AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Order: ಫೆ.18ರ ಮಹಾಶಿವರಾತ್ರಿಯಂದು ಬೆಂಗಳೂರಲ್ಲಿ ಪ್ರಾಣಿ ಹತ್ಯೆ, ಮಾಂಸ ಮಾರಾಟ ನಿಷೇಧ

Mahashivaratri: ಫೆ.18 ಶನಿವಾರ ಮಹಾಶಿವರಾತ್ರಿ ನಿಮಿತ್ತ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ರಾಜಧಾನಿಯಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ.

BBMP Order: ಫೆ.18ರ ಮಹಾಶಿವರಾತ್ರಿಯಂದು ಬೆಂಗಳೂರಲ್ಲಿ ಪ್ರಾಣಿ ಹತ್ಯೆ, ಮಾಂಸ ಮಾರಾಟ ನಿಷೇಧ
ಬಿಬಿಎಂಪಿ
TV9 Web
| Edited By: |

Updated on:Feb 17, 2023 | 9:06 AM

Share

ಬೆಂಗಳೂರು: ಫೆ.18 ಶನಿವಾರ ಮಹಾಶಿವರಾತ್ರಿ (Mahashivaratri). ಈ ದಿನ ನಾಡಿನಾದ್ಯಂತ ಶಿವ ದೇವಸ್ಥಾನಗಳಲ್ಲಿ ಬಹಳ ವಿಶೇಷವಾಗಿ ಪೂಜೆಗಳು ನೆರವೇರುತ್ತವೆ. ಅಂದು ಇಡೀ ದಿನ ಉಪವಾಸ ವ್ರತ ಮಾಡಿ, ರಾತ್ರಿ ಜಾಗರಣೆ ಮಾಡಿ ಹರನನ್ನು ಧ್ಯಾನಿಸುತ್ತಾರೆ. ಇದರಿಂದ ಎಲ್ಲಡೆ ಸಕಾರಾತ್ಮ ಚಿಂತನೆಗಳು ಹರದಾಡುತ್ತಿರುತ್ತವೆ. ಶಿವರಾತ್ರಿ ನಿಮಿತ್ತ (ಫೆ.18) ರಂದು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ರಾಜಧಾನಿಯಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಒಂದು ವೇಳೆ ಪ್ರಾಣಿ ಹತ್ಯೆ (Animal slaughtering) ಮತ್ತು (Meat Sale) ಮಾರಾಟ ಮಾಡಿದ್ದೇ ಆದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ಹೊರಡಿಸಿದೆ.

ಈ ಸಂಬಂಧ ಗುರುವಾರ (ಫೆ.17) ರಂದು ಸುತ್ತೋಲೆ ಹೊರಡಿಸಿದ ಮಹಾನಗರ ಪಾಲಿಕೆ, ಪಾಲಿಕೆ ವ್ಯಾಪ್ತಿಯಲ್ಲಿ ಒಳಪಡುವ ಮಾಂಸ ಮಾರಾಟ ಅಂಗಡಿಗಳಲ್ಲಿ, ಶನಿವಾರ ಮಹಾಶಿವರಾತ್ರಿ ದಿನದಂದು ಮಾಂಸ ಮಾರಾಟ ಮತ್ತು ಪ್ರಾಣಿ ಹಿಂಸೆ ಅಥವಾ ಬಲಿಯನ್ನು ನಿಷೇಧಿಸಲಾಗಿದೆ. ಯಲಹಂಕ ವಾಯುನಲೆಯಲ್ಲಿ ಏರೋ ಇಂಡಿಯಾ 2023 ಪ್ರಾರಂಭವಾದ ಹಿನ್ನೆಲೆ ಈಗಾಗಲೆ ಅಲ್ಲಿ ಮಾಂಸ ಮಾರಾಟ ಮತ್ತು ಹತ್ಯೆಯನ್ನು ನಿಷೇಧಿಸಲಾಗಿದೆ. ಹಾಗೇ ವಾಯುನೆಲೆ ಸುತ್ತುಮುತ್ತ ಮಾಂಸ ವಿಲೇವಾರಿಯನ್ನು ರದ್ದು ಮಾಡಲಾಗಿದೆ.

ಬಿಬಿಎಂಪಿ ಕಳೆದ ತಿಂಗಳು ಜನವರಿಯಂದು ಯಲಹಂಕ ವಾಯನೆಲೆ ಸುತ್ತಮುತ್ತ ಮಾಂಸ ಆಹಾರ ವಿಲೇವಾರಿಯನ್ನು ನಿಷೇಧಿಸಿದೆ. ಮಾಂಸಕ್ಕಾಗಿ ಹದ್ದುಗಳು ಬರುತ್ತವೆ. ಇದರಿಂದ ವಿಮಾನ ಹಾರಾಟಕ್ಕೆ ತೊಂದರೆಯಾಗುತ್ತದೆ ಎಂದು ಮಾಂಸ ವಿಲೇವಾರಿಯನ್ನು ನಿಷೇಧಿಸಲಾಗಿದೆ. ಇದಕ್ಕೆ ಸ್ಥಳಿಯರು ಮತ್ತು ಮಾರಾಟಗಾರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಬಿಬಿಎಂಪಿ ತನ್ನ ನಿಷೇಧ ಆಜ್ಞೆಯನ್ನು ಹಿಂಪಡೆದಿದೆ. ಆದರೆ ಜ್ಯ ವಿಲೇವಾರಿ ಬಗ್ಗೆ ಎಚ್ಚರವಹಿಸುವಂತೆ ಒತ್ತಾಯಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:43 am, Fri, 17 February 23

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?