AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀನಾಮೆ ಬೆನ್ನಲ್ಲೇ ಬೆಂಗಳೂರಿನ ಡಾಲರ್ಸ್​ ಕಾಲೋನಿಯ ಬಿಎಸ್​ವೈ ನಿವಾಸ ಖಾಲಿ ಖಾಲಿ

ಕಳೆದೊಂದು ವಾರದಿಂದ ಸಿಎಂ ಡಾಲರ್ಸ್ ಕಾಲೋನಿ ನಿವಾಸ ಖಾಲಿಯೇ ಇದೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಕುಟುಂಬಸ್ಥರು ಯಾರು ಡಾಲರ್ಸ್ ಕಾಲೋನಿ ನಿವಾಸದಲ್ಲಿಲ್ಲ. ಸದ್ಯ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಅಡುಗೆ ಭಟ್ಟರು ಡ್ರೈವರ್​ಗಳು ಹಾಗೂ ಮನೆಕೆಲಸದವರು ಮಾತ್ರ ಇದ್ದಾರೆ.

ರಾಜೀನಾಮೆ ಬೆನ್ನಲ್ಲೇ  ಬೆಂಗಳೂರಿನ ಡಾಲರ್ಸ್​ ಕಾಲೋನಿಯ ಬಿಎಸ್​ವೈ ನಿವಾಸ ಖಾಲಿ ಖಾಲಿ
ಬೆಂಗಳೂರಿನ ಡಾಲರ್ಸ್​ ಕಾಲೋನಿಯ ಬಿಎಸ್​ವೈ ನಿವಾಸ
TV9 Web
| Edited By: |

Updated on:Jul 26, 2021 | 2:50 PM

Share

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆ, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪರ ಡಾಲರ್ಸ್ ಕಾಲೋನಿಯ ನಿವಾಸಕ್ಕೆ ಹೆಚ್ಚಿನ ಭದ್ರತೆ ನೀಡಲಾಗಿದ್ದು, ಐವತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೆ ಸಿಎಂ ಡಾಲರ್ಸ್ ಕಾಲೋನಿ ನಿವಾಸದ ಎರಡು ಕಡೆಯ ರಸ್ತೆಗೆ ಮೂವತ್ತಕ್ಕೂ ಹೆಚ್ಚು ಬ್ಯಾರೀಕೆಡ್ ಹಾಕಲಾಗಿದೆ. ಆದರೆ ಕಳೆದೊಂದು ವಾರದಿಂದ ಸಿಎಂ ಡಾಲರ್ಸ್ ಕಾಲೋನಿ ನಿವಾಸ ಖಾಲಿಯೇ ಇದೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಕುಟುಂಬಸ್ಥರು ಯಾರು ಡಾಲರ್ಸ್ ಕಾಲೋನಿ ನಿವಾಸದಲ್ಲಿಲ್ಲ. ಸದ್ಯ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಅಡುಗೆ ಭಟ್ಟರು ಡ್ರೈವರ್​ಗಳು ಹಾಗೂ ಮನೆಕೆಲಸದವರು ಮಾತ್ರ ಇದ್ದಾರೆ.

ಬಿ.ಎಸ್. ಯಡಿಯೂರಪ್ಪ ಅವರ ಹುಟ್ಟೂರು ಬೂಕನಕೆರೆ ಗ್ರಾಮದಲ್ಲಿ ಸೂತಕದ ಛಾಯೆ ಸಿಎಂ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ, ಅವರ ಹುಟ್ಟೂರು ಬೂಕನಕೆರೆ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದಂತಾಗಿದೆ. ರಾಜೀನಾಮೆ ನಂತರ ಗ್ರಾಮ ದೇವತೆ ಗೋಗೊಲಮ್ಮ ದೇವಿ‌ ದೇವಾಲಯದಲ್ಲಿ ಗ್ರಾಮಸ್ಥರು ಪೂಜೆ ಸಲ್ಲಿಸಿದ್ದಾರೆ. ಅವರ ರಾಜೀನಾಮೆಯಿಂದ ಪಕ್ಷ ಸರ್ವನಾಶವಾಗಲಿದೆ. ಮುಂಬರುವ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆಯಲ್ಲಿ ಪಕ್ಷ ನೆಲಕಚ್ಚಲಿದೆ. ಗ್ರಾಮದ ಹಿರಿಯರು ತೀರಿ ಹೋದರೆ ಯಾವ ರೀತಿಯ ಸೂತಕ ಆಚರಿಸಲಾಗುತ್ತದೊ ಅದೇ ರೀತಿಯ ಸೂತಕ ಆಚರಿಸುತ್ತಿದ್ದೇವೆ ಎಂದು ಗ್ರಾಮಸ್ಥರು ಮೌನ ಮುರಿದಿದ್ದಾರೆ. ಅಲ್ಲದೆ ಯಡಿಯೂರಪ್ಪರನ್ನು ನೆನೆದು ಅವರ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ.

ಶಿವಮೊಗ್ಗ: ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರಿಂದ ಬೇಸರ ಯಡಿಯೂರಪ್ಪನವರ ರಾಜೀನಾಮೆ ನಿರೀಕ್ಷೆ ಮಾಡಿರಲಿಲ್ಲ. ಈ ನಡೆಯಿಂದ ನಮಗೆ ಸಹಜವಾಗಿಯೇ ಬೇಸರವಾಗಿದೆ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾವೆಲ್ಲರೂ ತಲೆ ಬಾಗಬೇಕು. ಪಕ್ಷ ಅವರನ್ನು ಮುಂದೆ ಕೂಡಾ ಬಳಸಿಕೊಳ್ಳುತ್ತದೆ ಎನ್ನುವ ವಿಶ್ವಾಸ ಇದೆ ಎಂದು ಶಿವಮೊಗ್ಗದಲ್ಲಿ ಜಿಲ್ಲಾ ಕಚೇರಿಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 2 ತಿಂಗಳ ಹಿಂದೆಯೇ ರಾಜೀನಾಮೆಗೆ ನಿರ್ಧರಿಸಿದ್ದೆ; ರಾಜ್ಯಪಾಲ ಹುದ್ದೆ ಅಲಂಕರಿಸುವುದಿಲ್ಲ –ನಿರ್ಗಮಿತ ಮುಖ್ಯಮಂತ್ರಿ ಯಡಿಯೂರಪ್ಪ

BS Yediyurappa Resign: ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್​ ಯಡಿಯೂರಪ್ಪ ರಾಜೀನಾಮೆ ಘೋಷಣೆ

Published On - 2:13 pm, Mon, 26 July 21

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ