AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕೆಐಎ ಎಕ್ಸ್​ಪ್ರೆಸ್​ವೇ ಸರಣಿ ರಸ್ತೆ ಅಪಘಾತದಲ್ಲಿ ಒಂದು ಸಾವು ಇಬ್ಬರಿಗೆ ಗಾಯ

ಶುಕ್ರವಾರ ರಾತ್ರಿ ಸುಮಾರು 9 ಗಂಟೆಗೆ ಅಪಘಾತ ಸಂಭವಿಸಿದೆ. ಬಹಳ ವೇಗದಲ್ಲಿ ಓಡುತ್ತಿದ್ದ ಅಂಬ್ಯುಲೆನ್ಸ್ ತನ್ನ ಮುಂದೆ ಹೋಗುತ್ತಿದ್ದ ಕಾರಿಗೆ ಗುದ್ದಿದೆ. ಕಾರು ತನ್ನ ಮುಂದಿದ್ದ ಆಟೋರಿಕ್ಷಾಗೆ ಢಿಕ್ಕಿ ಹೊಡೆದಿದೆ.

ಬೆಂಗಳೂರು ಕೆಐಎ ಎಕ್ಸ್​ಪ್ರೆಸ್​ವೇ ಸರಣಿ ರಸ್ತೆ ಅಪಘಾತದಲ್ಲಿ ಒಂದು ಸಾವು ಇಬ್ಬರಿಗೆ ಗಾಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 25, 2022 | 3:50 PM

Share

ಬೆಂಗಳೂರು ಜಕ್ಕೂರು ವಿಮಾನ ನಿಲ್ದಾಣದ ಬಳಿಯ ಕೆಐಎ ಎಕ್ಸ್​ಪ್ರೆಸ್​ವೇನಲ್ಲಿ (KIA Expressway) ಶುಕ್ರವಾರ ರಾತ್ರಿ ಒಂದು ಅಂಬ್ಯುಲೆನ್ಸ್ (ambulance), ಒಂದು ಕಾರು ಮತ್ತು ಒಂದು ಆಟೋ ರಿಕ್ಷಾ ಒಳಗೊಂಡ ಸರಣಿ ಅಪಘಾತವೊಂದರಲ್ಲಿ 32-ವರ್ಷ-ವಯಸ್ಸಿನ ಖಾಸಗಿ ಸಂಸ್ಥೆಯೊಂದರ (private firm) ಉದ್ಯೋಗಿ ಸಾವಿಗೀಡಾಗಿರುವುದು ತಡವಾಗಿ ವರದಿಯಾಗಿದೆ.

ಮೃತ ದುರ್ದೈವಿಯನ್ನು ಸಂಜೀವ ಕುಮಾರ ಎಂದು ಗುರುತಿಸಲಾಗಿದ್ದು, ಜಾರ್ಖಂಡ್ ಮೂಲದವರಾಗಿದ್ದ ಅವರು ಜಾಲಹಳ್ಳಿಗೆ ಸಮೀಪದ ಶೆಟ್ಟಿಹಳ್ಳಿಯಲ್ಲಿ ವಾಸವಾಗಿದ್ದರು. 52-ವರ್ಷ-ವಯಸ್ಸಿನ ಆಟೋ ರಿಕ್ಷಾ ಡ್ರೈವರ್ ಯಾರಬ್ ಮತ್ತು ಅಂಬ್ಯುಲೆನ್ಸ್ ಡ್ರೈವರ್ ರಮೇಶ್ ಗಾಯಗೊಂಡಿದ್ದಾರೆ.

ಪೊಲೀಸ್ ನೀಡಿರುವ ಮಾಹಿತಿ ಪ್ರಕಾರ ಕೈ ಮೂಳೆ ಮುರಿದುಕೊಂಡಿದ್ದ ಚಿಕ್ಕಬಳ್ಳಾಪುರದ ವ್ಯಕ್ತಿಯೊಬ್ಬರನ್ನು ರಮೇಶ ಓಡಿಸುತ್ತಿದ್ದ ಅಂಬ್ಯುಲೆನ್ಸ್ ಒಂದರಲ್ಲಿ ನಗರದ ಆಸ್ಪತ್ರೆಯೊಂದಕ್ಕೆ ಕರೆತರಲಾಗುತಿತ್ತು. ಶುಕ್ರವಾರ ರಾತ್ರಿ ಸುಮಾರು 9 ಗಂಟೆಗೆ ಅಪಘಾತ ಸಂಭವಿಸಿದೆ. ಬಹಳ ವೇಗದಲ್ಲಿ ಓಡುತ್ತಿದ್ದ ಅಂಬ್ಯುಲೆನ್ಸ್ ತನ್ನ ಮುಂದೆ ಹೋಗುತ್ತಿದ್ದ ಕಾರಿಗೆ ಗುದ್ದಿದೆ. ಕಾರು ತನ್ನ ಮುಂದಿದ್ದ ಆಟೋರಿಕ್ಷಾಗೆ ಢಿಕ್ಕಿ ಹೊಡೆದಿದೆ.

ತೀವ್ರವಾಗಿ ಗಾಯಗೊಂಡಿದ್ದ ಸಂಜೀವ್ ಕುಮಾರ ಅವರನ್ನು ಕೂಡಲೇ ಹತ್ತಿರದ ಅಸ್ಪತ್ರೆಯೊಂದಕ್ಕೆ ಒಯ್ಯಲಾದರೂ ಶನಿವಾರ ಬೆಳಗಿನ ಜಾವ 3 ಗಂಟೆಗೆ ಅವರು ಕೊನೆಯುಸಿರೆಳೆದಿದ್ದಾರೆ. ಯಾರಬ್ ಮತ್ತು ರಮೇಶ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಲಹಂಕ ಸಂಚಾರಿ ಪೊಲೀಸ್ ಪ್ರಕಾರ ಅಪಘಾತಕ್ಕೊಳಗಾದ ಎಲ್ಲ ವಾಹನಗಳು ವಿಮಾನ ನಿಲ್ದಾಣ ಕಡೆಯಿಂದ ನಗರದೆಡೆ ಬರುತ್ತಿದ್ದವು. ಆಟೋನಲ್ಲಿ ಯಾವುದೇ ಪ್ರಯಾಣಿಕನಿರಲಿಲ್ಲ ಮತ್ತು ಸಂಜೀವ ಕುಮಾರ ಕಾರಲ್ಲಿ ಒಬ್ಬರೇ ಇದ್ದರು.

ಅಂಬ್ಯುಲೆನ್ಸ್ ನಲ್ಲಿದ್ದ ಗಾಯಾಳು ಮತ್ತು ಅವರ ಜೊತೆಯಿದ್ದವರಿಗೆ ಗಾಯಗಳಾಗಿಲ್ಲ. ಅಪಘಾತದಿಂದಾಗಿ ಎಕ್ಸ್ ಪ್ರೆಸ್ ವೇನಲ್ಲಿ ಸುಮಾರು ಒಂದು ಗಂಟೆ ಕಾಲ ಟ್ರಾಫಿಕ್ ಜಾಮ್ ಆಗಿತ್ತು.

ಕೇಸು ದಾಖಲಿಸಿಕೊಂಡಿರುವ ಪೊಲೀಸರು ಎಲ್ಲ ಮೂರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಯಲಹಂಕದ ಸರ್ಕಾರೀ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಂಜೀವ ಅವರ ದೇಹವನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು.

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ