AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಮೇ 10 ಮತದಾನ ದಿನ ಬೆಂಗಳೂರಿನ ಗಾರ್ಮೆಂಟ್ಸ್​​ ನೌಕರರಿಗೆ ಸಂಬಳ ಸಹಿತ ರಜೆ ಘೋಷಣೆ

ಮೇ 10ರಂದು ರಾಜ್ಯ ವಿಧಾನ ಸಭಾ ಚುನಾವಣೆ ನಡೆಯಲಿದ್ದು ಈ ದಿನ ಗಾರ್ಮೆಂಟ್ಸ್ ನೌಕರರಿಗೆ, ಕಾರ್ಮಿಕರಿಗೆಲ್ಲ ಸಂಬಳ ಸಹಿತ ರಜೆ ಘೋಷಿಸಲಾಗಿದೆ.

Karnataka Assembly Elections 2023: ಮೇ 10 ಮತದಾನ ದಿನ ಬೆಂಗಳೂರಿನ ಗಾರ್ಮೆಂಟ್ಸ್​​ ನೌಕರರಿಗೆ ಸಂಬಳ ಸಹಿತ ರಜೆ ಘೋಷಣೆ
ಮತದಾನ
ಆಯೇಷಾ ಬಾನು
ಆಯೇಷಾ ಬಾನು|

Updated on:Apr 18, 2023 | 8:14 AM

Share

ಮುಖ್ಯಾಂಶಗಳು

  • ಮೇ 10ರಂದು ರಾಜ್ಯ ವಿಧಾನ ಸಭಾ ಚುನಾವಣೆ
  • ಚುನಾವಣೆ ದಿನ ಗಾರ್ಮೆಂಟ್ಸ್ ನೌಕರರಿಗೆ, ಕಾರ್ಮಿಕರಿಗೆಲ್ಲ ಸಂಬಳ ಸಹಿತ ರಜೆ.
  • ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ರಜೆಗೆ ಸೂಚನೆ

ಬೆಂಗಳೂರು: ಎಲೆಕ್ಷನ್ ಅಂದ್ರೆ ಪ್ರಜಾಪ್ರಭುತ್ವದ ಹಬ್ಬ(Karnataka Assembly Elections 2023). ಇಂತಹ ಹಬ್ಬದ ದಿನ ಮೂರು ಲಕ್ಷ ಕಾರ್ಮಿಕರು ಮತದಾನದಿಂದ ವಂಚಿತರಾಗ್ತಿದ್ರು. ಈಗ ಅವ್ರಿಗೆಲ್ಲ ಖುಷಿ ಸುದ್ದಿ ನೀಡಲಾಗುತ್ತಿದ್ದು ಎಲೆಕ್ಷನ್ ದಿನ ಗಾರ್ಮೆಂಟ್ಸ್ ನೌಕರರಿಗೆ, ಕಾರ್ಮಿಕರಿಗೆಲ್ಲ(Garments Employees) ಸಂಬಳ ಸಹಿತ ರಜೆ ನೀಡಲು ನಿರ್ಧರಿಸಲಾಗಿದೆ. ಇದೇ ಮೇ 10ರಂದು ರಾಜ್ಯ ವಿಧಾನ ಸಭಾ ಚುನಾವಣೆ ನಡೆಯಲಿದ್ದು ಈ ದಿನ ಕಾರ್ಮಿಕರಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ವೋಟಿಂಗ್ ಕಡಿಮೆ ಆಗುತ್ತೆ. ಐಟಿ ಬಿಟಿ ಮಂದಿ ವೋಟ್​ ಮಾಡ್ದೆ ಟ್ರಿಪ್​ ಹೋಗ್ತಾರೆ. ಗಾರ್ಮೆಂಟ್ಸ್ ಹಾಗೂ ಕಾರ್ಖಾನೆಗಳಲ್ಲಿ ಕೆಲಸ ಮಾಡೋರಿಗೆ ಭಯ. ವೋಟ್​​ಗಾಗಿ ಡ್ಯೂಟಿ ಮಿಸ್​​ ಮಾಡಿದ್ರೆ ಸಂಬಳ ಕಟ್​​ ಮಾಡ್ತಾರೆ ಅಂತ ವೋಟ್ ಮಾಡ್ದೆ ಕೆಲ್ಸಕ್ಕೆ ಹಾಜರಾಗ್ತಿದ್ದಾರೆ. ಹೀಗಾಗಿ ಮತದಾನದ ದಿನ ಎಲ್ಲ್ಲ ಕೈಗಾರಿಕೆಗಳಲ್ಲಿ ಕಾರ್ಮಿಕರಿಗೆ, ಗಾರ್ಮೆಂಟ್ಸ್ ನೌಕರರಿಗೆ ಸಂಬಳ ಸಹಿತ ರಜೆ ಘೋಷಿಸಲಾಗಿದೆ. ಆದರೆ, ಮತದಾನ ಮಾಡದವರಿಗೆ ಸಂಬಳ ಸಹಿತ ರಜೆ ಪಡೆಯುವ ಹಕ್ಕು ಇಲ್ಲ.

ಇದನ್ನೂ ಓದಿ: ಮಂಡ್ಯಕ್ಕೆ ಸತೀಶ್ ನೀನಾಸಂ ಚುನಾವಣಾ ರಾಯಭಾರಿ, ಮತದಾನ ತಪ್ಪಿಸಬೇಡಿ ಎಂದ ನಟ

ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಶೇ.50ಕ್ಕಿಂತಲೂ ಕಡಿಮೆ ಆಗುತ್ತೆ. ಹೀಗಾಗೇ ಇದನ್ನ ತಪ್ಪಿಸಲು ವಾರದ ಮಧ್ಯೆ ಮತದಾನದ ದಿನಾಂಕ ಪ್ರಕಟಿಸಿದ್ದಾರೆ. ಆದ್ರೆ, ಗಾರ್ಮೆಂಟ್ಸ್​ ಸಿಬ್ಬಂದಿ ಮತ್ತು ಕಾರ್ಮಿಕರು ಮತದಾನಕ್ಕೆ ಗೈರಾಗುವ ಆತಂಕ ಎದುರಾಗಿದೆ. ಹೀಗಾಗಿ, ಈ ಬಾರಿ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ, ಪ್ರತಿ ಐಟಿ ಬಿಟಿ ಹಾಗೂ ಗಾರ್ಮೆಂಟ್ಸ್​​​ಗೆ ಭೇಟಿ ನೀಡಿ ವೋಟ್ ಮಾಡಲು ಮನವಿ ಮಾಡ್ತಿದ್ದಾರೆ. ಈ ವೇಳೆ ಗಾರ್ಮೆಂಟ್ಸ್​​ ಸಿಬ್ಬಂದಿ ಮತಹಾಕಲು ಊರಿಗೆ ಹೋದ್ರೆ, ಸಂಬಳ ಕಡಿತವಾಗುವ ಆತಂಕವನ್ನ ವ್ಯಕ್ತಿಪಡಿಸಿದ್ರು. ಇದ್ರಿಂದಾಗಿ ಗಾರ್ಮೆಂಟ್ಸ್ ಕಂಪನಿಗಳಿಗೆ ಸಂಬಳ ಸಹಿತ ರಜೆ ನೀಡುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ 3 ಲಕ್ಷ ಗಾರ್ಮೆಂಟ್ಸ್ ನೌಕರರಿದ್ದು, ಕಾರ್ಖಾನೆಗಳಲ್ಲಿ ದುಡಿಯುವ 1 ಲಕ್ಷಕ್ಕೂ ಹೆಚ್ಚು ಜನರಿದ್ದಾರೆ. ಇವ್ರೆಲ್ಲ ವೋಟ್ ಮಾಡಲು ಈಗ ಅವಕಾಶ ಸಿಕ್ಕಿದ್ದು, ಎಲೆಕ್ಷನ್​ಗೆ ರಜೆ ನೀಡಿದ್ರೆ, ವೋಟ್ ಮಾಡ್ದೆ ಇದ್ದವರಿಗೆ ಸಂಬಳ ನೀಡಲ್ವಂತೆ. ಸದ್ಯ ಕಾರ್ಮಿಕ ಇಲಾಖೆ ಕೂಡಾ ಎಲ್ಲಾ ಕಂಪನಿಗಳಿಗೂ ಸೂಚನೆ ನೀಡಿದ್ದು. ವೋಟ್ ಮಾಡಲು ಹೋಗುವ ನೌಕರರಿಗೆ ಸಂಬಳ ಸಹಿತ ರಜೆ ನೀಡಲು ಸೂಚನೆ ನೀಡ್ತಾಯಿದೆಯಂತೆ.

ವರದಿ: ಮುತ್ತಪ್ಪ ಲಮಾಣಿ, ಟಿವಿ9 ಬೆಂಗಳೂರು

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:14 am, Tue, 18 April 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ