AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು, ರಾಮನಗರದ ಈ ಪ್ರದೇಶಗಳಲ್ಲಿ ಇಂದು ಸಾಯಂಕಾಲವರೆಗೆ ವಿದ್ಯುತ್​ ಕಟ್

ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ತುರ್ತು ನಿರ್ವಹಣಾ ಕೆಲಸಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ರಾಮನಗರ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಇಂದು (ಜೂ.26) ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

ಬೆಂಗಳೂರು, ರಾಮನಗರದ ಈ ಪ್ರದೇಶಗಳಲ್ಲಿ ಇಂದು ಸಾಯಂಕಾಲವರೆಗೆ ವಿದ್ಯುತ್​ ಕಟ್
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Jun 26, 2024 | 9:43 AM

Share

ಬೆಂಗಳೂರು, ಜೂನ್​ 26: ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಯಮಿತ (KPTCL) ದುರಸ್ತಿ ಅಥವಾ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು (Bengaluru) ಮತ್ತು ರಾಮನಗರ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಇಂದು (ಜೂ.26) ವಿದ್ಯುತ್​ ಕಡಿತವಾಗಲಿದೆ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ (BESCOM) ಮಾದ್ಯಮ ಪ್ರಕಟಣೆ ಹೊರಡಿಸಿದೆ. ಹಾಗೆ, ವಿದ್ಯುತ್ ಅಡಚಣೆಗಾಗಿ ಬೆಸ್ಕಾಂ ವಿಷಾದಿಸಿದೆ. ಬೆಂಗಳೂರಿನಲ್ಲಿ ಬೆಳಗ್ಗೆ 10:30 ರಿಂದ ಸಾಯಂಕಾಲ 4 ಗಂಟೆಯವರೆಗೆ ವಿದ್ಯುತ್​​ ವ್ಯತ್ಯಯವಾಗಲಿದೆ. ರಾಮನಗರ ಮತ್ತು ಮಾಗಡಿಯಲ್ಲಿ ಬೆಳಗ್ಗೆ 10:30 ರಿಂದ 3 ಗಂಟೆಯವರೆಗೆ ಮತ್ತು ಕನಕಪುರದಲ್ಲಿ 4 ಗಂಟೆಯವರೆಗೆ ವಿದ್ಯುತ್​ ಕಡಿತವಾಗಲಿದೆ.

ವಿದ್ಯುತ್​ ವ್ಯತ್ಯಯವಾಗುವ ಏರಿಯಾಗಳು

ಬೆಂಗಳೂರಿನ, ಆರ್​ಟಿ ನಗರ, ಗಂಗಾ ನಗರ, ಚೋಳನಗರ, ಹೊರ ವರ್ತುವಲ್​ ರಸ್ತೆ, ಕರಿಯಪ್ಪ ಲೇಔಟ್​, ಆಶ್ರಮ ರಸ್ತೆ, ಆನಂದನಗರ ಮೊದಲನೇ ಬ್ಲಾಕ್​​, ಗುಡ್ಡಪ್ಪರೆಡ್ಡಿ ಲೇಔಟ್​, ಹೆಬ್ಬಾಳ, ಜಯಮಹಲ್ ಮೊದಲನೇ ಬ್ಲಾಕ್​​, ನಂದಿದುರ್ಗ ರಸ್ತೆ, ಮರಪ್ಪ ಗಾರ್ಡನ್​​, ಜೆಸಿನಗರ, ಮಿಲ್ಲರ್ಸ್​ ರಸ್ತೆ, ಗಂಗಾನಗರ, ಚಾಮುಂಡಿನಗರ, ದಿನ್ನುರ, ಪಿ&ಟಿ ಕಾಲೋನಿ, ಇಎಕ್ಸ್​​ ಸರ್ವಿಸ್​​ ಮೆನ್​ ಕಾಲೋನಿ, ಎಮ್​ಎಲ್​​ಎ ಲೇಔಟ್​, ಗಂಗಾನಗರ, ಆರ್​ಬಿವೈ ಕಾಲೋನಿ, ಹೆಚ್​ಎಮ್​​ಟಿ ಲೇಔಟ್​, ವಸಂತಪ್ಪ ಬ್ಲಾಕ್​​ ಇತ್ಯಾದಿ.

ಇದನ್ನೂ ಓದಿ: ಜಮೀನಲ್ಲಿ ಕರೆಂಟ್ ಕಂಬ ಹಾಕಿಸಿದ್ದರೆ ಪರಿಹಾರ ಸಿಗುತ್ತೆ ಎಂಬ ಸುದ್ದಿ ಸುಳ್ಳು -ಬೆಸ್ಕಾಂ ಸ್ಪಷ್ಟನೆ

ರಾಮನಗರ ವಿದ್ಯುತ್​ ವ್ಯತ್ಯಯ

ಮಾಗಡಿ ಉಪವಿಭಾಗ ಪ್ರದೇಶದ ಮತ್ತೀಕೆರೆ, ಹೆಲಿಗೆಹಳ್ಳಿ ಉಪವಿಭಾಗ, ಬಸಪಾನ ದೊಡ್ಡಿ, ಎಲಿಗೆಹಳ್ಳಿ, ಗೆಜ್ಜೆಗರಗುಪ್ಪೆ.

ಕನಕಪುರ: ಕೊಳ್ಳಿಗನಹಳ್ಳಿ ಪಂಚಾಯಿತಿ, ಟಿ-ಹೊಸಹಳ್ಳಿ ಪಂಚಾಯತಿ ಮತ್ತು ಚೇಳೂರು ಪಂಚಾಯಿತಿ ವ್ಯಾಪ್ತಿಯ ಹಾರೋಹಳ್ಳಿ ಟೌನ್​, ಹಾರೋಹಳ್ಳಿ ಕೈಗಾರಿಗಾ ಪ್ರದೇಶ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ರಾಮನಗರ: ಹುನ್ನಾಸಹನಹಳ್ಳಿ, ಕೊನಗಲ, ಯರಬನಗರದಲ್ಲಿ ವಿದ್ಯುತ್​ ಕಟ್​ ಆಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:34 am, Wed, 26 June 24

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ