲಿ ವೈರಸ್​ ತೀವ್ರವಾಗಿಲ್ಲ. ಇಬ್ಬರನ್ನೂ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಂಗಳೂರಿನಲ್ಲಿ ಸಚಿವ ಡಾ.ಅಶ್ವತ್ಥ್​ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕದಲ್ಲಿ ಇಬ್ಬರಿಗೆ ಒಮಿಕ್ರಾನ್ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಒಮಿಕ್ರಾನ್ ದೃಢಪಟ್ಟ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಟಿವಿ9ಗೆ ಲಭ್ಯವಾಗಿದೆ. ನ. 20ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿನ ಏರ್​ಪೋರ್ಟ್​ಗೆ ಬಂದಿದ್ದ ಪ್ರಯಾಣಿಕ ನ. 23ರಂದು ಕೊರೊನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಏರ್​ಪೋರ್ಟ್​ನಲ್ಲಿ ಟೆಸ್ಟ್ ಮಾಡಿದಾಗ ಕೊವಿಡ್ ಪಾಸಿಟಿವ್ ಬಂದಿತ್ತು. ದಕ್ಷಿಣ ಆಫ್ರಿಕಾ ನಿವಾಸಿಯಾಗಿದ್ದ ಪ್ರಯಾಣಿಕನಿಗೆ ಕೊರೊನಾ ಪಾಸಿಟಿವ್ ಬಂದಿದ್ದರಿಂದ ಹೋಟೆಲ್​​ನಲ್ಲಿ ಕ್ವಾರಂಟೈನ್​ ಆಗಿದ್ದರು. ಆರೋಗ್ಯ ಇಲಾಖೆ ಅವರನ್ನು 3 ದಿನ ಮಾತ್ರ ಕ್ವಾರಂಟೈನ್ ಮಾಡಿತ್ತು. 3 ದಿನದ ಬಳಿಕ ಕೊವಿಡ್ ಟೆಸ್ಟ್ ಮಾಡಿಸಿದ್ದ ಪ್ರಯಾಣಿಕನಿಗೆ ಮೂರನೇ ದಿನದ ವರದಿ ನೆಗೆಟಿವ್ ಎಂದು ಬಂದಿತ್ತು. ನೆಗೆಟಿವ್ ಬರುತ್ತಿದ್ದಂತೆ ಅವರನ್ನು ಬಿಟ್ಟು ಕಳುಹಿಸಲಾಗಿತ್ತು.

ಇದಾದ ಬಳಿಕ ನೇರವಾಗಿ ಬೊಮ್ಮಸಂದ್ರಕ್ಕೆ ತೆರಳಿದ್ದ ಪ್ರಯಾಣಿಕ ಮೀಟಿಂಗ್​ನಲ್ಲಿ ಭಾಗಿಯಾಗಿದ್ದರು. ಹೋಂ ಕ್ವಾರಂಟೈನ್ ಆಗದೇ ಸೀದಾ ಮೀಟಿಂಗ್​ನಲ್ಲಿ ಭಾಗಿಯಾಗಿದ್ದರು. ದಕ್ಷಿಣ ಆಫ್ರಿಕಾದಿಂದ ಬಂದ 3ನೇ ದಿನಕ್ಕೆ ಬೊಮ್ಮಸಂದ್ರದ ಅಡಾಕಾರ್ ಇಂಗ್ರಾಮ್ ಲಿಮಿಟೆಡ್ ಕಂಪನಿಯಲ್ಲಿ 6 ಜನರೊಂದಿಗೆ ಬೋರ್ಡ್ ಮೀಟಿಂಗ್​ನಲ್ಲಿ ಭಾಗಿಯಾಗಿದ್ದರು. ಹೀಗಾಗಿ, ಆ 6 ಜನರಿಗೂ ಕೊವಿಡ್ ತಪಾಸಣೆ ನಡೆಸಿ, ಕ್ವಾರಂಟೈನ್ ಮಾಡಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಎರಡು ಒಮಿಕ್ರಾನ್ ಪ್ರಕರಣ ಪತ್ತೆ; ಎರಡೂ ಪ್ರಕರಣ ಪತ್ತೆಯಾಗಿರುವುದು ಕರ್ನಾಟಕದಲ್ಲಿ

ಕರ್ನಾಟಕಕ್ಕೆ ಕಾಲಿಟ್ಟ ಒಮಿಕ್ರಾನ್! ಭಾರತದಲ್ಲಿ ಇದೇ ಮೊದಲ ಬಾರಿಗೆ ಎರಡು ಕೇಸ್ ಪತ್ತೆ

Published On - 5:56 pm, Thu, 2 December 21

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!