AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡುತ್ತಿದ್ದಾಗ ಕಬ್ಬಿಣದ ಪೈಪ್​ ಒಳಗೆ ಸಿಲುಕಿದ ಒಂದೂವರೆ ವರ್ಷದ ಮಗುವಿನ ಕೈ!

ಮಕ್ಕಳು ಆಟವಾಡುವಾಗ ಪೋಷಕರು ಅವರ ಮೇಲೆ ಒಂದು ಕಣ್ಣಿಟ್ಟಿರು. ಇಲ್ಲವಾದರೆ ಮಕ್ಕಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇರುತ್ತದೆ. ಇದಕ್ಕೆ ತಾಜಾ ಉದಾಹರಣೆ ಎಂದರೆ, ಬೆಂಗಳೂರಿನಲ್ಲಿ ಆಡುತ್ತಿದ್ದ ಸಣ್ಣ ಮಗುವಿನ ಕೈ ಕಬ್ಬಿಣದ ಪೈಪ್ ಒಳಗೆ ಸಿಕ್ಕಿಹಾಕಿಕೊಂಡಿರುವುದು.

ಆಡುತ್ತಿದ್ದಾಗ ಕಬ್ಬಿಣದ ಪೈಪ್​ ಒಳಗೆ ಸಿಲುಕಿದ ಒಂದೂವರೆ ವರ್ಷದ ಮಗುವಿನ ಕೈ!
ಕಬ್ಬಿಣ ಪೈಪ್ ಒಳಗೆ ಸಿಲುಕಿದ ಮಗುವಿನ ಕೈ ಹೊರತೆಗೆಯುತ್ತಿರುವುದು
Rakesh Nayak Manchi
|

Updated on:Apr 17, 2023 | 10:36 PM

Share

ಬೆಂಗಳೂರು: ಮಕ್ಕಳು ಆಟವಾಡುವಾಗ ಪೋಷಕರು ಅವರ ಮೇಲೆ ಒಂದು ಕಣ್ಣಿಟ್ಟಿರು. ಇಲ್ಲವಾದರೆ ಮಕ್ಕಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇರುತ್ತದೆ. ಇದಕ್ಕೆ ತಾಜಾ ಉದಾಹರಣೆ ಎಂದರೆ, ಬೆಂಗಳೂರಿನಲ್ಲಿ (Bengaluru) ಆಡುತ್ತಿದ್ದ ಸಣ್ಣ ಮಗುವಿನ ಕೈ ಕಬ್ಬಿಣದ ಪೈಪ್ ಒಳಗೆ ಸಿಕ್ಕಿಹಾಕಿಕೊಂಡಿರುವುದು. ಹೌದು, ಡೈರಿ ಕಾಲೋನಿಯ ಶಿವನ ದೇವಸ್ಥಾನದಲ್ಲಿ ಆಡುಗೋಡಿ ನಿವಾಸಿ ಲೋಕೇಶ್ ಎಂಬುವರ ಮಗು ಸಚ್ಚು ಆಟವಾಡುತ್ತಿತ್ತು. ಹೇಳಿಕೇಳಿ ಸಣ್ಣ ಮಗು, ಪಾಪ ಅದಕ್ಕೇನು ಗೊತ್ತು? ಆಟವಾಡುತ್ತಾ ಕಬ್ಬಿಣದ ಪೈಪ್ ಒಳಗೆ ಕೈ ಹಾಕಿದ್ದು, ಅಲ್ಲೇ ಬಾಕಿಯಾಗಿ ಪರದಾಡುವಂತಾಗಿದೆ.

ಇಂದು ಸಂಜೆ ಲೋಕೇಶ್ ದಂಪತಿ ತನ್ನ ಒಂದೂವರೆ ವರ್ಷದ ಮಗು ಸಚ್ಚುವಿನೊಂದಿಗೆ ದೇವಸ್ಥಾನಕ್ಕೆ ಹೋಗಿದ್ದರು. ಈ ವೇಳೆ ಮಗುವನ್ನ ದೇವಸ್ಥಾನದ ಆವರಣದಲ್ಲಿ ಆಟವಾಡಲು ಬಿಟ್ಟಿದ್ದರು. ಹೀಗೆ ಆಡುತ್ತಿದ್ದ ಸಚ್ಚು ಕಂಬ ನೆಡಲು ಅಳವಡಿಸಿದ್ದ ಕಬ್ಬಿಣದ ಪೈಪ್​ನೊಳಗೆ ಕೈ ಇಟ್ಟಿದೆ. ಮಗುವಿನ ಕೈಯಲ್ಲಿ ಬೆಳ್ಳಿ ಕಡಗ ಇದ್ದಿದ್ದರಿಂದ ಪೈಪ್​ನೊಳಗೆ ಸಿಲುಕಿಕೊಂಡಿದೆ. ಸುಮಾರು ಒಂದೂವರೆ ಅಡಿ ಉದ್ದದ ಪೈಪ್​ನೊಳಗೆ ಸಿಲುಕಿದೆ.

ಇದನ್ನೂ ಓದಿ: ಕೆಟ್ಟು ನಿಂತ ಆಟೋದಲ್ಲಿ ಕಂತೆ ಕಂತೆ ನೋಟು; ಯಾವ ಪಕ್ಷಕ್ಕೆ ಸೇರಿದ್ದು? ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಇನ್ನು, ಮಗುವಿನ ಕೈ ಕಬ್ಬಿಣದ ಪೈಪ್ ಒಳಗೆ ಸಿಲುಕಿದ್ದನ್ನು ನೋಡಿದ ಸ್ಥಳದಲ್ಲಿದ್ದ ಟ್ರಾಫಿಕ್ ಕಾನ್​ಸ್ಟೇಬಲ್ ಹನುಮಂತ್ ಅವರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದೆ. ಅದರಂತೆ ಮಣ್ಣನ್ನು ಅಗೆದು ಕಬ್ಬಿಣದ ಪೈಪ್ ಕಟ್ ಮಾಡಿ ಮಗುವಿನ ಕೈ ಹೊರತೆಗೆಯಲಾಯಿತು. ಸುಮಾರು ಎರೆಡು ಗಂಟೆಗಳ ಕಾಲ ಹರಸಾಹಸ ಪಟ್ಟು ಮಗುವಿನ ಕೈ ಹೊರತೆಗೆಯುವಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಯಶಸ್ವಿಯಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:36 pm, Mon, 17 April 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ