AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀನಾಮೆ ಬೆನ್ನಲ್ಲೇ ಬೆಂಗಳೂರಿನ ಡಾಲರ್ಸ್​ ಕಾಲೋನಿಯ ಬಿಎಸ್​ವೈ ನಿವಾಸ ಖಾಲಿ ಖಾಲಿ

ಕಳೆದೊಂದು ವಾರದಿಂದ ಸಿಎಂ ಡಾಲರ್ಸ್ ಕಾಲೋನಿ ನಿವಾಸ ಖಾಲಿಯೇ ಇದೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಕುಟುಂಬಸ್ಥರು ಯಾರು ಡಾಲರ್ಸ್ ಕಾಲೋನಿ ನಿವಾಸದಲ್ಲಿಲ್ಲ. ಸದ್ಯ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಅಡುಗೆ ಭಟ್ಟರು ಡ್ರೈವರ್​ಗಳು ಹಾಗೂ ಮನೆಕೆಲಸದವರು ಮಾತ್ರ ಇದ್ದಾರೆ.

ರಾಜೀನಾಮೆ ಬೆನ್ನಲ್ಲೇ  ಬೆಂಗಳೂರಿನ ಡಾಲರ್ಸ್​ ಕಾಲೋನಿಯ ಬಿಎಸ್​ವೈ ನಿವಾಸ ಖಾಲಿ ಖಾಲಿ
ಬೆಂಗಳೂರಿನ ಡಾಲರ್ಸ್​ ಕಾಲೋನಿಯ ಬಿಎಸ್​ವೈ ನಿವಾಸ
TV9 Web
| Edited By: |

Updated on:Jul 26, 2021 | 2:50 PM

Share

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪರ ಡಾಲರ್ಸ್ ಕಾಲೋನಿಯ ನಿವಾಸಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದ್ದು, ಐವತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೆ ಸಿಎಂ ಡಾಲರ್ಸ್ ಕಾಲೋನಿ ನಿವಾಸದ ಎರಡು ಕಡೆಯ ರಸ್ತೆಗೆ ಮೂವತ್ತಕ್ಕೂ ಹೆಚ್ಚು ಬ್ಯಾರೀಕೆಡ್ ಹಾಕಲಾಗಿದೆ. ಆದರೆ ಕಳೆದೊಂದು ವಾರದಿಂದ ಸಿಎಂ ಡಾಲರ್ಸ್ ಕಾಲೋನಿ ನಿವಾಸ ಖಾಲಿಯೇ ಇದೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಕುಟುಂಬಸ್ಥರು ಯಾರು ಡಾಲರ್ಸ್ ಕಾಲೋನಿ ನಿವಾಸದಲ್ಲಿಲ್ಲ. ಸದ್ಯ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಅಡುಗೆ ಭಟ್ಟರು ಡ್ರೈವರ್​ಗಳು ಹಾಗೂ ಮನೆಕೆಲಸದವರು ಮಾತ್ರ ಇದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟೂರು ಬೂಕನಕೆರೆ ಗ್ರಾಮದಲ್ಲಿ ಸೂತಕದ ಛಾಯೆ ಸಿಎಂ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ, ಅವರ ಹುಟ್ಟೂರು ಬೂಕನಕೆರೆ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದಂತಾಗಿದೆ. ರಾಜೀನಾಮೆ ನಂತರ ಗ್ರಾಮ ದೇವತೆ ಗೋಗೊಲಮ್ಮ ದೇವಿ‌ ದೇವಾಲಯದಲ್ಲಿ ಗ್ರಾಮಸ್ಥರು ಪೂಜೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆಯಿಂದ ಪಕ್ಷ ಸರ್ವನಾಶವಾಗಲಿದೆ. ಮುಂಬರುವ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಯಲ್ಲಿ ಪಕ್ಷ ನೆಲಕಚ್ಚಲಿದೆ. ಗ್ರಾಮದ ಹಿರಿಯರು ತೀರಿ ಹೋದರೆ ಯಾವ ರೀತಿಯ ಸೂತಕ ಆಚರಿಸಲಾಗುತ್ತದೊ ಅದೇ ರೀತಿಯ ಸೂತಕ ಆಚರಿಸುತ್ತಿದ್ದೇವೆ ಎಂದು ಗ್ರಾಮಸ್ಥರು ಮೌನ ಮುರಿದಿದ್ದಾರೆ. ಅಲ್ಲದೆ ಯಡಿಯೂರಪ್ಪರನ್ನು ನೆನೆದು ಅವರ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ.

ಶಿವಮೊಗ್ಗ: ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಿಂದ ಬೇಸರ ಯಡಿಯೂರಪ್ಪನವರ ರಾಜೀನಾಮೆ ನಿರೀಕ್ಷೆ ಮಾಡಿರಲಿಲ್ಲ. ಈ ನಡೆಯಿಂದ ನಮಗೆ ಸಹಜವಾಗಿಯೇ ಬೇಸರವಾಗಿದೆ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾವೆಲ್ಲರೂ ತಲೆ ಬಾಗಬೇಕು. ಪಕ್ಷ ಅವರನ್ನು ಮುಂದೆ ಕೂಡಾ ಬಳಸಿಕೊಳ್ಳುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಶಿವಮೊಗ್ಗದಲ್ಲಿ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 2 ತಿಂಗಳ ಹಿಂದೆಯೇ ರಾಜೀನಾಮೆಗೆ ನಿರ್ಧರಿಸಿದ್ದೆ; ರಾಜ್ಯಪಾಲ ಹುದ್ದೆ ಅಲಂಕರಿಸುವುದಿಲ್ಲ –ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ

BS Yediyurappa Resign: ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್​ ಯಡಿಯೂರಪ್ಪ ರಾಜೀನಾಮೆ ಘೋಷಣೆ

Published On - 2:13 pm, Mon, 26 July 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?