AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸೆಪ್ಟೆಂಬರ್ 1ರಂದು ಸುರಿದ ಮಳೆ ಈ ವರ್ಷದ ಅತ್ಯಂತ ದೊಡ್ಡ ವರ್ಣಾರ್ಭಟ

ಈ ಬಾರಿಯ ಮುಂಗಾರು ಕೈಕೊಟ್ಟಿದ್ದರಿಂದ ರಾಜ್ಯದ ಜನರು ಚಿಂತೆಗೀಡಾಗಿದ್ದರು. ಒಣಗುತ್ತಿರುವ ಬೆಳೆಗಳನ್ನು ಕಂಡು ರೈತರು ಕಂಗಾಲ ಆಗಿದ್ದಾರೆ. ಆಗಸ್ಟ್ 1 ರಿಂದ 31ರ (ರಾತ್ರಿ 8.30) ರವರೆಗೆ ಕೇವಲ 12.6 ಮಿಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಸೆಪ್ಟೆಂಬರ್ 1ರಂದು ಸುರಿದ ಮಳೆ ಈ ವರ್ಷದ ಅತ್ಯಂತ ದೊಡ್ಡ ವರ್ಣಾರ್ಭಟ
ಮಳೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Sep 02, 2023 | 10:45 AM

Share

ಬೆಂಗಳೂರು: ರಾಜ್ಯದಲ್ಲಿ ಮತ್ತೆ ವರುಣರಾಯನ (Karnataka Rain) ಆರ್ಭಟ ಆರಂಭವಾಗುವ ಸಾಧ್ಯತೆ. ಸೆಪ್ಟೆಂಬರ್​​ ತಿಂಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಆಗಸ್ಟ್​ 31 ರಂದು ಬೆಂಗಳೂರಿನಲ್ಲಿ ಸರಿದ ಮಳೆ, ಈ ವರ್ಷದ ಅತ್ಯಂತ ದೊಡ್ಡ ವರುಣಾರ್ಭಟ ಎಂದು ವರದಿಯಾಗಿದೆ. ಆಗಸ್ಟ್​ 31 ರ ಸಂಜೆಯಿಂದ ಸೆಪ್ಟೆಂಬರ್ 1ರ ಬೆಳಿಗ್ಗೆ 8:30 ರವರೆಗೆ 136.5 ಮಿಮೀ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ (KSNDMC) ವೀಕ್ಷಣಾಲಯ ತಿಳಿಸಿದೆ.

ಈ ಬಾರಿಯ ಮುಂಗಾರು ಕೈಕೊಟ್ಟಿದ್ದರಿಂದ ರಾಜ್ಯದ ಜನರು ಚಿಂತೆಗೀಡಾಗಿದ್ದರು. ಒಣಗುತ್ತಿರುವ ಬೆಳೆಗಳನ್ನು ಕಂಡು ರೈತರು ಕಂಗಾಲ ಆಗಿದ್ದಾರೆ. ಆಗಸ್ಟ್ 1 ರಿಂದ 31ರ (ರಾತ್ರಿ 8.30) ರವರೆಗೆ ಕೇವಲ 12.6 ಮಿಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಆಗಸ್ಟ್ ಕೊನೆಯ ವಾರದ ಬಿಸಿಲಿನ ಬೇಗೆಗೆ ಜನರು ಬೆಂದು ಹೋಗಿದ್ದರು. ಆಗಸ್ಟ್ 28 ರಂದು, 32.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 4.5 ಡಿಗ್ರಿ ಸೆಲ್ಸಿಯಸ್​ ಹೆಚ್ಚಾಗಿತ್ತು.

ಇದನ್ನೂ ಓದಿ: ಸೆಪ್ಟೆಂಬರ್​ ತಿಂಗಳಲ್ಲಿ ಕೃಪೆ ತೋರುವ ವರುಣ, ರಾಜ್ಯಾದ್ಯಂತ ಮುಂದಿನ ಒಂದು ವಾರ ಮಳೆ ಸಾಧ್ಯತೆ

ಆದರೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಎರಡು ದಿನಗಳವರೆಗೆ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಜ್ಞ ಎ. ಪ್ರಸಾದ್ ತಿಳಿಸಿದ್ದಾರೆ.

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯದಲ್ಲಿ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ