ಬಿಎಂಟಿಸಿ ಬಸ್​ಗೆ ಮತ್ತೊಂದು ಬಲಿ, ಎರಡು ದಿನದ ಅಂತರದಲ್ಲಿ ಎರಡು ಸಾವು

ಬೆಂಗಳೂರಿನ ಉತ್ತರಹಳ್ಳಿ ರಸ್ತೆಯ ಮಂತ್ರಿ ಆಲ್ಪೈನ್ ಅಪಾರ್ಟ್ಮೆಂಟ್ ಮುಂಭಾಗ ಬಿಎಂಟಿಸಿ ಬಸ್​ಗೆ ಬೈಕ್ ಸವಾರ ಬಲಿಯಾಗಿದ್ದಾನೆ.ಇಸರೊಂದಿಗೆ ಎರಡು ದಿನದ ಅಂತರದಲ್ಲಿ ಕಿಲ್ಲರ್ ಬಿಎಂಟಿಸಿಗೆ ( Bmtc) ಮತ್ತೊಂದು ಬಲಿಯಾದಂತಾಗಿದೆ.

ಬಿಎಂಟಿಸಿ ಬಸ್​ಗೆ ಮತ್ತೊಂದು ಬಲಿ, ಎರಡು ದಿನದ ಅಂತರದಲ್ಲಿ ಎರಡು ಸಾವು
Follow us
| Updated By: ರಮೇಶ್ ಬಿ. ಜವಳಗೇರಾ

Updated on:Jan 08, 2024 | 5:22 PM

ಬೆಂಗಳೂರು, (ಜನವರಿ 08): ಎರಡು ದಿನದ ಅಂತರದಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ( Bmtc) ಬಲಿಯಾಗಿದೆ. ಬಿಎಂಟಿಸಿ ಬಸ್‌ನಡಿ ಸಿಲುಕಿ ಯುವಕನೊರ್ವ ಮೃತಪಟ್ಟಿದ್ದಾನೆ. ತೇಜಸ್ (22) ಮೃತ ದುರ್ದೈವಿ. ಬೆಂಗಳೂರಿನ ಉತ್ತರಹಳ್ಳಿ ರಸ್ತೆಯ ಮಂತ್ರಿ ಆಲ್ಪೈನ್ ಅಪಾರ್ಟ್ಮೆಂಟ್ ಮುಂಭಾಗ ಈ ದುರ್ಘಟನೆ ನಡೆದಿದೆ. ಮೈಸೂರು ರಸ್ತೆಯಿಂದ ಉತ್ತರಹಳ್ಳಿ ‌ಕಡೆಗೆ ತೇಜಸ್‌ ಬೈಕ್‌ನಲ್ಲಿ‌ ಹೋಗುತ್ತಿದ್ದ. ಆ ವೇಳೆ ಎದುರಿಗೆ ಇದ್ದ ಬಸ್‌ ಅನ್ನು ಓವರ್ ಟೇಕ್ ಮಾಡಲು ಹೋಗಿದ್ದಾನೆ. ಆದರೆ ನಿಯಂತ್ರಣ ತಪ್ಪಿ ಬೈಕ್‌ನಿಂದ ಕೆಳ ಬಿದ್ದ ತೇಜಸ್ ಮೇಲೆ ಬಿಎಂಟಿಸಿ ಬಸ್ ಹರಿದಿದೆ. ಇದರಿಂದ ತೇಜಸ್‌ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೆ‌‌ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಬಿಎಂಟಿಸಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ವೋಲ್ವೋ ಬಸ್​ಗೆ ಬೈಕ್ ಸವಾರ ಬಲಿ

ಮೊನ್ನೆ ಬಿಎಂಟಿಸಿ ವೋಲ್ವೋ ಬಸ್‌ ಡಿಕ್ಕಿ

ಮೊನ್ನೇ ಜ.6ರಂದು ಮಾರತ್ತಹಳ್ಳಿಯ ವರ್ತೂರು ಮುಖ್ಯರಸ್ತೆಯಲ್ಲಿ ಬಿಎಂಟಿಸಿ ವೋಲ್ವೋ ಬಸ್‌. ಬೈಕ್​ಗೆ ಡಿಕ್ಕಿಯಾಗಿ ಹೊಡೆದಿತ್ತು. ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಬೈಕ್‌ ಸವಾರ ಎಳಂಗೋವನ್ ಸೆಂಕತ್ತವಲ್ (43) ತೆರಳುತಿದ್ದ, ಅದೇ ಮಾರ್ಗದಲ್ಲಿ ಬಿಎಂಟಿಸಿ ವೋಲ್ವೋ ಬಸ್ ಬರುತ್ತಿತ್ತು. ಈ ವೇಳೆ ವೋಲ್ವೋ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕೆಳಗೆ ಬಿದ್ದ ಸವಾರ ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಿಂದ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯವಾಗಿದ್ದು, ಕೂಡಲೇ ಸ್ಥಳೀಯರು ಗಾಯಾಳನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದರು. ಆದರೆ ಆಸ್ಪತ್ರೆಗೆ ಸೇರುವ ಮೊದಲೇ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:19 pm, Mon, 8 January 24

20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್