AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡುತ್ತಿದ್ದಾಗ ಕಬ್ಬಿಣದ ಪೈಪ್​ ಒಳಗೆ ಸಿಲುಕಿದ ಒಂದೂವರೆ ವರ್ಷದ ಮಗುವಿನ ಕೈ!

ಮಕ್ಕಳು ಆಟವಾಡುವಾಗ ಪೋಷಕರು ಅವರ ಮೇಲೆ ಒಂದು ಕಣ್ಣಿಟ್ಟಿರು. ಇಲ್ಲವಾದರೆ ಮಕ್ಕಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇರುತ್ತದೆ. ಇದಕ್ಕೆ ತಾಜಾ ಉದಾಹರಣೆ ಎಂದರೆ, ಬೆಂಗಳೂರಿನಲ್ಲಿ ಆಡುತ್ತಿದ್ದ ಸಣ್ಣ ಮಗುವಿನ ಕೈ ಕಬ್ಬಿಣದ ಪೈಪ್ ಒಳಗೆ ಸಿಕ್ಕಿಹಾಕಿಕೊಂಡಿರುವುದು.

ಆಡುತ್ತಿದ್ದಾಗ ಕಬ್ಬಿಣದ ಪೈಪ್​ ಒಳಗೆ ಸಿಲುಕಿದ ಒಂದೂವರೆ ವರ್ಷದ ಮಗುವಿನ ಕೈ!
ಕಬ್ಬಿಣ ಪೈಪ್ ಒಳಗೆ ಸಿಲುಕಿದ ಮಗುವಿನ ಕೈ ಹೊರತೆಗೆಯುತ್ತಿರುವುದು
Rakesh Nayak Manchi
|

Updated on:Apr 17, 2023 | 10:36 PM

Share

ಬೆಂಗಳೂರು: ಮಕ್ಕಳು ಆಟವಾಡುವಾಗ ಪೋಷಕರು ಅವರ ಮೇಲೆ ಒಂದು ಕಣ್ಣಿಟ್ಟಿರು. ಇಲ್ಲವಾದರೆ ಮಕ್ಕಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇರುತ್ತದೆ. ಇದಕ್ಕೆ ತಾಜಾ ಉದಾಹರಣೆ ಎಂದರೆ, ಬೆಂಗಳೂರಿನಲ್ಲಿ (Bengaluru) ಆಡುತ್ತಿದ್ದ ಸಣ್ಣ ಮಗುವಿನ ಕೈ ಕಬ್ಬಿಣದ ಪೈಪ್ ಒಳಗೆ ಸಿಕ್ಕಿಹಾಕಿಕೊಂಡಿರುವುದು. ಹೌದು, ಡೈರಿ ಕಾಲೋನಿಯ ಶಿವನ ದೇವಸ್ಥಾನದಲ್ಲಿ ಆಡುಗೋಡಿ ನಿವಾಸಿ ಲೋಕೇಶ್ ಎಂಬುವರ ಮಗು ಸಚ್ಚು ಆಟವಾಡುತ್ತಿತ್ತು. ಹೇಳಿಕೇಳಿ ಸಣ್ಣ ಮಗು, ಪಾಪ ಅದಕ್ಕೇನು ಗೊತ್ತು? ಆಟವಾಡುತ್ತಾ ಕಬ್ಬಿಣದ ಪೈಪ್ ಒಳಗೆ ಕೈ ಹಾಕಿದ್ದು, ಅಲ್ಲೇ ಬಾಕಿಯಾಗಿ ಪರದಾಡುವಂತಾಗಿದೆ.

ಇಂದು ಸಂಜೆ ಲೋಕೇಶ್ ದಂಪತಿ ತನ್ನ ಒಂದೂವರೆ ವರ್ಷದ ಮಗು ಸಚ್ಚುವಿನೊಂದಿಗೆ ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ಮಗುವನ್ನ ದೇವಸ್ಥಾನದ ಆವರಣದಲ್ಲಿ ಆಟವಾಡಲು ಬಿಟ್ಟಿದ್ದರು. ಹೀಗೆ ಆಡುತ್ತಿದ್ದ ಸಚ್ಚು ಕಂಬ ನೆಡಲು ಅಳವಡಿಸಿದ್ದ ಕಬ್ಬಿಣದ ಪೈಪ್​ನೊಳಗೆ ಕೈ ಇಟ್ಟಿದೆ. ಮಗುವಿನ ಕೈಯಲ್ಲಿ ಬೆಳ್ಳಿ ಕಡಗ ಇದ್ದಿದ್ದರಿಂದ ಪೈಪ್​ನೊಳಗೆ ಸಿಲುಕಿಕೊಂಡಿದೆ. ಸುಮಾರು ಒಂದೂವರೆ ಅಡಿ ಉದ್ದದ ಪೈಪ್​ನೊಳಗೆ ಸಿಲುಕಿದೆ.

ಇದನ್ನೂ ಓದಿ: ಕೆಟ್ಟು ನಿಂತ ಆಟೋದಲ್ಲಿ ಕಂತೆ ಕಂತೆ ನೋಟು; ಯಾವ ಪಕ್ಷಕ್ಕೆ ಸೇರಿದ್ದು? ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಇನ್ನು, ಮಗುವಿನ ಕೈ ಕಬ್ಬಿಣದ ಪೈಪ್ ಒಳಗೆ ಸಿಲುಕಿದ್ದನ್ನು ನೋಡಿದ ಸ್ಥಳದಲ್ಲಿದ್ದ ಟ್ರಾಫಿಕ್ ಕಾನ್​ಸ್ಟೇಬಲ್ ಹನುಮಂತ್ ಅವರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದೆ. ಅದರಂತೆ ಮಣ್ಣನ್ನು ಅಗೆದು ಕಬ್ಬಿಣದ ಪೈಪ್ ಕಟ್ ಮಾಡಿ ಮಗುವಿನ ಕೈ ಹೊರತೆಗೆಯಲಾಯಿತು. ಸುಮಾರು ಎರೆಡು ಗಂಟೆಗಳ ಕಾಲ ಹರಸಾಹಸ ಪಟ್ಟು ಮಗುವಿನ ಕೈ ಹೊರತೆಗೆಯುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:36 pm, Mon, 17 April 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ