AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಣಂ ಸ್ಪೆಷಲ್​​​​: ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್​​ ರೈಲಿನ ಬೋಗಿಗಳ ಹೆಚ್ಚಳಕ್ಕೆ ನಿರ್ಧಾರ

Vande Bharat Express: ಓಣಂ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳನ್ನು 8 ರಿಂದ 16ಕ್ಕೆ ಹೆಚ್ಚಿಸಲು ರೈಲ್ವೆ ಇಲಾಖೆ ನಿರ್ಧರಿಸಿದ್ದು, ಇದರಿಂದ ಪ್ರತಿ ಪ್ರಯಾಣದಲ್ಲಿ 598 ಹೆಚ್ಚುವರಿ ಆಸನಗಳು ಲಭ್ಯವಾಗಲಿವೆ. 630 ಕಿಲೋಮೀಟರ್ ದೂರದ ಬೆಂಗಳೂರು–ಎರ್ನಾಕುಲಂ ಮಾರ್ಗವನ್ನು ಈ ವಂದೇ ಭಾರತ್ ರೈಲು 8 ಗಂಟೆ 40 ನಿಮಿಷಗಳಲ್ಲಿ ಕ್ರಮಿಸುತ್ತಿದ್ದು, ಹಬ್ಬದ ದಿನಗಳು ಹಾಗೂ ದೀರ್ಘ ವಾರಾಂತ್ಯಗಳಲ್ಲಿ ಈ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಭಾರಿ ಏರಿಕೆ ಕಂಡಿದೆ ಎನ್ನಲಾಗಿದೆ.

ಓಣಂ ಸ್ಪೆಷಲ್​​​​: ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್​​ ರೈಲಿನ ಬೋಗಿಗಳ ಹೆಚ್ಚಳಕ್ಕೆ ನಿರ್ಧಾರ
ಸಾಂದರ್ಭಿಕ ಚಿತ್ರImage Credit source: Getty Images
ಪ್ರಸನ್ನ ಹೆಗಡೆ
|

Updated on: Jun 28, 2026 | 9:38 AM

Share

ಮುಖ್ಯಾಂಶಗಳು

  • ಓಣಂ ವೇಳೆ ಪ್ರಯಾಣಿಕರ ದಟ್ಟಣೆ ತಪ್ಪಿಸಲು ಮುಂದಾದ ಸೌತರ್ನ್​​ ರೈಲ್ವೆ
  • ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ಸಾಮರ್ಥ್ಯ ದ್ವಿಗುಣ
  • ರೈಲಿನ ಸಾಮರ್ಥ್ಯವನ್ನು 8 ಬೋಗಿಗಳಿಂದ 16ಕ್ಕೆ ಹೆಚ್ಚಿಸಲು ತೀರ್ಮಾನ

ಬೆಂಗಳೂರು, ಜೂನ್​​ 28: ಓಣಂ ಹಬ್ಬಕ್ಕೆ ಊರಿಗೆ ತೆರಳುವು ಪ್ರಯಾಣಿಕರಿಗೆ ಗುಡ್​​​ ನ್ಯೂಸ್​​ ಸಿಕ್ಕಿದ್ದು, ಬೆಂಗಳೂರು–ಎರ್ನಾಕುಲಂ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಾಮರ್ಥ್ಯವನ್ನು ದ್ವಿಗುಣಗೊಳಿಸಲು ಸೌತರ್ನ್​​ ರೈಲ್ವೆ ನಿರ್ಧರಿಸಿದೆ. ಆ ಮೂಲಕ ಪ್ರಸ್ತುತ 8 ಬೋಗಿಗಳಿರುವ ರೈಲನ್ನು 16 ಬೋಗಿಗಳಿಗೆ ಹೆಚ್ಚಿಸಲಾಗುತ್ತಿದ್ದು, ಪ್ರತಿ ಪ್ರಯಾಣದಲ್ಲಿ 598 ಹೆಚ್ಚುವರಿ ಆಸನಗಳು ಲಭ್ಯವಾಗಲಿವೆ. ರೈಲಿಗೆ ಹೊಸ 16 ಬೋಗಿಗಳ ರೇಕ್ ಅನ್ನು ಜುಲೈ ಮೊದಲ ವಾರದಲ್ಲಿ ಪರಿಚಯಿಸುವ ಸಾಧ್ಯತೆ ಇದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಕಳೆದ ವರ್ಷದ ನವೆಂಬರ್‌ನಲ್ಲಿ ಈ ರೈಲು ಸೇವೆ ಆರಂಭವಾದ ಸುಮಾರು ಏಳು ತಿಂಗಳ ಬಳಿಕ ಈ ಬದಲಾವಣೆ ಜಾರಿಗೆ ಬರುತ್ತಿದೆ.

ಆಸನ ಸಾಮರ್ಥ್ಯ 1,128ಕ್ಕೆ ಏರಿಕೆ

ಓಣಂ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 21 ಮತ್ತು 22ರ ಪ್ರಯಾಣದ ಟಿಕೆಟ್‌ಗಳು ಬುಕ್ಕಿಂಗ್ ಆರಂಭವಾದ ತಕ್ಷಣವೇ ವೇಟಿಂಗ್ ಲಿಸ್ಟ್​​ಗೆ ತಲುಪಿದ್ದವು. ಹಬ್ಬದ ದಿನಗಳು ಹಾಗೂ ದೀರ್ಘ ವಾರಾಂತ್ಯಗಳಲ್ಲಿ ಈ ರೈಲಿನಲ್ಲಿ ಪ್ರಯಾಣಿಕರ ದಟ್ಟಣೆ ತೀವ್ರವಾಗಿ ಹೆಚ್ಚಿದೆ ಎನ್ನಲಾಗಿದೆ. ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಕೇರಳ ಮೂಲದ ಪ್ರಯಾಣಿಕರಿಂದ ಈ ರೈಲಿಗೆ ನಿರಂತರವಾಗಿ ಉತ್ತಮ ಸ್ಪಂದನೆ ದೊರೆಯುತ್ತಿದೆ. ಹೆಚ್ಚುವರಿ ಬೋಗಿಗಳ ಸೇರ್ಪಡೆಯಿಂದ ಹಬ್ಬದ ಸಮಯದ ಪ್ರಯಾಣಿಕರ ಒತ್ತಡ ಗಣನೀಯವಾಗಿ ಕಡಿಮೆಯಾಗಲಿದೆ. ಈ ಬದಲಾವಣೆಯೊಂದಿಗೆ ರೈಲಿನ ಆಸನ ಸಾಮರ್ಥ್ಯ 530ರಿಂದ 1,128ಕ್ಕೆ ಏರಿಕೆಯಾಗಲಿದ್ದು, ಪ್ರತಿ ಪ್ರಯಾಣದಲ್ಲಿ 598 ಹೆಚ್ಚುವರಿ ಪ್ರಯಾಣಿಕರು ಸಂಚರಿಸಲು ಅವಕಾಶ ಸಿಗಲಿದೆ.

ಇದನ್ನೂ ಓದಿ: ಬೆಂಗಳೂರು ಟು ಚೆನ್ನೈ ಜಸ್ಟ್ 73 ನಿಮಿಷ, ಹೈದರಾಬಾದ್‌ಗೆ 2 ಗಂಟೆ; ದೇಶದ 7 ಹೊಸ ಬುಲೆಟ್ ಟ್ರೈನ್ ಮಾರ್ಗಗಳ ಕಂಪ್ಲೀಟ್ ಟ್ರಾವೆಲ್ ಟೈಮ್ ಇಲ್ಲಿದೆ

ವಾರದಲ್ಲಿ ಆರು ದಿನ ಈ ರೈಲು ಸಂಚರಿಸುವುದರಿಂದ, ಒಂದು ದಿಕ್ಕಿನಲ್ಲಿ ವಾರಕ್ಕೆ 6,768 ಹೆಚ್ಚುವರಿ ಪ್ರಯಾಣಿಕರು ಪ್ರಯಾಣಿಸಲು ಸಾಧ್ಯವಾಗಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. 630 ಕಿಲೋಮೀಟರ್ ದೂರದ ಬೆಂಗಳೂರು–ಎರ್ನಾಕುಲಂ ಮಾರ್ಗವನ್ನು ಈ ವಂದೇ ಭಾರತ್ ರೈಲು 8 ಗಂಟೆ 40 ನಿಮಿಷಗಳಲ್ಲಿ ಕ್ರಮಿಸುತ್ತಿದ್ದು, ಮಾರ್ಗ ಮಧ್ಯೆ ಕೇವಲ ಒಂಬತ್ತು ನಿಲ್ದಾಣಗಳಲ್ಲಿ ಮಾತ್ರ ನಿಲುಗಡೆ ಇರಲಿದೆ ಎಂದು ದಿ ನ್ಯೂ ಇಂಡಿಯನ್​​ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಇಂದು ಈ ರಾಶಿಯವರು ಮಾತಿನ ಮೇಲೆ ನಿಗಾ ವಹಿಸಿ!
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!