AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಎಸ್ಆರ್​ಟಿಸಿ ಮಾದರಿಯಲ್ಲಿ ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರೂಪಾಯಿ ಅಪಘಾತ ವಿಮೆ

ಬಿಎಂಟಿಸಿಯ ನೌಕರರ ಕುಟುಂಬಕ್ಕೆ ಡಬಲ್ ಡಬಲ್ ಗುಡ್ ನ್ಯೂಸ್. ಕೆಎಸ್​ಆರ್​ಟಿಸಿ ಮಾದರಿಯಲ್ಲಿಯೇ ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರುಪಾಯಿ ಅಪಘಾತ ವಿಮೆ ನೀಡಲು ಸರ್ಕಾರ ಮುಂದಾಗಿದ್ದು, ಇಂದಿನಿಂದಲೇ ಈ ವಿಮಾ ಸೌಲಭ್ಯ ಜಾರಿಯಾಗಲಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೂಚನೆ ಮೇರೆಗೆ ಈ ವಿಮಾ ಸೌಲಭ್ಯ ಜಾರಿಯಾಗಿದ್ದು, ಬಿಎಂಟಿಸಿ‌ಯ 28 ಸಾವಿರ ನೌಕರರ ಕುಟುಂಬಗಳಿಗೆ ಸೌಲಭ್ಯ ದೊರೆಯಲಿದೆ.

ಕೆಎಸ್ಆರ್​ಟಿಸಿ ಮಾದರಿಯಲ್ಲಿ ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರೂಪಾಯಿ ಅಪಘಾತ ವಿಮೆ
ಕೆಎಸ್ಆರ್​ಟಿಸಿ ಮಾದರಿಯಲ್ಲಿ ಬಿಎಂಟಿಸಿ ನೌಕರರಿಗೂ ಒಂದು ಕೋಟಿ ರೂಪಾಯಿ ಅಪಘಾತ ವಿಮೆ; ಇಂದಿನಿಂದಲೇ ಜಾರಿ
ಕಿರಣ್​ ಸೂರ್ಯ
| Edited By: Rakesh Nayak Manchi|

Updated on: Feb 19, 2024 | 3:47 PM

Share

ಬೆಂಗಳೂರು, ಫೆ.19: ಕೆಎಸ್​ಆರ್​ಟಿಸಿ (KSRTC) ಮಾದರಿಯಲ್ಲಿಯೇ ಬಿಎಂಟಿಸಿ (BMTC) ನೌಕರರಿಗೂ ಒಂದು ಕೋಟಿ ರುಪಾಯಿ ಅಪಘಾತ ವಿಮೆ (Accident Insurance) ನೀಡಲು ಸರ್ಕಾರ ಮುಂದಾಗಿದ್ದು, ಇಂದಿನಿಂದಲೇ ಈ ವಿಮಾ ಸೌಲಭ್ಯ ಜಾರಿಯಾಗಲಿದೆ. ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೂಚನೆ ಮೇರೆಗೆ ಈ ವಿಮಾ ಸೌಲಭ್ಯ ಜಾರಿಯಾಗಿದ್ದು, ಬಿಎಂಟಿಸಿ‌ಯ 28 ಸಾವಿರ ನೌಕರರ ಕುಟುಂಬಗಳಿಗೆ ಸೌಲಭ್ಯ ದೊರೆಯಲಿದೆ.

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಬಿಎಂಟಿಸಿ ಎಂಡಿ ರಾಮಚಂದ್ರನ್. ಆರ್, ಕೆಎಸ್​ಆರ್​ಟಿಸಿ ನೌಕರರು ಸಾವನ್ನಪ್ಪಿದರೆ ಮಾತ್ರ ಒಂದು ಕೋಟಿ ರುಪಾಯಿ ಪರಿಹಾರ ನೀಡಲಾಗುತ್ತಿತ್ತು. ಬಿಎಂಟಿಸಿ ನೌಕರರಿಗೆ ಕೇವಲ ಮೂರು ಲಕ್ಷ ರುಪಾಯಿ ಪರಿಹಾರವಿತ್ತು. ಈ ಬಗ್ಗೆ ಟಿವಿ9 ಸುದ್ದಿ ಮಾಡಿ ಸಾರಿಗೆ ಸಚಿವರ ಗಮನಕ್ಕೆ ತಂದಿತ್ತು. ಇದೀಗ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸೂಚನೆ ಮೇರೆಗೆ ಈ ವಿಮಾ ಸೌಲಭ್ಯ ಜಾರಿಯಾಗಿದೆ ಎಂದರು.

ಇದನ್ನೂ ಓದಿ: ಬಿಎಂಟಿಸಿ ವತಿಯಿಂದ ಯುವಕ-ಯುವತಿಯರಿಗೆ ಉಚಿತ ಡ್ರೈವಿಂಗ್ ಕ್ಲಾಸ್, ನೂರಾರು ಜನರಿಗೆ ಸಹಾಯಕವಾಯ್ತು ಈ ಯೋಜನೆ

ಬಿಎಂಟಿಸಿ‌ಯ 28 ಸಾವಿರ ನೌಕರರ ಕುಟುಂಬಗಳಿಗೆ ಈ ವಿಮಾ ಸೌಲಭ್ಯ ದೊರೆಯಲಿದೆ. ಬಿಎಂಟಿಸಿಯ ನೌಕರರು ಕರ್ತವ್ಯದಲ್ಲಿರುವಾಗ ಮತ್ತು ಕರ್ತವ್ಯದಲ್ಲಿಲ್ಲದಿದ್ದಾಗಲೂ ಸಂಭವಿಸುವ ಅಪಘಾತಕ್ಕೂ 1 ಕೋಟಿ 15 ಲಕ್ಷ ರೂಪಾಯಿ ಪರಿಹಾರ ಸಿಗುತ್ತದೆ. ಸಿಬ್ಬಂದಿ ಸಾಮಾನ್ಯವಾಗಿ ಸಾವನ್ನಪ್ಪಿದರೆ 10 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ ಎಂದರು.

ಸಾರಿಗೆ ನೌಕರರ ಮುಖಂಡರು ಖುಷ್

ಬಿಎಂಟಿಸಿಯ ನೌಕರರ ಕುಟುಂಬಕ್ಕೂ ಒಂದು ಕೋಟಿ ರೂಪಾಯಿ ನೀಡುವಂತೆ ಮಾಡಿದ ಟಿವಿ9 ಗೆ ಧನ್ಯವಾದ ತಿಳಿಸಿದ ಸಾರಿಗೆ ನೌಕರರ ಮುಖಂಡರು, ಸುದ್ದಿ ಮಾಡಿ ಸಾರಿಗೆ ಸಚಿವರ ಗಮನಕ್ಕೆ ತಂದಿದ್ದು ಟಿವಿ9. ಹಾಗಾಗಿ ನಾವು ಟಿವಿ9ಗೆ ಧನ್ಯವಾದಗಳನ್ನು ಹೇಳುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು