AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೆನ್ಜ್ ಕಾರು ಅಪಘಾತ, ಓರ್ವ ಸಾವು ಪ್ರಕರಣ; ಆರೋಪಿ ಬಂಧನ

ಈ ಘಟ‌‌ನೆ ಬಳಿಕ ಕಾರು ಚಾಲಕ ರಿತೇಶ್ ಗಾಯಾಳು ರಾಜೇಂದ್ರನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಯಾವಾಗ ಬೈಕ್ ಚಾಲಕ ರಾಜೇಂದ್ರ ಸಾವನ್ನಪ್ಪುತ್ತಿದ್ದ ಸುದ್ದಿ ಕಿವಿಗೆ ಬಿತ್ತೋ, ಕೂಡಲೇ ಕಾರು ಚಾಲಕ ರಿತೇಶ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ. ಈ ಹಿನ್ನಲೆ ಕೆಎಸ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಬೆಂಗಳೂರು: ಬೆನ್ಜ್ ಕಾರು ಅಪಘಾತ, ಓರ್ವ ಸಾವು ಪ್ರಕರಣ; ಆರೋಪಿ ಬಂಧನ
ಆರೋಪಿ ಬಂಧನ
Shivaprasad B
| Edited By: |

Updated on: Oct 29, 2023 | 4:24 PM

Share

ಬೆಂಗಳೂರು, ಅ.29: ಬೆಂಗಳೂರಿನ ಜೆ.ಪಿ ನಗರದ ಗೊಟ್ಟಿಗೆರೆ ರಸ್ತೆಯಲ್ಲಿ ನಡೆದಿದ್ದ ಭೀಕರ ಬೆನ್ಜ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಕೆ.ಎಸ್.ಲೇಔಟ್ ಸಂಚಾರ ಪೊಲೀಸರು ಬಂಧಿಸಿದ್ದಾರೆ. ನಿರ್ಲಕ್ಷ್ಯ ಚಾಲನೆ ಮಾಡಿ ಅಪಘಾತ ಎಸಗಿದ್ದ ರಿತೇಶ್ ಗೋಯಲ್ ಬಂಧಿತ ಆರೋಪಿ. ಇನ್ನು ಈ ಅಪಘಾತದಲ್ಲಿ ಬೈಕ್ ಸವಾರ ರಾಜೇಂದ್ರ (46) ಸಾವನ್ನಪ್ಪಿದ್ದ. ಹೌದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ರಾಜೇಂದ್ರನನ್ನು ಕೂಡಲೇ ಸ್ಥಳೀಯರು ಆಸ್ಪತ್ರೆ್ಗೆ ಸಾಗಿಸಲು ಪ್ರಯತ್ನಿಸಿದ್ದರು. ಆದರೆ, ದುರಾದೃಷ್ಟವಶಾತ್​ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದರು.

ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ ಕಾರು ಚಾಲಕ ರಿತೇಶ್

ಇನ್ನು ಈ ಘಟ‌‌ನೆ ಬಳಿಕ ಕಾರು ಚಾಲಕ ರಿತೇಶ್ ಗಾಯಾಳು ರಾಜೇಂದ್ರನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಯಾವಾಗ ಬೈಕ್ ಚಾಲಕ ರಾಜೇಂದ್ರ ಸಾವನ್ನಪ್ಪುತ್ತಿದ್ದ ಸುದ್ದಿ ಕಿವಿಗೆ ಬಿತ್ತೋ, ಕೂಡಲೇ ಕಾರು ಚಾಲಕ ರಿತೇಶ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ. ಈ ಹಿನ್ನಲೆ ಕೆಎಸ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:Chikkaballapur Accident : ಮಂಜು ಮುಸುಕಿದ ಮಬ್ಬು ರಸ್ತೆಯಲ್ಲಿ ಭೀಕರ ಅಪಘಾತ, ಮೃತ ನತದೃಷ್ಟರ ವಿಳಾಸ-ವಿವರಗಳು ಇಲ್ಲಿವೆ

ಘಟನೆ ವಿವರ

ನಿನ್ನೆ ಸಂಜೆ 4.20 ರ ವೇಳೆಗೆ ಬೆನ್ಜ್ ಕಾರು ಹಾಗೂ ಬೈಕ್ ಸವಾರ ರಾಜೇಂದ್ರನಿಗೆ ಅಪಘಾತವಾದ ಘಟನೆ ನಡೆದಿತ್ತು. ಈ ವೇಳೆ ಕಾರಿನ ಬಾನೆಟ್ ಮೇಲೆ ಹಾರಿದ್ದ ರಾಜೇಂದ್ರನನ್ನು ಬರೊಬ್ಬರಿ 100 ಮೀಟರ್ ಎಳೆದೊಯ್ದಿದ್ದು, ನಂತರ ಮತ್ತೊರ್ವ ಬೈಕ್ ಚಾಲಕನಿಗೆ ಅಪಘಾತ ಮಾಡಿತ್ತು. ಆ ಬಳಿಕ ರಸ್ತೆ ಬದಿ ಪುಟ್ ಪಾತ್ ಮೇಲೆ ಹರಿದು ಎಲೆಕ್ಟ್ರಿಕ್ ಪೋಲ್​ಗೆ ಬಡಿದಿತ್ತು. ಜೊತೆಗೆ ಅಪಘಾತದ ರಭಸಕ್ಕೆ ಎಲೆಕ್ಟ್ರಾನಿಕ್ ಕಂಬ ಮುರಿದು ಬಿದ್ದಿತ್ತು. ಭೀಕರ ಅಪಘಾತ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದರು. ಇನ್ನು  ಈ ಭೀಕರ ಅಪಘಾತದ ದೃಶ್ಯ, ರಸ್ತೆ ಬದಿಯ ಸಿಸಿ ಕ್ಯಾಮಾರದಲ್ಲಿ ಸೆರೆ ಆಗಿದ್ದು, ಈ ಕುರಿತು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದೀಗ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​