AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿ ಮಾದರಿಯಲ್ಲಿ ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರೂಪಾಯಿ ಅಪಘಾತ ವಿಮೆ

ಬಿಎಂಟಿಸಿಯ ನೌಕರರ ಕುಟುಂಬಕ್ಕೆ ಡಬಲ್ ಡಬಲ್ ಗುಡ್ ನ್ಯೂಸ್. ಕೆಎಸ್​ಆರ್​ಟಿಸಿ ಮಾದರಿಯಲ್ಲಿಯೇ ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರುಪಾಯಿ ಅಪಘಾತ ವಿಮೆ ನೀಡಲು ಸರ್ಕಾರ ಮುಂದಾಗಿದ್ದು, ಇಂದಿನಿಂದಲೇ ಈ ವಿಮಾ ಸೌಲಭ್ಯ ಜಾರಿಯಾಗಲಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೂಚನೆ ಮೇರೆಗೆ ಈ ವಿಮಾ ಸೌಲಭ್ಯ ಜಾರಿಯಾಗಿದ್ದು, ಬಿಎಂಟಿಸಿ‌ಯ 28 ಸಾವಿರ ನೌಕರರ ಕುಟುಂಬಗಳಿಗೆ ಸೌಲಭ್ಯ ದೊರೆಯಲಿದೆ.

ಕೆಎಸ್ಆರ್​ಟಿಸಿ ಮಾದರಿಯಲ್ಲಿ ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರೂಪಾಯಿ ಅಪಘಾತ ವಿಮೆ
ಕೆಎಸ್ಆರ್​ಟಿಸಿ ಮಾದರಿಯಲ್ಲಿ ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರೂಪಾಯಿ ಅಪಘಾತ ವಿಮೆ; ಇಂದಿನಿಂದಲೇ ಜಾರಿ
Kiran Surya
| Updated By: Rakesh Nayak Manchi|

Updated on: Feb 19, 2024 | 3:47 PM

Share

ಬೆಂಗಳೂರು, ಫೆ.19: ಕೆಎಸ್​ಆರ್​ಟಿಸಿ (KSRTC) ಮಾದರಿಯಲ್ಲಿಯೇ ಬಿಎಂಟಿಸಿ (BMTC) ನೌಕರರಿಗೂ ಒಂದು ಕೋಟಿ ರುಪಾಯಿ ಅಪಘಾತ ವಿಮೆ (Accident Insurance) ನೀಡಲು ಸರ್ಕಾರ ಮುಂದಾಗಿದ್ದು, ಇಂದಿನಿಂದಲೇ ಈ ವಿಮಾ ಸೌಲಭ್ಯ ಜಾರಿಯಾಗಲಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೂಚನೆ ಮೇರೆಗೆ ಈ ವಿಮಾ ಸೌಲಭ್ಯ ಜಾರಿಯಾಗಿದ್ದು, ಬಿಎಂಟಿಸಿ‌ಯ 28 ಸಾವಿರ ನೌಕರರ ಕುಟುಂಬಗಳಿಗೆ ಸೌಲಭ್ಯ ದೊರೆಯಲಿದೆ.

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಬಿಎಂಟಿಸಿ ಎಂಡಿ ರಾಮಚಂದ್ರನ್. ಆರ್, ಕೆಎಸ್​ಆರ್​ಟಿಸಿ ನೌಕರರು ಸಾವನ್ನಪ್ಪಿದರೆ ಮಾತ್ರ ಒಂದು ಕೋಟಿ ರುಪಾಯಿ ಪರಿಹಾರ ನೀಡಲಾಗುತ್ತಿತ್ತು. ಬಿಎಂಟಿಸಿ ನೌಕರರಿಗೆ ಕೇವಲ ಮೂರು ಲಕ್ಷ ರುಪಾಯಿ ಪರಿಹಾರವಿತ್ತು. ಈ ಬಗ್ಗೆ ಟಿವಿ9 ಸುದ್ದಿ ಮಾಡಿ ಸಾರಿಗೆ ಸಚಿವರ ಗಮನಕ್ಕೆ ತಂದಿತ್ತು. ಇದೀಗ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೂಚನೆ ಮೇರೆಗೆ ಈ ವಿಮಾ ಸೌಲಭ್ಯ ಜಾರಿಯಾಗಿದೆ ಎಂದರು.

ಇದನ್ನೂ ಓದಿ: ಬಿಎಂಟಿಸಿ ವತಿಯಿಂದ ಯುವಕ-ಯುವತಿಯರಿಗೆ ಉಚಿತ ಡ್ರೈವಿಂಗ್ ಕ್ಲಾಸ್, ನೂರಾರು ಜನರಿಗೆ ಸಹಾಯಕವಾಯ್ತು ಈ ಯೋಜನೆ

ಬಿಎಂಟಿಸಿ‌ಯ 28 ಸಾವಿರ ನೌಕರರ ಕುಟುಂಬಗಳಿಗೆ ಈ ವಿಮಾ ಸೌಲಭ್ಯ ದೊರೆಯಲಿದೆ. ಬಿಎಂಟಿಸಿಯ ನೌಕರರು ಕರ್ತವ್ಯದಲ್ಲಿರುವಾಗ ಮತ್ತು ಕರ್ತವ್ಯದಲ್ಲಿಲ್ಲದಿದ್ದಾಗಲೂ ಸಂಭವಿಸುವ ಅಪಘಾತಕ್ಕೂ 1 ಕೋಟಿ 15 ಲಕ್ಷ ರೂಪಾಯಿ ಪರಿಹಾರ ಸಿಗುತ್ತದೆ. ಸಿಬ್ಬಂದಿ ಸಾಮಾನ್ಯವಾಗಿ ಸಾವನ್ನಪ್ಪಿದರೆ 10 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ ಎಂದರು.

ಸಾರಿಗೆ ನೌಕರರ ಮುಖಂಡರು ಖುಷ್

ಬಿಎಂಟಿಸಿಯ ನೌಕರರ ಕುಟುಂಬಕ್ಕೂ ಒಂದು ಕೋಟಿ ರೂಪಾಯಿ ನೀಡುವಂತೆ ಮಾಡಿದ ಟಿವಿ9 ಗೆ ಧನ್ಯವಾದ ತಿಳಿಸಿದ ಸಾರಿಗೆ ನೌಕರರ ಮುಖಂಡರು, ಸುದ್ದಿ ಮಾಡಿ ಸಾರಿಗೆ ಸಚಿವರ ಗಮನಕ್ಕೆ ತಂದಿದ್ದು ಟಿವಿ9. ಹಾಗಾಗಿ ನಾವು ಟಿವಿ9ಗೆ ಧನ್ಯವಾದಗಳನ್ನು ಹೇಳುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ