ಬೆಂಗಳೂರು ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್​ ವ್ಯತ್ಯಯ 

ಕರ್ನಾಟಕ ವಿದ್ಯುತ್​ ಪ್ರಸರಣಾ ನಿಗಮ ನಿಯಮಿತ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಬೆಂಗಳೂರು ನಗರ, ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಇಂದು (ಜು.27) ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಬೆಂಗಳೂರು ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್​ ವ್ಯತ್ಯಯ 
ಸಾಂದರ್ಭಿಕ ಚಿತ್ರ
Follow us
|

Updated on: Jul 27, 2024 | 8:42 AM

ಬೆಂಗಳೂರು, ಜುಲೈ 27: ಕರ್ನಾಟಕ ವಿದ್ಯುತ್​ ಪ್ರಸರಣಾ ನಿಗಮ ನಿಯಮಿತ (KPTCL) ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಬೆಂಗಳೂರು (Bengaluru) ನಗರ, ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಇಂದು (ಜು.27) ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ ಪವರ್​ ಕಟ್​ ಇರಲಿದೆ. ವಿದ್ಯುತ್ ವ್ಯತ್ಯಯಕ್ಕೆ ಬೆಸ್ಕಾಂ ವಿಷಾಧ ವ್ಯಕ್ತಪಡಿಸಿದೆ.

ಬೆಂಗಳೂರು ನಗರ ವಲಯ

ಕೋರಮಂಗಲದ 4ನೇ ಬ್ಲಾಕ್​, ಮಹರಾಜ ಸಿಗ್ನಲ್​, ಗ್ರೀನ್​ ಲೀಫ್​ ಬಡಾವಣೆ, ಚಿನ್ಮಯ ಶಾಲೆ ರಸ್ತೆ, ರಹೇಜಾ ರೆಸಿಡೆನ್ಸಿ, ಜೆ ಬ್ಲಾಕ್​ನಲ್ಲಿ ಇಡೀ ದಿನ ವಿದ್ಯುತ್​ ಕಟ್​ ಆಗಲಿದೆ.

ಬೆಂಗಳೂರು ಗ್ರಾಮಾಂತರ ವಲಯ

ನೆಲಮಂಗಲದ ದೊಡ್ಡಬಳ್ಳಾಪುರ ನಗರ ಪ್ರದೇಶದ ದೊಡ್ಡಬಳ್ಳಾಪುರ ಪಟ್ಟಣ, ರಾಜಘಟ್ಟ, ತಿಪ್ಪೂರು, ರಘುನಾಥಪುರ, ತಳಗವಾರ, ಗಂಡರಾಜಪುರ, ಕೋನಘಟ್ಟ, ಮುದ್ದನಾಯಕನಪಾಳ್ಯ, ಹಣಬೆ, ಎಸ್ಎಸ್ ಘಾಟಿ, ಅಂತರಹಳ್ಳಿ, ಕಂಟನಕುಂಟೆ, ನೇರಲಗಟ್ಟಾ, ಹಾಡೋನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ತುಮಕೂರು ವೃತ್ತ

ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶ ಮತ್ತು ಅಂತರಸನಹಳ್ಳಿ 2ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಕಡಿತವಾಗಲಿದೆ.

ಹೊಸಕೋಟೆಯ ದೇವನಹಳ್ಳಿ ವ್ಯಾಪ್ತಿಯ ರಾಮನಾಥಪುರ, ಚಪ್ಪರದಕಲ್ಲಿನಲ್ಲಿ ವಿದ್ಯುತ್​ ಕಟ್​ ಆಗಲಿದೆ.

ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ http://bescom.karnataka.gov.in ಸಂಪರ್ಕಿಸಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!