AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೆನ್ಜ್ ಕಾರು ಅಪಘಾತ, ಓರ್ವ ಸಾವು ಪ್ರಕರಣ; ಆರೋಪಿ ಬಂಧನ

ಈ ಘಟ‌‌ನೆ ಬಳಿಕ ಕಾರು ಚಾಲಕ ರಿತೇಶ್ ಗಾಯಾಳು ರಾಜೇಂದ್ರನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಯಾವಾಗ ಬೈಕ್ ಚಾಲಕ ರಾಜೇಂದ್ರ ಸಾವನ್ನಪ್ಪುತ್ತಿದ್ದ ಸುದ್ದಿ ಕಿವಿಗೆ ಬಿತ್ತೋ, ಕೂಡಲೇ ಕಾರು ಚಾಲಕ ರಿತೇಶ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ. ಈ ಹಿನ್ನಲೆ ಕೆಎಸ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಬೆಂಗಳೂರು: ಬೆನ್ಜ್ ಕಾರು ಅಪಘಾತ, ಓರ್ವ ಸಾವು ಪ್ರಕರಣ; ಆರೋಪಿ ಬಂಧನ
ಆರೋಪಿ ಬಂಧನ
Shivaprasad B
| Edited By: |

Updated on: Oct 29, 2023 | 4:24 PM

Share

ಬೆಂಗಳೂರು, ಅ.29: ಬೆಂಗಳೂರಿನ ಜೆ.ಪಿ ನಗರದ ಗೊಟ್ಟಿಗೆರೆ ರಸ್ತೆಯಲ್ಲಿ ನಡೆದಿದ್ದ ಭೀಕರ ಬೆನ್ಜ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಕೆ.ಎಸ್.ಲೇಔಟ್ ಸಂಚಾರ ಪೊಲೀಸರು ಬಂಧಿಸಿದ್ದಾರೆ. ನಿರ್ಲಕ್ಷ್ಯ ಚಾಲನೆ ಮಾಡಿ ಅಪಘಾತ ಎಸಗಿದ್ದ ರಿತೇಶ್ ಗೋಯಲ್ ಬಂಧಿತ ಆರೋಪಿ. ಇನ್ನು ಈ ಅಪಘಾತದಲ್ಲಿ ಬೈಕ್ ಸವಾರ ರಾಜೇಂದ್ರ (46) ಸಾವನ್ನಪ್ಪಿದ್ದ. ಹೌದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳು ರಾಜೇಂದ್ರನನ್ನು ಕೂಡಲೇ ಸ್ಥಳೀಯರು ಆಸ್ಪತ್ರೆ್ಗೆ ಸಾಗಿಸಲು ಪ್ರಯತ್ನಿಸಿದ್ದರು. ಆದರೆ, ದುರಾದೃಷ್ಟವಶಾತ್​ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದರು.

ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ ಕಾರು ಚಾಲಕ ರಿತೇಶ್

ಇನ್ನು ಈ ಘಟ‌‌ನೆ ಬಳಿಕ ಕಾರು ಚಾಲಕ ರಿತೇಶ್ ಗಾಯಾಳು ರಾಜೇಂದ್ರನನ್ನು ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಯಾವಾಗ ಬೈಕ್ ಚಾಲಕ ರಾಜೇಂದ್ರ ಸಾವನ್ನಪ್ಪುತ್ತಿದ್ದ ಸುದ್ದಿ ಕಿವಿಗೆ ಬಿತ್ತೋ, ಕೂಡಲೇ ಕಾರು ಚಾಲಕ ರಿತೇಶ್ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ. ಈ ಹಿನ್ನಲೆ ಕೆಎಸ್ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:Chikkaballapur Accident : ಮಂಜು ಮುಸುಕಿದ ಮಬ್ಬು ರಸ್ತೆಯಲ್ಲಿ ಭೀಕರ ಅಪಘಾತ, ಮೃತ ನತದೃಷ್ಟರ ವಿಳಾಸ-ವಿವರಗಳು ಇಲ್ಲಿವೆ

ಘಟನೆ ವಿವರ

ನಿನ್ನೆ ಸಂಜೆ 4.20 ರ ವೇಳೆಗೆ ಬೆನ್ಜ್ ಕಾರು ಹಾಗೂ ಬೈಕ್ ಸವಾರ ರಾಜೇಂದ್ರನಿಗೆ ಅಪಘಾತವಾದ ಘಟನೆ ನಡೆದಿತ್ತು. ಈ ವೇಳೆ ಕಾರಿನ ಬಾನೆಟ್ ಮೇಲೆ ಹಾರಿದ್ದ ರಾಜೇಂದ್ರನನ್ನು ಬರೊಬ್ಬರಿ 100 ಮೀಟರ್ ಎಳೆದೊಯ್ದಿದ್ದು, ನಂತರ ಮತ್ತೊರ್ವ ಬೈಕ್ ಚಾಲಕನಿಗೆ ಅಪಘಾತ ಮಾಡಿತ್ತು. ಆ ಬಳಿಕ ರಸ್ತೆ ಬದಿ ಪುಟ್ ಪಾತ್ ಮೇಲೆ ಹರಿದು ಎಲೆಕ್ಟ್ರಿಕ್ ಪೋಲ್​ಗೆ ಬಡಿದಿತ್ತು. ಜೊತೆಗೆ ಅಪಘಾತದ ರಭಸಕ್ಕೆ ಎಲೆಕ್ಟ್ರಾನಿಕ್ ಕಂಬ ಮುರಿದು ಬಿದ್ದಿತ್ತು. ಭೀಕರ ಅಪಘಾತ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದರು. ಇನ್ನು  ಈ ಭೀಕರ ಅಪಘಾತದ ದೃಶ್ಯ, ರಸ್ತೆ ಬದಿಯ ಸಿಸಿ ಕ್ಯಾಮಾರದಲ್ಲಿ ಸೆರೆ ಆಗಿದ್ದು, ಈ ಕುರಿತು ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇದೀಗ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್