AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ ಪ್ರದೇಶಗಳಲ್ಲಿ ಅ.18. 19ರಂದು ಪವರ್ ಕಟ್​

ಬೆಸ್ಕಾಂ, ಕೆಪಿಟಿಸಿಎಲ್​​ ವಿದ್ಯುತ್ ಸರಬರಾಜು ಕಂಪನಿಗಳು ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾರ್ಯಗಳನ್ನು ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಮತ್ತು ಗುರುವಾರ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಬೆಂಗಳೂರಿನ ಈ ಪ್ರದೇಶಗಳಲ್ಲಿ ಅ.18. 19ರಂದು ಪವರ್ ಕಟ್​
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Oct 18, 2023 | 12:12 PM

Share

ಮಂಗಳೂರು ಅ.18: ಮಳೆ ಇಲ್ಲದೆ ರಾಜ್ಯದಲ್ಲಿ ಬರಗಾಲ (Drought) ಆವರಿಸಿದೆ. ತೀವ್ರ ನೀರಿನ ಕೊರತೆಯಿಂದ ವಿದ್ಯುತ್ ಉತ್ಪಾದನೆಯಲ್ಲೂ ಕುಸಿತ ಕಂಡಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್​ ಶೆಡ್ಡಿಂಗ್​ ಶುರುವಾಗಿದೆ. ಬೆಂಗಳೂರು ಜನರಿಗೂ ಲೋಡ್​​ ಶೆಡ್ಡಿಂಗ್​ ಶಾಕ್ ನೀಡಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ವಿದ್ಯುತ್ ಸರಬರಾಜು ಕಂಪನಿಗಳು ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾರ್ಯಗಳನ್ನು ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಮತ್ತು ಗುರುವಾರ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ಪವರ್​ ಕಟ್​ ಆಗುವ ಸಾಧ್ಯತೆ ಇದೆ.

ಪವರ್​ ಕಟ್​ ಆಗುವ ಪ್ರದೇಶಗಳು

ಅಕ್ಟೋಬರ್ 18, ಬುಧವಾರ

ಆರ್‌ಪಿಸಿ ಲೇಔಟ್, ನೇತಾಜಿ ಲೇಔಟ್, ಅತ್ತಿಗುಪ್ಪೆ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ತಿಪ್ಪರಹಳ್ಳಿ, ಸಾಲುಪರಹಳ್ಳಿ, ವೆಂಕಟಾಪುರ ಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸಿಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿಯಲ್ಲಿ ವಿದ್ಯುತ್​ ಕಡಿತವಾಗಲಿದೆ.

ಅಕ್ಟೋಬರ್ 19, ಗುರುವಾರ

ಡಾ ರಾಜ್‌ಕುಮಾರ್ ರಸ್ತೆ, ಸೇಂಟ್ ತೆರೇಸಾ ಆಸ್ಪತ್ರೆ, ಆರ್‌ಪಿಸಿ ಲೇಔಟ್, ನೇತಾಜಿ ಲೇಔಟ್, ಅತ್ತಿಗುಪ್ಪೆ, ಮೌನೇಶ್ವರ ಬಡಾವಣೆ, ಜಯನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು. ಐಗೂರು, ಐಗೂರು ಗೋಳರಹಟ್ಟಿ, ಲಿಂಗದಹಳ್ಳಿ, ಒಡ್ಡನಹಳ್ಳಿ, ದೊಡ್ಡೇರಿ, ದೊಡ್ಡವೀರನಹಳ್ಳಿ, ರಂಗನಪಾಳ್ಯ, ಅಪ್ಪಿನಾಯಕನಹಳ್ಳಿ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸಿಅಗ್ರಹರಹಳ್ಳಿ, ಡಿ.ತಿಗದರಹಳ್ಳಿ, ಡಿ.ತಿಗದನಹಳ್ಳಿ, ಡಿ.ತಿಗದನಹಳ್ಳಿ, ದೊಡ್ಡಸಿ. , ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ , ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು