AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cash Seize: ಬೆಂಗಳೂರು; ಕೆಟ್ಟು ನಿಂತಿದ್ದ ಆಟೋದಲ್ಲಿತ್ತು 1 ಕೋಟಿ ರೂ. ನಗದು!

ಬೆಂಗಳೂರಿನಲ್ಲಿ ಎಸ್‌.ಜೆ.ಪಾರ್ಕ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಟ್ಟು ನಿಂತಿದ್ದ ಆಟೋ ಒಂದರಲ್ಲಿ 1 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.

Cash Seize: ಬೆಂಗಳೂರು; ಕೆಟ್ಟು ನಿಂತಿದ್ದ ಆಟೋದಲ್ಲಿತ್ತು 1 ಕೋಟಿ ರೂ. ನಗದು!
ಅಬ್ಬಾ, ಕೆಟ್ಟು ನಿಂತ ಆಟೋದಲ್ಲಿ ಎಷ್ಟೊಂದು ಹಣ!
ಗಣಪತಿ ಶರ್ಮಾ
|

Updated on:Apr 13, 2023 | 10:14 PM

Share

ಬೆಂಗಳೂರು: ವಿಧಾನಸಭೆ ಚುನಾವಣೆ (Karnataka Assembly Elections 202) ಘೋಷಣೆಯಾದ ಬೆನ್ನಲ್ಲೇ ರಾಜ್ಯದಾದ್ಯಂತ ಅಕ್ರಮ ವಹಿವಾಟು ತಡೆಯುವ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಹಲವು ಕಡೆ ಚೆಕ್​ಪೋಸ್ಟ್​​ಗಳನ್ನು ನಿರ್ಮಿಸಿ ಚುನಾವಣಾ ಅಧಿಕಾರಿಗಳು ಅಕ್ರಮ ನಗದು, ಉಡುಗೊರೆ ಸಾಗಾಟದ ಬಗ್ಗೆ ಹದ್ದಿನಕಣ್ಣಿಟ್ಟಿದ್ದಾರೆ. ಅಭ್ಯರ್ಥಿಗಳು ಮತದಾರರಿಗೆ ಉಡುಗೊರೆ, ನಗದಿನ ಆಮಿಷವೊಡ್ಡುತ್ತಿರುವ ಪ್ರಕರಣಗಳೂ ಹೆಚ್ಚಾಗಿವೆ. ಈ ಮಧ್ಯೆ, ಬೆಂಗಳೂರಿನಲ್ಲಿ ಎಸ್‌.ಜೆ.ಪಾರ್ಕ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೆಟ್ಟು ನಿಂತಿದ್ದ ಆಟೋ ಒಂದರಲ್ಲಿ 1 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. ಈ ಹಣವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎನ್ನಲಾಗಿದ್ದು, ಪೊಲೀಸರು ಜಪ್ತಿ ಮಾಡಿದ್ದಾರೆ.

ಸುರೇಶ್‌, ಪ್ರವೀಣ್‌ ಎಂಬವರು ಆಟೋದಲ್ಲಿ 1 ಕೋಟಿ ರೂಪಾಯಿ ನಗದು ಸಾಗಿಸುತ್ತಿದ್ದರು. ಈ ವೇಳೆ ಆಟೋ ಕೆಟ್ಟು ನಿಂತಿತ್ತು. ಅನುಮಾನಾಸ್ಪದವಾಗಿ ಕಂಡುಬಂದ ಆಟೋವನ್ನು ಪರಿಶೀಲಿಸಿದಾಗ 1 ಕೋಟಿ ರೂ. ನಗದು ಪತ್ತೆಯಾಗಿದೆ. ನಗದಿಗೆ ಸಂಬಂಧಪಟ್ಟ ದಾಖಲೆಗಳು ಇರಲಿಲ್ಲ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸ್ ಠಾಣೆಗೆ ಐಟಿ ಇಲಾಖೆ ಅಧಿಕಾರಿಗಳೂ ಭೇಟಿ ನೀಡಿದ್ದು ಆರೋಪಿಗಳ ವಿಚಾರಣೆ ನಡೆಸಿದ್ದಾರೆ. ತಮ್ಮ ಬಳಿ ಇದ್ದ ನಗದು ರಾಜೇಶ್‌ ಎಂಟರ್‌ಪ್ರೈಸಸ್‌ಗೆ ಸೇರಿದ್ದು ಎಂದು ಆರೋಪಿಗಳು ಹೇಳಿದ್ದಾರೆ. ವಿಜಯನಗರದಿಂದ ಜಯನಗರಕ್ಕೆ ಸಾಗಿಸಲಾಗುತ್ತಿತ್ತು ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: ಪದ್ಮನಾಭನಗರ ಅಭ್ಯರ್ಥಿಗೆ ಬಿ ಫಾರಂ ನೀಡದ ಡಿಕೆ ಶಿವಕುಮಾರ್ ನಡೆಯ ಹಿಂದಿನ ಮರ್ಮವೇನು?

ಮೆಜೆಸ್ಟಿಕ್​ನಲ್ಲಿ ಖಾಸಗಿ ಬಸ್​​ಗಳ ತಪಾಸಣೆ

ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮವಾಗಿ ಹಣ, ವಸ್ತುಗಳ ಸಾಗಾಟ ಶಂಕೆ ವ್ಯಕ್ತವಾಗಿರುವ ಕಾರಣ ಬೆಂಗಳೂರಿನ ಮೆಜೆಸ್ಟಿಕ್​ನಲ್ಲಿ ಖಾಸಗಿ ಬಸ್​ಗಳನ್ನು ಪೊಲೀಸರು ಗುರುವಾರ ರಾತ್ರಿ ತಪಾಸಣೆಗೆ ಒಳಪಡಿಸಿದ್ದಾರೆ. 4 ತಂಡಗಳಾಗಿ ಉಪ್ಪಾರಪೇಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ರಾಜ್ಯದ ಬೇರೆ ಬೇರೆ ಕಡೆ ತೆರಳುವ ಬಸ್‌ಗಳಲ್ಲಿ ಪರಿಶೀಲನೆ ನಡೆಸಿದರು. ಮತದಾರರಿಗೆ ಹಂಚಲು ನಗದು, ಉಡುಗೊರೆಗಳನ್ನು ಅಕ್ರಮವಾಗಿ ಸಾಗಿಸುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ದಾಖಲೆ ಇಲ್ಲದ 46 ದ್ವಿಚಕ್ರ ವಾಹನಗಳ ಜಪ್ತಿ

ಶಿವಮೊಗ್ಗದಲ್ಲಿ ದಾಖಲೆ ಇಲ್ಲದ 46 ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ದ್ವಿಚಕ್ರ ವಾಹನಗಳು ಅಂದಾಜು 33,78,336 ರೂ. ಮೌಲ್ಯ ಹೊಂದಿವೆ ಎನ್ನಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:42 pm, Thu, 13 April 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ