ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಮತ್ತೊಂದು ಬಲಿ, ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಹಿಟ್​ ಆ್ಯಂಡ್​ ರನ್​ ನಡೆದಿದೆ. 8ನೇ ಮೈಲಿ ಬಳಿ ನಡೆದ ಹಿಟ್ ಆ್ಯಂಡ್ ರನ್​ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಮತ್ತೊಂದೆಡೆ ತುಮಕೂರು, ಕೋಲಾರದಲ್ಲೂ ಸಹ ರಸ್ತೆ ಅಪಘಾತದಲ್ಲಿ ಬೈಕ್ ಸವಾರರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್​ಗೆ ಮತ್ತೊಂದು ಬಲಿ, ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್
ಪ್ರಾತಿನಿಧಿಕ ಚಿತ್ರ
ಬಿ ಮೂರ್ತಿ, ನೆಲಮಂಗಲ Edited By:

Updated on: Nov 14, 2024 | 9:04 PM

ಬೆಂಗಳೂರು, (ನವೆಂಬರ್ 14): ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂದು(ನವೆಂಬರ್ 14) ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಆ್ಯಂಡ್ ರನ್ ಆಗಿದ್ದು, ಬೈಕ್ ಸವಾರ ಬಲಿಯಾಗಿದ್ದಾನೆ. ಇಂದು (ನವೆಂಬರ್ 14) ಬೆಂಗಳೂರಿನ 8ನೇ ಮೈಲಿ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ 25 ವರ್ಷದ ಯುವಕ ಮೃತಪಟ್ಟಿದ್ದಾನೆ. ಇದರಿಂದ ತುಮಕೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಇನ್ನು ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನು ಗುದ್ದಿಕೊಂಡು ಹೋಗಿರುವ ಅಪರಿಚಿತ ವಾಹನಕ್ಕಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ದ್ವಿಚಕ್ರ ವಾಹನಕ್ಕೆ ಬಸ್​ ಡಿಕ್ಕಿ

ತುಮಕೂರು: ಮಧುಗಿರಿ ತಾಲೂಕಿನ ಕೊಡಗದಾಲ ಗ್ರಾಮದ‌ ಬಳಿ ಸರ್ಕಾರಿ ಬಸ್​ ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿದ್ದಾನೆ. ಚಿಂತಾಮಣಿಯಿಂದ ಹಾವೇರಿಗೆ ತೆರಳುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಬಸ್, ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಕೊಡಗದಾಲ ಗ್ರಾಮದ‌ ಬಳಿ ಲೋಕೇಶ್ ತೆರಳುತ್ತಿದ್ದ ಬೈಕ್​ ಗುದ್ದಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಂತ ಕಾರಿಗೆ ಬೈಕ್ ಡಿಕ್ಕಿ

ಕೋಲಾರ: ನಗರದ ಕಾರಂಜಿಕಟ್ಟೆ ಬಡಾವಣೆಯಲ್ಲಿ ಮನೆ ಮುಂದೆ ನಿಂತಿದ್ದ ಕಾರ್​ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿಯಂತ್ರಣ ತಪ್ಪಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಬೈಕ್​​ ಸವಾರ ಯಶ್ವಂತ್(20) ಮೃತೊಟ್ಟಿದ್ದಾನೆ. ಕೋಲಾರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Published On - 9:03 pm, Thu, 14 November 24

Loading...
Unable to load recommendations.
Follow Us