AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯೋತ್ಸವ ಪ್ರಶಸ್ತಿ ನಾಮನಿರ್ದೇಶನಕ್ಕೆ ಆನ್​ಲೈನ್​ ಮೂಲಕ ಆಹ್ವಾನ; ಇಲ್ಲಿದೆ ಮಾಹಿತಿ

ಕಳೆದ ವರ್ಷ ವಿವಿಧ ಕ್ಷೇತ್ರಗಳಲ್ಲಿ ಎಲೆಮರೆ ಕಾಯಿಯಂತೆ ಸಾಧನೆ ಮಾಡಿದ 67 ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗಿತ್ತು. ಅದರಂತೆ ಈ ಬಾರಿ ಕೂಡ ಸಾಧಕರ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಹ್ವಾನಿಸಲಾಗಿದೆ.

ರಾಜ್ಯೋತ್ಸವ ಪ್ರಶಸ್ತಿ ನಾಮನಿರ್ದೇಶನಕ್ಕೆ ಆನ್​ಲೈನ್​ ಮೂಲಕ ಆಹ್ವಾನ; ಇಲ್ಲಿದೆ ಮಾಹಿತಿ
ಕನ್ನಡ ಬಾವುಟ
TV9 Web
| Edited By: |

Updated on:Sep 30, 2023 | 9:17 PM

Share

ಬೆಂಗಳೂರು, ಸೆ.30: ರಾಜ್ಯ ಸರ್ಕಾರದ ವತಿಯಿಂದ ಈ ಬಾರಿ 68 ನೇ ಕನ್ನಡ ರಾಜ್ಯೋತ್ಸವ(Kannada Rajyotsava) ಆಚರಣೆಯನ್ನು ಆಚರಿಸುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಈ ಹಿನ್ನಲೆ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳ ಸಾಧಕರ ಹೆಸರುಗಳನ್ನು ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅ.01 ರಿಂದ ಅ. 15 ರವರೆಗೆ ನಾಮನಿರ್ದೇಶನ ಮಾಡಬಹುದಾಗಿದೆ.

ಸೇವಾ ಸಿಂಧು ಪೋರ್ಟಲ್​ ಮೂಲಕ ನಾಮನಿರ್ದೇಶನಕ್ಕೆ ಅವಕಾಶ

ಹೌದು, ಈ ಬಾರಿ ಕೂಡ ಸಾಧಕರ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲು ಸೇವಾ ಸಿಂಧು ಪೋರ್ಟಲ್‌ನ ವೆಬ್‌ಸೈಟ್‌  https://sevasindhu.Karnataka.gov.in ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.

ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಸಲಹಾ ಸಮಿತಿ ರಚನೆ

2023 ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಸಲಹಾ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಸರ್ಕಾರದ ಸಚಿವಾಲಯವು ಆದೇಶ ಹೊರಡಿಸಿದೆ. ಸಮಿತಿಯ ಸದಸ್ಯರ ಹೆಸರು ಇಲ್ಲಿದೆ. ಅಧ್ಯಕ್ಷರಾಗಿ ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವರು, ಸದಸ್ಯರಾಗಿ ಸರ್ಕಾರದ  ಕಾರ್ಯದರ್ಶಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ,  ಪ್ರೊ. ಜಾಣಗೆರೆ ವೆಂಕಟರಾಮಯ್ಯ, ಡಾ. ಹೆಚ್.ಎಲ್. ಪುಷ್ಪ , ಡಾ. ವೀರಣ, ದಂಡೆ, ಡಾ. ಮೂಡಾಕೂಡು ಚಿನ್ನಸ್ವಾಮಿ, ಶ್ರೀ ಅಲ್ಲಮಪುಭು ಬೆಟ್ಟದೂರ, ಶ್ರೀ ಕಾ.ತ. ಚಿಕ್ಕಣ, ಡಾ. ಸಿ.ಆರ್. ಚಂದ್ರಶೇಖ‌, ಶ್ರೀ ಪಿಂಡಿಪಾವನಹಳ್ಳಿ ಮುನಿವೆಂಕಟಪ್ಪ, ಡಾ. ಕೃಷ್ಣಮೂರ್ತಿ, ಹನೂರು, ಶ್ರೀ ಟಾಕಪ್ಪ ಕಣ್ಣೂರು,  ಶ್ರೀ ಪಿಚ್ಚಳ್ಳಿ ಶ್ರೀನಿವಾಸ್‌, ಡಾ. ವಿಠಲ್ ಐ. ಬೆಣಗಿ, ನಿವೃತ್ತ ಉಪ ಕುಲಪತಿಗಳು, ಡಾ. ಸಣ್ಣರಾಮು, ಶ್ರೀ ವೆಂಕಟರಮಣಯ್ಯ, ಡಾ. ಎಮ್.ಎಸ್. ಮೂರ್ತಿ, ಡಾ. ಗೀತಾ, ಶಿವಮೊಗ್ಗ, ಡಾ. ವಿಠಲ್ ಐ. ಬೆಣಗಿ, ನಿವೃತ್ತ ಉಪ ಕುಲಪತಿಗಳು, ಡಾ. ಸಣ್ಣರಾಮು, ಶ್ರೀ ವೆಂಕಟರಮಣಯ್ಯ,ಡಾ. ಜಯದೇವಿ ಜಂಗಮ ಶೆಟ್ಟಿ, ಶ್ರೀ ಐಕೋಡಿ ಗೋವಿಂದಪ್ಪ, ಶ್ರೀ ಸಾಧುಕೋಕಿಲ, ಶ್ರೀಮತಿ ರೀತು ಅಬ್ರಹಾಂ ಶ್ರೀಮತಿ ಸುಕನ್ಯಾ ಪುಭಾಕ‌, ಶ್ರೀ ಫಯಾಜ್ ಖಾನ್,  ಶ್ರೀ ಹೃಷಿಕೇಶ್ ಬಹದ್ದೂರ್ ದೇಸಾಯಿ, ಶ್ರೀ ನರಸಿಂಹಲು ವಡವಾಟಿ, ಶ್ರೀ ಡಿ.ಎನ್.ನರಸಿಂಹರಾಜು, ನಿವೃತ್ತ ಐ.ಎ.ಎಸ್. ಅಧಿಕಾರಿ, ಶ್ರೀ ಪುರುಷೋತ್ತಮ ಬಿಳಿಮಲೆ, ಶ್ರೀ ಚನ್ನಬಸವಣ್ಯ ಪ್ರಕಾಶಕರು, ಶ್ರೀ ಶೈಲೇಶ್ ಚಂದ್ರಗುಪ್ತ, ಶ್ರೀ ಜೆ. ಲೋಕೇಶ್ ಸೇರಿ ಒಟ್ಟು 39 ಜನರನ್ನು ಆಯ್ಕೆ ಮಾಡಲಾಗಿದೆ.

2023- ಅಧಿಸೂಚನೆ (2)

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Sat, 30 September 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ