AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆಗೆ 1 ವರ್ಷ; ಇನ್ನೂ ನನಗೆ ನ್ಯಾಯ ಸಿಕ್ಕಿಲ್ಲಾ ಎಂದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ

ಇಂದಿಗೆ ನಮ್ಮ ಮನಗೆ ಹಾಗೂ ಪೊಲೀಸ್ ಠಾಣೆಗೆ ಬೆಂಕಿ ಇಟ್ಟು ಒಂದು ವರ್ಷ ಅಗಿದೆ. ನಡೆಯಬಾರದ ಘಟನೆ ನಡೆದು ಹೋಗಿತ್ತು. ಅಂದಿನ ಈ ವಿಚಾರಕ್ಕೆ ನೋವಿದೆ. ಘಟನೆ ಸಂಬಂಧಪಟ್ಟಂತೆ ಪ್ರಮುಖ ಅರೋಪಿಗಳ ವಿಚಾರದಲ್ಲಿ ಕಾನೂನು ಮೂಲಕ ನ್ಯಾಯ ಸಿಕ್ಕಿದೆ. ಇನ್ನು ಸಂಪೂರ್ಣ ನ್ಯಾಯಾಕ್ಕಾಗಿ ಹೋರಾಟ ಮಾಡ್ತಿದ್ದೇವೆ -ಅಖಂಡ ಶ್ರೀನಿವಾಸ ಮೂರ್ತಿ

ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆಗೆ 1 ವರ್ಷ; ಇನ್ನೂ ನನಗೆ ನ್ಯಾಯ ಸಿಕ್ಕಿಲ್ಲಾ ಎಂದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ
ಶಾಸಕ ಅಖಂಡ ಶ್ರೀನಿವಾಸ ಮೂರ್ತಿ
TV9 Web
| Edited By: |

Updated on:Aug 11, 2021 | 11:55 AM

Share

ಬೆಂಗಳೂರು: ಒಂದು ವರ್ಷದ ಹಿಂದೆ ಇಡೀ ಬೆಂಗಳೂರಿಗೆ ಬೆಂಗಳೂರೆ ಬೆಚ್ಚಿ ಬೀಳುವಂತ ಘಟನೆ ನಡೆದಿತ್ತು. ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆ ಪ್ರಕರಣ(DJ Halli and KG Halli Violence) ಜನರ ನಿದ್ದೆ ಕೆಡಿಸಿತ್ತು. ಒಂದು ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅನಾಹುತ ನಡೆದಿತ್ತು. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ(Akhanda Srinivas Murthy) ಮನೆ ಬೆಂಕಿಗೆ ಆಹುತಿಯಾಗಿತ್ತು. ಸದ್ಯ ಇಂದು ಈ ಘಟನೆ ನಡೆದು ಒಂದು ವರ್ಷ ಕಳೆದಿದೆ.

ಈ ಬಗ್ಗೆ ಡಿಜೆ ಹಳ್ಳಿಯಲ್ಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮಾತನಾಡಿದ್ದಾರೆ. ಇಂದಿಗೆ ನಮ್ಮ ಮನಗೆ ಹಾಗೂ ಪೊಲೀಸ್ ಠಾಣೆಗೆ ಬೆಂಕಿ ಇಟ್ಟು ಒಂದು ವರ್ಷ ಅಗಿದೆ. ನಡೆಯಬಾರದ ಘಟನೆ ನಡೆದು ಹೋಗಿತ್ತು. ಅಂದಿನ ಈ ವಿಚಾರಕ್ಕೆ ನೋವಿದೆ. ಘಟನೆ ಸಂಬಂಧಪಟ್ಟಂತೆ ಪ್ರಮುಖ ಅರೋಪಿಗಳ ವಿಚಾರದಲ್ಲಿ ಕಾನೂನು ಮೂಲಕ ನ್ಯಾಯ ಸಿಕ್ಕಿದೆ. ಇನ್ನು ಸಂಪೂರ್ಣ ನ್ಯಾಯಾಕ್ಕಾಗಿ ಹೋರಾಟ ಮಾಡ್ತಿದ್ದೇವೆ. ಅದ್ರೆ ನಮ್ಮ ಪಕ್ಷದಿಂದ ಇದುವರೆಗೂ ನ್ಯಾಯಾ ಸಿಕ್ಕಿಲ್ಲ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ರಿಗೆ ಮನವಿ ಮಾಡಲಾಗಿದೆ. ಸಂಪತ್ ರಾಜ್ರಂತವರನ್ನು ಪಕ್ಷದಲ್ಲಿ ಇಟ್ಟುಕೊಳ್ಳಬೇಡಿ. ಸಂಪತ್ ರಾಜ್ ಪಕ್ಷದಿಂದ ಸಸ್ಪೆಂಡ್ ಮಾಡುವಂತೆ ಸಹ ಮನವಿ ಮಾಡಿದ್ದೇವೆ.

ಸುಪ್ರೀಂ ಕೋರ್ಟ್ನಲ್ಲಿ ಪ್ರಮುಖ ಅರೋಪಿಗಳಾದ ಸಂಪತ್ ರಾಜ್, ಜಾಕಿರ್, ಯಾಸಿನ್, ಅರೂಣ್ ರಾಜ್, ಗೆ ಸಿಕ್ಕಿರುವ ಬೇಲ್ ಕ್ಯಾನ್ಸಲ್ ಮಾಡಿಸಲು ಅರ್ಜೆ ಹಾಕಲಾಗಿದೆ. ಇದೇ ತಿಂಗಳ 23 ಕ್ಕೆ ಸುಪ್ರೀಂ ನಲ್ಲಿ ವಿಚಾರಣೆಗೆ ಬರುತ್ತೆ. ಇನ್ನೂ ನನಗೆ ಸಂಪೂರ್ಣ ನ್ಯಾಯಾ ಸಿಕ್ಕಿಲ್ಲಾ. ಪಕ್ಷದಿಂದ ನ್ಯಾಯಾ ಸಿಗಬೇಕಿದೆ ಎಂದರು.

ಘಟನೆಯ ಹಿನ್ನೆಲೆ ‘ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಲಾಗಿದೆ’ ಎಂದು ಆರೋಪಿಸಿ 500ಕ್ಕೂ ಹೆಚ್ಚು ಜನರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್‌ ಬೈರಸಂದ್ರದಲ್ಲಿ 2020ರ ಆಗಸ್ಟ್​ 10ರಂದು ವಾಹನಗಳಿಗೆ ಬೆಂಕಿಹಚ್ಚಿ, ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೆಯೂ ಕೆಲವರು ದಾಳಿ ಮಾಡಿದ್ದರು.

ಪೊಲೀಸರ ಗುಂಡೇಟಿಗೆ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದರು. ಅವಹೇಳನಕಾರಿ ಪೋಸ್ಟ್ ಹಾಕಿದ್ದ ಎನ್ನಲಾದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಘಟನೆಗೆ ಸಂಬಂಧಿಸಿದಂತೆ 111 ಜನರನ್ನು ಪೊಲೀಸರು ಬಂಧಿಸಿದ್ದರು. ಹಿಂಸಾಚಾರದಲ್ಲಿ 500ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ; ತಲೆಮರೆಸಿಕೊಂಡಿರುವ ಆರೋಪಿಗಳ ಮನೆ ಮೇಲೆ ಎನ್​ಐಎ ದಾಳಿ

Published On - 11:54 am, Wed, 11 August 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ