AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ಯಲಹಂಕ ವಲಯದ ಕೋವಿಡ್ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಮಾತ್ರ ಇಲ್ಲಿ ಅವಕಾಶ: ಬಿಬಿಎಂಪಿ ಹೊಸ ರೂಲ್ಸ್​

ಕೊರೊನಾಗೆ ಆಹುತಿಯಾದವರ ಶವಸಂಸ್ಕಾರಕ್ಕಾಗಿ ಹಾಹಾಕಾರ ಎದ್ದಿದೆ. ರಾಜಧಾನಿ ಬೆಂಗಳೂರಿನಲ್ಲಂತೂ ಮೃತರ ಕುಟುಂಬಗಳಿಗೆ ಶವಸಂಸ್ಕಾರ ಮಾಡುವುದು ನರಕಸದೃಶವಾಗಿದೆ.

ಕೇವಲ ಯಲಹಂಕ ವಲಯದ ಕೋವಿಡ್ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಮಾತ್ರ ಇಲ್ಲಿ ಅವಕಾಶ: ಬಿಬಿಎಂಪಿ ಹೊಸ ರೂಲ್ಸ್​
ಕೇವಲ ಯಲಹಂಕ ವಲಯದ ಕೋವಿಡ್ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಮಾತ್ರ ಇಲ್ಲಿ ಅವಕಾಶ: ಬಿಬಿಎಂಪಿ ಹೊಸ ರೂಲ್ಸ್​
ಸಾಧು ಶ್ರೀನಾಥ್​
|

Updated on:Apr 23, 2021 | 11:17 AM

Share

ಬೆಂಗಳೂರು: ಕೊರೊನಾಗೆ ಆಹುತಿಯಾದವರ ಶವಸಂಸ್ಕಾರಕ್ಕಾಗಿ ಹಾಹಾಕಾರ ಎದ್ದಿದೆ. ರಾಜಧಾನಿ ಬೆಂಗಳೂರಿನಲ್ಲಂತೂ ಮೃತರ ಕುಟುಂಬಗಳಿಗೆ ಶವಸಂಸ್ಕಾರ ಮಾಡುವುದು ನರಕಸದೃಶವಾಗಿದೆ. ಪರಿಸ್ಥಿತಿ ಅರ್ಥಮಾಡಿಕೊಂಡು ತಡವಾಗಿ ಎಚ್ಚೆತ್ತಿರುವ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಖಾಲಿಬಿದ್ದಿರುವ ಸರ್ಕಾರಿ ಜಮೀನನ್ನು ಗುರುತಿಸಿ, ಅಂತಹ ಸ್ಥಳಗಳಲ್ಲಿ ಶವಸಂಸ್ಕಾರ ಮಾಡಬಹುದು ಎಂದು ಸೂಚಿಸಿದೆ. ಇದಕ್ಕೆ ಸ್ಥಳೀಯರೂ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಂದರೆ ನಗರದ ಮತ್ಯಾವುದೋ ಭಾಗದಲ್ಲಿ ಮೃತಪಟ್ಟಿದ್ದರೂ ಇಂತಹ ಜಾಗಕ್ಕೆ ತೆಗೆದುಕೊಂಡು ಶವಸಂಸ್ಕಾರ ಮಾಡಬಹುದು. ಆದರೆ ಈ ಮಧ್ಯೆ, ಯಲಹಂಕದ ಮೇಡಿ ಅಗ್ರಹಾರದಲ್ಲಿರುವ ಬಿಬಿಎಂಪಿ ಚಿತಾಗಾರವು ಅನಿವಾರ್ಯ/ ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದೆ.

ಹಾಗಾಗಿ ಸ್ವತಃ ಬಿಬಿಎಂಪಿಯೇ ನಿರೀಕ್ಷೆಗೂ ಮೀರಿ ಹೆಚ್ಚು ಆ್ಯಂಬುಲೆನ್ಸ್ ಆಗಮಿಸುತ್ತಿರುವ ಹಿನ್ನೆಲೆ ಕೇವಲ ಯಲಹಂಕ ವಲಯದ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಮಾತ್ರ ಅನುವು ಮಾಡಿಕೊಡುವಂತೆ ಮೇಡಿ ಅಗ್ರಹಾರದ ಚಿತಾಗಾರ ಸಿಬ್ಬಂದಿಗೆ ಸೂಚನೆ ನೀಡಿದೆ.

ಯಲಹಂಕ ವಲಯ ಹೊರತುಪಡಿಸಿ ಬರ್ತಿದ್ದ ಆ್ಯಂಬುಲೆನ್ಸ್ ಗೆ ನೋ ಎಂಟ್ರಿ: ಇಷ್ಟು ದಿನ ವೈಟ್ ಫೀಲ್ಡ್, ಮಾರತಹಳ್ಳಿ ಭಾಗಗಳಿಂದ ಆ್ಯಂಬುಲೆನ್ಸ್ ಗಳು ಬರ್ತಿದ್ದವು. ನಿರೀಕ್ಷೆಗೂ ಮೀರಿ ಹೆಚ್ಚು ಆ್ಯಂಬುಲೆನ್ಸ್ ಆಗಮನ ಹಿನ್ನೆಲೆ ಇನ್ನು ಹೆಬ್ಬಾಳ, ಹೆಸರಘಟ್ಟ, ದೇವನಹಳ್ಳಿ, ಯಲಹಂಕದಿಂದ ಬರುವ ಮೃತದೇಹಗಳಿಗಷ್ಟೇ ಇಲ್ಲಿ ಅಂತ್ಯಸಂಸ್ಕಾರ ಎಂದು ಚಿತಾಗಾರ ಸಿಬ್ಬಂದಿ ಹೇಳಿದ್ದಾರೆ.

ಈ ಮಧ್ಯೆ, ನಗರದ ಉತ್ತರ ಭಾಗದಲ್ಲಿರುವ ಸುಮನಹಳ್ಳಿ ಚಿತಾಗಾರದ ಗೇಟ್ ಇನ್ನೂ ಓಪನ್ ಆಗಿಲ್ಲ. ಇದರಿಂದ ಹೊರಗೆ ಆ್ಯಂಬುಲೆನ್ಸ್ ಗಳು ಸಾಲಾಗಿ ನಿಂತಿವೆ. ಹೊಗೆ ಹೋಗುವ ಪೈಪ್ ರಿಪೇರಿ ಕಾರ್ಯ ಹಿನ್ನೆಲೆ ಇಂತಹ ಪರಿಸ್ಥಿತಿ ಎದುರಾಗಿದೆ. ಹೊಗೆ ಪೈಪ್ ರಿಪೇರಿ ಇನ್ನೂ ಮುಗಿದಿಲ್ಲ. ಯಂತ್ರ ರಿಪೇರಿ ಬಳಿಕವೇ ಚಿತಾಗಾರಕ್ಕೆ ಆ್ಯಂಬುಲೆನ್ಸ್ ಎಂಟ್ರಿ ಕೊಡಲಾಗುವುದು ಎಂದು ಅಲ್ಲಿನ ಸಿಬ್ಬಂದಿ ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಶವಸಂಸ್ಕಾರ ಎಂಬುದು ನಗರದಲ್ಲಿ ಕೊರೊನಾ ಕಾಲದಲ್ಲಿ ನರಕಸದೃಶವೇ ಆಗಿದೆ.

ಇದನ್ನು ಓದಿ: ಹೆಣ ಸುಡೋಕು ಹೆಣಗಾಟ ಶುರು? ಬೇಡಿಕೆ ಈಡೇರಿಲ್ಲ ಅಂದರೆ ಹೋರಾಟ ಮಾಡ್ತೀವಿ ಎಂದ ಚಿತಾಗಾರ ಸಿಬ್ಬಂದಿ!

(only yelahanka zone coronavirus dead bodies to be cremated in medi agrahara declares bbmp)

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾಯ್ತು ಕೊರೊನಾ ಸೋಂಕಿತರ ಮರಣ ಪ್ರಮಾಣ; ಅಂತ್ಯಸಂಸ್ಕಾರಕ್ಕೆ 13 ಚಿತಾಗಾರಗಳಿಗೆ ಅನುಮತಿ ನೀಡಿದ ಸರ್ಕಾರ

Published On - 9:56 am, Fri, 23 April 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!