AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಮೇ 10 ಮತದಾನ ದಿನ ಬೆಂಗಳೂರಿನ ಗಾರ್ಮೆಂಟ್ಸ್​​ ನೌಕರರಿಗೆ ಸಂಬಳ ಸಹಿತ ರಜೆ ಘೋಷಣೆ

ಮೇ 10ರಂದು ರಾಜ್ಯ ವಿಧಾನ ಸಭಾ ಚುನಾವಣೆ ನಡೆಯಲಿದ್ದು ಈ ದಿನ ಗಾರ್ಮೆಂಟ್ಸ್ ನೌಕರರಿಗೆ, ಕಾರ್ಮಿಕರಿಗೆಲ್ಲ ಸಂಬಳ ಸಹಿತ ರಜೆ ಘೋಷಿಸಲಾಗಿದೆ.

Karnataka Assembly Elections 2023: ಮೇ 10 ಮತದಾನ ದಿನ ಬೆಂಗಳೂರಿನ ಗಾರ್ಮೆಂಟ್ಸ್​​ ನೌಕರರಿಗೆ ಸಂಬಳ ಸಹಿತ ರಜೆ ಘೋಷಣೆ
ಮತದಾನ
ಆಯೇಷಾ ಬಾನು
|

Updated on:Apr 18, 2023 | 8:14 AM

Share

ಬೆಂಗಳೂರು: ಎಲೆಕ್ಷನ್ ಅಂದ್ರೆ ಪ್ರಜಾಪ್ರಭುತ್ವದ ಹಬ್ಬ(Karnataka Assembly Elections 2023). ಇಂತಹ ಹಬ್ಬದ ದಿನ ಮೂರು ಲಕ್ಷ ಕಾರ್ಮಿಕರು ಮತದಾನದಿಂದ ವಂಚಿತರಾಗ್ತಿದ್ರು. ಈಗ ಅವ್ರಿಗೆಲ್ಲ ಖುಷಿ ಸುದ್ದಿ ನೀಡಲಾಗುತ್ತಿದ್ದು ಎಲೆಕ್ಷನ್ ದಿನ ಗಾರ್ಮೆಂಟ್ಸ್ ನೌಕರರಿಗೆ, ಕಾರ್ಮಿಕರಿಗೆಲ್ಲ(Garments Employees) ಸಂಬಳ ಸಹಿತ ರಜೆ ನೀಡಲು ನಿರ್ಧರಿಸಲಾಗಿದೆ. ಇದೇ ಮೇ 10ರಂದು ರಾಜ್ಯ ವಿಧಾನ ಸಭಾ ಚುನಾವಣೆ ನಡೆಯಲಿದ್ದು ಈ ದಿನ ಕಾರ್ಮಿಕರಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ವೋಟಿಂಗ್ ಕಡಿಮೆ ಆಗುತ್ತೆ. ಐಟಿ ಬಿಟಿ ಮಂದಿ ವೋಟ್​ ಮಾಡ್ದೆ ಟ್ರಿಪ್​ ಹೋಗ್ತಾರೆ. ಗಾರ್ಮೆಂಟ್ಸ್ ಹಾಗೂ ಕಾರ್ಖಾನೆಗಳಲ್ಲಿ ಕೆಲಸ ಮಾಡೋರಿಗೆ ಭಯ. ವೋಟ್​​ಗಾಗಿ ಡ್ಯೂಟಿ ಮಿಸ್​​ ಮಾಡಿದ್ರೆ ಸಂಬಳ ಕಟ್​​ ಮಾಡ್ತಾರೆ ಅಂತ ವೋಟ್ ಮಾಡ್ದೆ ಕೆಲ್ಸಕ್ಕೆ ಹಾಜರಾಗ್ತಿದ್ದಾರೆ. ಹೀಗಾಗಿ ಮತದಾನದ ದಿನ ಎಲ್ಲ್ಲ ಕೈಗಾರಿಕೆಗಳಲ್ಲಿ ಕಾರ್ಮಿಕರಿಗೆ, ಗಾರ್ಮೆಂಟ್ಸ್ ನೌಕರರಿಗೆ ಸಂಬಳ ಸಹಿತ ರಜೆ ಘೋಷಿಸಲಾಗಿದೆ. ಆದರೆ, ಮತದಾನ ಮಾಡದವರಿಗೆ ಸಂಬಳ ಸಹಿತ ರಜೆ ಪಡೆಯುವ ಹಕ್ಕು ಇಲ್ಲ.

ಇದನ್ನೂ ಓದಿ: ಮಂಡ್ಯಕ್ಕೆ ಸತೀಶ್ ನೀನಾಸಂ ಚುನಾವಣಾ ರಾಯಭಾರಿ, ಮತದಾನ ತಪ್ಪಿಸಬೇಡಿ ಎಂದ ನಟ

ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಶೇ.50ಕ್ಕಿಂತಲೂ ಕಡಿಮೆ ಆಗುತ್ತೆ. ಹೀಗಾಗೇ ಇದನ್ನ ತಪ್ಪಿಸಲು ವಾರದ ಮಧ್ಯೆ ಮತದಾನದ ದಿನಾಂಕ ಪ್ರಕಟಿಸಿದ್ದಾರೆ. ಆದ್ರೆ, ಗಾರ್ಮೆಂಟ್ಸ್​ ಸಿಬ್ಬಂದಿ ಮತ್ತು ಕಾರ್ಮಿಕರು ಮತದಾನಕ್ಕೆ ಗೈರಾಗುವ ಆತಂಕ ಎದುರಾಗಿದೆ. ಹೀಗಾಗಿ, ಈ ಬಾರಿ ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ, ಪ್ರತಿ ಐಟಿ ಬಿಟಿ ಹಾಗೂ ಗಾರ್ಮೆಂಟ್ಸ್​​​ಗೆ ಭೇಟಿ ನೀಡಿ ವೋಟ್ ಮಾಡಲು ಮನವಿ ಮಾಡ್ತಿದ್ದಾರೆ. ಈ ವೇಳೆ ಗಾರ್ಮೆಂಟ್ಸ್​​ ಸಿಬ್ಬಂದಿ ಮತಹಾಕಲು ಊರಿಗೆ ಹೋದ್ರೆ, ಸಂಬಳ ಕಡಿತವಾಗುವ ಆತಂಕವನ್ನ ವ್ಯಕ್ತಿಪಡಿಸಿದ್ರು. ಇದ್ರಿಂದಾಗಿ ಗಾರ್ಮೆಂಟ್ಸ್ ಕಂಪನಿಗಳಿಗೆ ಸಂಬಳ ಸಹಿತ ರಜೆ ನೀಡುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ 3 ಲಕ್ಷ ಗಾರ್ಮೆಂಟ್ಸ್ ನೌಕರರಿದ್ದು, ಕಾರ್ಖಾನೆಗಳಲ್ಲಿ ದುಡಿಯುವ 1 ಲಕ್ಷಕ್ಕೂ ಹೆಚ್ಚು ಜನರಿದ್ದಾರೆ. ಇವ್ರೆಲ್ಲ ವೋಟ್ ಮಾಡಲು ಈಗ ಅವಕಾಶ ಸಿಕ್ಕಿದ್ದು, ಎಲೆಕ್ಷನ್​ಗೆ ರಜೆ ನೀಡಿದ್ರೆ, ವೋಟ್ ಮಾಡ್ದೆ ಇದ್ದವರಿಗೆ ಸಂಬಳ ನೀಡಲ್ವಂತೆ. ಸದ್ಯ ಕಾರ್ಮಿಕ ಇಲಾಖೆ ಕೂಡಾ ಎಲ್ಲಾ ಕಂಪನಿಗಳಿಗೂ ಸೂಚನೆ ನೀಡಿದ್ದು. ವೋಟ್ ಮಾಡಲು ಹೋಗುವ ನೌಕರರಿಗೆ ಸಂಬಳ ಸಹಿತ ರಜೆ ನೀಡಲು ಸೂಚನೆ ನೀಡ್ತಾಯಿದೆಯಂತೆ.

ವರದಿ: ಮುತ್ತಪ್ಪ ಲಮಾಣಿ, ಟಿವಿ9 ಬೆಂಗಳೂರು

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:14 am, Tue, 18 April 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ