AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ಸಬ್ಜೆಕ್ಟ್​​ಗಷ್ಟೇ ಒತ್ತು; ಉಳಿದ ವಿಷಯಗಳಲ್ಲಿ ಪೂರ್ಣ ಪಠ್ಯ ಕಲಿಸುವುದಿಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಮಕ್ಕಳಲ್ಲಿ ಕೊರೊನಾ ಕಂಡುಬಂದ್ರೆ ಇಡೀ ಶಾಲೆ ಸ್ಯಾನಿಟೈಸ್ ಮಾಡಿಸಲಾಗುವುದು.​ ಬೆಳಗ್ಗೆ 10ರಿಂದ ಸಂಜೆ 4.30ರವರೆಗೂ ತರಗತಿಗಳು ನಡೆಯುತ್ತವೆ. ಶನಿವಾರ ಮಾತ್ರ ಬೆಳಗ್ಗೆ 8ರಿಂದ 11.40ರವರೆಗೆ ತರಗತಿಗಳು ಇರುತ್ತವೆ. 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್​ ​ಶೀಲ್ಡ್ ಸಹ​​​ ಕಡ್ಡಾಯಗೊಳಿಸಲಾಗಿದೆ.

ಎರಡು ಸಬ್ಜೆಕ್ಟ್​​ಗಷ್ಟೇ ಒತ್ತು; ಉಳಿದ ವಿಷಯಗಳಲ್ಲಿ ಪೂರ್ಣ ಪಠ್ಯ ಕಲಿಸುವುದಿಲ್ಲ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಶಿಕ್ಷಣ ಸಚಿವ ಬಿಸಿ ನಾಗೇಶ್
TV9 Web
| Edited By: ಸಾಧು ಶ್ರೀನಾಥ್​|

Updated on:Nov 18, 2021 | 2:01 PM

Share

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಗಣಿತ ಮತ್ತು ವಿಜ್ಞಾನ ಸಬ್ಜೆಕ್ಟ್​​ಗಳಲ್ಲಿ ಮಾತ್ರ ಶೇ. 100ರಷ್ಟು ಪೂರ್ಣ ಪಠ್ಯ ಮಾಡ್ತೇವೆ. ಉಳಿದ ವಿಷಯಗಳಲ್ಲಿ ಶೇ.100ರಷ್ಟು ಪಠ್ಯ ಬಗ್ಗೆ ಒತ್ತು ನೀಡ್ತಿಲ್ಲ. 2 ಭಾಷೆಗಳಲ್ಲಿ ಪಠ್ಯ ಪೂರೈಸದಿದ್ದರೆ ಮುಂದಿನ ತರಗತಿಗಳಲ್ಲಿ ತೊಂದರೆ ಆಗುತ್ತೆ ಎಂದು ಟಿವಿ9ಗೆ ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಈ ಮಧ್ಯೆ, ಶಾಲೆ ಆರಂಭಕ್ಕೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಮಕ್ಕಳು ಶಾಲೆಗೆ ಬರಲು ಪೋಷಕರ ಒಪ್ಪಿಗೆ ಕಡ್ಡಾಯವಾಗಿದೆ. ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ವ್ಯವಸ್ಥೆ ಇರುತ್ತದೆ. ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳೇ ಊಟ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತಾರೆ. ಕೊಠಡಿಯಲ್ಲಿ 15-20 ಮಕ್ಕಳ ತಂಡ ರಚಿಸಿ ಪಾಠ ಮಾಡಲಾಗುವುದು. ಶಾಲೆಯ ಗೇಟ್​​ಬಳಿ ಮಕ್ಕಳಿಗೆ ಕೊವಿಡ್ ತಪಾಸಣೆ ಮಾಡಲಾಗುವುದು.

ಮಕ್ಕಳಲ್ಲಿ ಕೊರೊನಾ ಕಂಡುಬಂದ್ರೆ ಇಡೀ ಶಾಲೆ ಸ್ಯಾನಿಟೈಸ್ ಮಾಡಿಸಲಾಗುವುದು.​ ಬೆಳಗ್ಗೆ 10ರಿಂದ ಸಂಜೆ 4.30ರವರೆಗೂ ತರಗತಿಗಳು ನಡೆಯುತ್ತವೆ. ಶನಿವಾರ ಮಾತ್ರ ಬೆಳಗ್ಗೆ 8ರಿಂದ 11.40ರವರೆಗೆ ತರಗತಿಗಳು ಇರುತ್ತವೆ. ಶಿಕ್ಷಕರು ಮತ್ತು ಮಕ್ಕಳಿಗೆ ಮಾಸ್ಕ್ ಧರಿಸುವುದು ಕಡ್ಡಾಯ​ ಮಾಡಲಾಗಿದೆ. ಶಿಕ್ಷಕರು 2 ಡೋಸ್​ ಲಸಿಕೆ ಪಡೆದಿರುವುದು ಕಡ್ಡಾಯವಾಗಿದೆ. 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್​ ​ಶೀಲ್ಡ್ ಸಹ​​​ ಕಡ್ಡಾಯಗೊಳಿಸಲಾಗಿದೆ.

(only science and maths subjects will be taught fully says karnataka education minister bc nagesh)

Published On - 11:57 am, Thu, 18 November 21

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್