AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೊಮೆಟೊ ಆಯ್ತು ಈಗ ಈರುಳ್ಳಿ, ಬೆಳ್ಳುಳ್ಳಿ ಸರದಿ; ಸೈಲೆಂಟಾಗಿ ಏರಿಕೆ ಕಾಣುತ್ತಿದೆ

Onion And Ginger Rate: ಟೊಮೆಟೊ ಬಳಿಕ ಬೆಳ್ಳುಳ್ಳಿ ಹಾಗೂ ಈರುಳ್ಳಿ ಜನರಲ್ಲಿ ಕಣ್ಣೀರು ತರಿಸಲು ಆರಂಭಿಸಿದೆ. ಕಳೆದ ಒಂದು ವಾರದಿಂದ ಈರುಳ್ಳಿ ಬೆಲೆಯಲ್ಲಿ ಕೆಜಿಗೆ ಸುಮಾರು 12-15 ರೂ ರಷ್ಟು ಏರಿಕೆ ಕಂಡು ಬಂದಿದೆ. ಕೆಜಿ ಬೆಳ್ಳುಳ್ಳಿಗೆ 200 ರೂಪಾಯಿ ಇದೆ. ಹೊಸ ಕ್ರಾಫ್ಟ್ ಬರುವವರಿಗೂ ಇದೆ ಬೆಲೆ ಮುಂದುವರಿಯುವ ಸಾಧ್ಯತೆ ಇದೆ.

ಟೊಮೆಟೊ ಆಯ್ತು ಈಗ ಈರುಳ್ಳಿ, ಬೆಳ್ಳುಳ್ಳಿ ಸರದಿ; ಸೈಲೆಂಟಾಗಿ ಏರಿಕೆ ಕಾಣುತ್ತಿದೆ
ಈರುಳ್ಳಿ, ಬೆಳ್ಳುಳ್ಳಿ
Poornima Agali Nagaraj
| Edited By: |

Updated on: Aug 14, 2023 | 2:14 PM

Share

ಬೆಂಗಳೂರು, ಆ.14: ದಾಖಲೆ ಮಟ್ಟದಲ್ಲಿ ಬೆಲೆ ಏರಿಕೆ ಕಂಡಿದ್ದ ಟೊಮೆಟೊ ದರ(Tomato Rate) ಸದ್ಯ ಇಳಿಕೆ ಕಂಡಿದೆ. ಮಳೆ ಕಡಿಮೆಯಾದ ಹಿನ್ನೆಲೆ ಒಂದು ವಾರದಿಂದ ಟೊಮೆಟೊ ದರ ಕುಸಿತ ಕಾಣುತ್ತಿದೆ. ಇದರಿಂದ ಗ್ರಾಹಕರು ಫುಲ್ ಖುಷ್ ಆಗಿದ್ದಾರೆ. ಆದ್ರೆ ಇದೀಗ ಟೊಮೆಟೊ ಬಳಿಕ ಬೆಳ್ಳುಳ್ಳಿ(Ginger) ಹಾಗೂ ಈರುಳ್ಳಿ(Onion)ಜನರಲ್ಲಿ ಕಣ್ಣೀರು ತರಿಸಲು ಆರಂಭಿಸಿದೆ. ಕಳೆದ ಒಂದು ವಾರದಿಂದ ಈರುಳ್ಳಿ ಬೆಲೆಯಲ್ಲಿ ಕೆಜಿಗೆ ಸುಮಾರು 12-15 ರೂ ರಷ್ಟು ಏರಿಕೆ ಕಂಡು ಬಂದಿದೆ.

ಸೈಲೆಂಟ್ ಆಗಿ ಏರಿಕೆ ಕಾಣುತ್ತಿರುವ ಈರುಳ್ಳಿ

ಭಾರೀ ಏರಿಕೆ ಕಂಡು ರೈತರಿಗೆ ಭರಪೂರ ಲಾಭ ತಂದು ಕೊಟ್ಟ ಕೆಂಪು ಸುಂದರಿ ಟೊಮೆಟೊ ಬೆಲೆ ಸದ್ಯ ಇಳಿಕೆ ಕಾಣುತ್ತಿದೆ. ವಾರದಿಂದ ವಾರಕ್ಕೆ ಟೊಮೆಟೊ ದರ ಕುಸಿಯುತ್ತಿದೆ. ಕಳೆದ ವಾರ ಒಂದು ಕೆಜೆ ಟೊಮೆಟೊಗೆ 80 ರಿಂದ 90 ರೂ ಇತ್ತು. ಇಂದು 50 ರಿಂದ 60 ರೂಪಾಯಿ ಆಗಿದೆ. ಆದ್ರೆ ಟೊಮೆಟೊ ಬೆಲೆ ಇಳಿಕೆಯ ನಡುವೆ ಸೈಲೆಂಟ್ ಆಗಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಕಳೆದ ವಾರ ಕೆಜಿಗೆ 25 ರೂ. ಇದ್ದ ಈರುಳ್ಳಿ ಬೆಲೆ, ಈ ವಾರ 30 -40 ರೂ.ಗೆ ತಲುಪಿದೆ. ಸೂಪರ್ ಮಾರ್ಕೆಟ್​ಗಳಲ್ಲಿ ಕೆಜಿಗೆ 45 ರೂ.ಗಳಂತೆ ಮಾರಾಟ ಮಾಡಲಾಗುತ್ತಿದೆ. ಕಳೆದ ಒಂದು ವಾರದಿಂದ ಈರುಳ್ಳಿ ಬೆಲೆಯಲ್ಲಿ ಕೆಜಿಗೆ ಸುಮಾರು 12-15 ರೂ ರಷ್ಟು ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ: ಟೊಮೆಟೊ ಸುವರ್ಣ ಯುಗ ಅಂತ್ಯ, ಕುಸಿತದತ್ತ ಕೆಂಪು ರಾಣಿ; ಈಗ ಕೋಲಾರ ಎಪಿಎಂಸಿಯಲ್ಲಿ ಬೆಲೆ ಎಷ್ಟಿದೆ?

ಮುಂಗಾರು ಮಳೆ ಕೈಕೊಟ್ಟು ಚಿತ್ರದುರ್ಗ, ದಾವಣಗೆರೆ ಹಾಗೂ ಕರ್ನಾಟಕದ ಇತರೆಡೆಯಿಂದ ಈರುಳ್ಳಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ರಾಜ್ಯದಲ್ಲಿ ಸುಮಾರು 4,000 ಹೆಕ್ಟೇರ್‌ನಲ್ಲಿ ಬೆಳೆ ಕೊರತೆ ಇದೆ. ಮುಂಗಾರು ಮಳೆ ವಿಳಂಬವಾಗಿರುವುದರಿಂದ ಸುಮಾರು 6-8 ವಾರಗಳ ಕೊಯ್ಲು ವಿಳಂಬವಾಗಿದೆ. ಮಹಾರಾಷ್ಟ್ರದ ನಾಸಿಕ್ ನಲ್ಲಿಯೂ ಇದೇ ರೀತಿಯ ಸಮಸ್ಯೆಯಾಗಿದೆ. ಹೀಗಾಗಿ ಬೆಳೆ ಉತ್ಪಾದನೆಯಲ್ಲಿ ಕೊರತೆಗಳು ಎದುರಾಗಿದ್ದು, ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆಯಲ್ಲಿ 50 ರಿಂದ 60 ರೂಪಾಯಿ ಏರಿಕೆಯಾಗುವ ಸಾಧ್ಯಾತೆ ಇದೆ.

ಬೆಳ್ಳುಳ್ಳಿ ಬೆಲೆಯಲ್ಲಿಯೂ ಏರಿಕೆ

ಇನ್ನು ಮತ್ತೊಂದೆಡೆ ಬೆಳ್ಳುಳ್ಳಿ ದರ ಕೂಡ ಏರಿಕೆ ಕಾಣುತ್ತಿದೆ. ಕೆಜಿ ಬೆಳ್ಳುಳ್ಳಿಗೆ 200 ರೂಪಾಯಿ ಇದೆ. ಹೊಸ ಕ್ರಾಫ್ಟ್ ಬರುವವರಿಗೂ ಇದೆ ಬೆಲೆ ಮುಂದುವರಿಯುವ ಸಾಧ್ಯತೆ ಇದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳುಳ್ಳಿ ಬೆಲೆ ಜಾಸ್ತಿಯಾಗಿದೆ. ಇನ್ನು ಒಂದು ತಿಂಗಳು ಇದೇ ಬೆಲೆ ಮುಂದುವರಿಯುವ ಸಾಧ್ಯತೆ ಇದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?